AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Council Meeting: ಹಲವು ವಸ್ತುಗಳ ಜಿಎಸ್​ಟಿ ಭಾರ ಇಳಿಸಿದ ನಿರ್ಮಲಾ ಸೀತಾರಾಮನ್; ಇಲ್ಲಿದೆ ವಿವರ

ಆನ್​ಲೈನ್ ಗೇಮಿಂಗ್, ಕುದುರೆ ರೇಸ್ ಹಾಗೂ ಕ್ಯಾಸಿನೋಗಳ ಮೇಲಿನ ತೆರಿಗೆಯ ಸ್ಲ್ಯಾಬ್ ಅನ್ನು ಶೇ 28ಕ್ಕೆ ಹೆಚ್ಚಿಸಲಾಗಿದೆ. ಕ್ಯಾನ್ಸರ್ ಔಷಧಕ್ಕೆ ಜಿಎಸ್​ಟಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

GST Council Meeting: ಹಲವು ವಸ್ತುಗಳ ಜಿಎಸ್​ಟಿ ಭಾರ ಇಳಿಸಿದ ನಿರ್ಮಲಾ ಸೀತಾರಾಮನ್; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Jul 11, 2023 | 9:09 PM

Share

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಮಂಡಳಿಯ 50ನೇ ಸಭೆಯಲ್ಲಿ (GST Council Meeting) ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಹಲವು ವಸ್ತುಗಳ ತೆರಿಗೆಯಲ್ಲಿ ಭಾರಿ ಇಳಿಕೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, ಬೇಯಿಸದ / ಕರಿಯದ ಸ್ನ್ಯಾಕ್ಸ್​ ಪೊಟ್ಟಣದ (Uncooked/Unfried Extruded Snack Pallets) ಮೇಲಿನ ತೆರಿಗೆಯ ಸ್ಲ್ಯಾಬ್​ ಅನ್ನು ಶೇ 18ರಿಂದ ಶೇ 5ಕ್ಕೆ ಇಳಿಕೆ ಮಾಡಲಾಗಿದೆ. ಕ್ಯಾನ್ಸರ್ ಔಷಧಕ್ಕೆ (Cancer Drug) ಜಿಎಸ್​​ಟಿಯಿಂದ ಸಂಪೂರ್ಣ ವಿನಾಯಿತಿ ಘೋಷಿಸಲಾಗಿದೆ.

ಅದೇ ರೀತಿ, ಮೀನಿನ ಎಣ್ಣೆಯಿಂದ ತಯಾರಿಸಿದ ಪೇಸ್ಟ್, ಕೃತಕ ಆಭರಣ ತಯಾರಿಯಲ್ಲಿ ಬಳಸುವ ಜರಿ ದಾರದ ಮೇಲಿನ ಜಿಎಸ್​​ಟಿ ಸ್ಲ್ಯಾಬ್​ ಅನ್ನೂ ಶೇ 18ರಿಂದ ಶೇ 5ಕ್ಕೆ ಇಳಿಕೆ ಮಾಡಲಾಗಿದೆ. ಆದರೆ ಆನ್​ಲೈನ್ ಗೇಮಿಂಗ್, ಕುದುರೆ ರೇಸ್ ಹಾಗೂ ಕ್ಯಾಸಿನೋಗಳ ಮೇಲಿನ ತೆರಿಗೆಯ ಸ್ಲ್ಯಾಬ್ ಅನ್ನು ಶೇ 28ಕ್ಕೆ ಹೆಚ್ಚಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಖಾಸಗಿ ಸಂಸ್ಥೆಗಳ ಉಪಗ್ರಹ ಉಡಾವಣೆಗೂ ಜಿಎಸ್​ಟಿ ವಿನಾಯಿತಿ

ಖಾಸಗಿ ಸಂಸ್ಥೆಗಳ ಉಪಗ್ರಹ ಉಡಾವಣಾ ಸೇವೆಗಳಿಗೂ ಜಿಎಸ್​ಟಿ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಹಣಕಾಸು ಸಚಿವೆ ಮಾಹಿತಿ ನೀಡಿದರು. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿನ ಚಟುವಟಿಕೆಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.

ಸಿನಿಮಾ ಥಿಯೇಟರ್​​ಗಳಲ್ಲಿಆಹಾರ, ಪಾನೀಯಗಳ ಮೇಲೆ ಶೇ 5 ಜಿಎಸ್​ಟಿ

ಸಿನಿಮಾ ಥಿಯೇಟರ್​​ಗಳಲ್ಲಿ ಮಾರಾಟ ಮಾಡಲಾಗುವ ಆಹಾರ, ಪಾನೀಯಗಳ ಮೇಲೆ ಶೇ 18ರ ಜಿಎಸ್​ಟಿ ವಿಧಿಸುಗುತ್ತಿಲ್ಲ. ಶೇ 5ರಷ್ಟು ಮಾತ್ರವೇ ಜಿಎಸ್​ಟಿ ವಿಧಿಸಲಾಗುತ್ತಿದೆ ಎಂದು ಆದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಸ್ಪಷ್ಟನೆ ನೀಡಿದರು. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಹಣಕಾಸು ಅಕ್ರಮ ವರ್ಗಾವಣೆ ತಡೆ ಕಾಯ್ದೆಗೂ (PMLA) ಜಿಎಸ್​ಟಿ ನಿಯಮಕ್ಕೂ ಸಂಬಂಧವಿಲ್ಲ. ಜಿಎಸ್​​ಟಿಎನ್​ ಮಾಹಿತಿಯನ್ನು ಪಿಎಂಎಲ್​ಎ ಅಡಿ ತರುವ ಅಧಿಸೂಚನೆ ತನಿಖಾ ಸಂಸ್ಥೆಗಳನ್ನು ಬಲಪಡಿಸುವ ಕ್ರಮವಷ್ಟೇ. ತನಿಖಾ ಸಂಸ್ಥೆಗಳಿಗೆ ತೆರಿಗೆ ವಂಚನೆಯ ಮಾಹಿತಿ ಈ ಹಿಂದೆ ದೊರೆಯುತ್ತಿರಲಿಲ್ಲ ಎಂದು ತಿಳಿಸಿದರು.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:35 pm, Tue, 11 July 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್