AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

58 ಉನ್ನತ ದರ್ಜೆಯ ಕಂಪನಿ ಸಿಇಒಗಳು ಭಾರತೀಯ ಮೂಲದವರು: ನಿರ್ಮಲ ಸೀತಾರಾಮನ್

ಟಾಪ್ 500 ಉನ್ನತ ದರ್ಜೆಯ ಕಂಪನಿಗಳ ಪೈಕಿ 58 ಕಂಪನಿಗಳಲ್ಲಿ ಭಾರತೀಯ ಮೂಲದ ವ್ಯಕ್ತಿಗಳು ಸಿಇಒ ಆಗಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.

58 ಉನ್ನತ ದರ್ಜೆಯ ಕಂಪನಿ ಸಿಇಒಗಳು ಭಾರತೀಯ ಮೂಲದವರು: ನಿರ್ಮಲ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್
TV9 Web
| Updated By: Rakesh Nayak Manchi|

Updated on:Sep 12, 2022 | 4:41 PM

Share

ದೆಹಲಿ: ಉನ್ನತ ದರ್ಜೆಯ ಕಂಪನಿಗಳ ಪೈಕಿ 58 ಕಂಪನಿಗಳಲ್ಲಿ ಭಾರತೀಯ ಮೂಲದ ವ್ಯಕ್ತಿಗಳು ಸಿಇಒ ಆಗಿದ್ದಾರೆ. ಟಾಪ್ 500 ಕಂಪನಿಗಳ ಪಟ್ಟಿಯ ಪ್ರಕಾರ ಭಾರತೀಯ ಸಿಇಒಗಳ ಸಂಖ್ಯೆಯು ಯುನೈಟೆಡ್ ಸ್ಟೇಟ್ಸ್‌ನ ನಂತರದ ಸ್ಥಾನದಲ್ಲಿದೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ. ಕಾಂಚೀಪುರಂನಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ, ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್‌ನ ಘಟಿಕೋತ್ಸವ ಸಮಾರಂಭದಲ್ಲಿ ಅವರು ಹೇಳಿದರು.

ಭಾರತದಲ್ಲಿ ಉನ್ನತ ಶಿಕ್ಷಣವು ಅತ್ಯುತ್ತಮ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಉತ್ಪಾದಿಸುತ್ತಿದೆ. ಭಾರತೀಯ ಮೂಲದ ಹಲವಾರು ಸಿಇಒಗಳನ್ನು ಜಾಗತಿಕ ಕಂಪನಿಗಳು ನೇಮಕ ಮಾಡಿಕೊಳ್ಳುತ್ತಿವೆ. 58 ಉನ್ನತ ದರ್ಜೆಯ ಕಂಪನಿ ಸಿಇಒಗಳು ಭಾರತೀಯ ಮೂಲದವರಾಗಿದ್ದಾರೆ ಎಂದರು.

“ಈ ಸಂಸ್ಥೆಗಳು 1 ಟ್ರಿಲಿಯನ್ ಆದಾಯವನ್ನು ಹೊಂದಿದ್ದು, 4 ಟ್ರಿಲಿಯನ್ ವಹಿವಾಟು ಹೊಂದಿದೆ. 58 ಭಾರತದ ವಿದ್ಯಾವಂತ ಸಿಇಒಗಳು ಈ ಪ್ರಮಾಣದ ಕಾರ್ಪೊರೇಟ್ ಗಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಆದರೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಕೆಲಸ ಮಾಡಬೇಕಾಗಿಲ್ಲ ಎಂದು ಅರ್ಥವಲ್ಲ. ಇಂತಹ ಸಾಹಸಗಳನ್ನು ಮುಂದುವರಿಸಲು ನಾವು ವ್ಯವಸ್ಥೆಯನ್ನು ಮುಂದುವರಿಸಬೇಕು” ಎಂದರು.

ಜಾಗತಿಕ ಸಂಸ್ಥೆಗಳ ನಿರ್ವಹಣೆಯಲ್ಲಿ ಭಾರತವು ಅಮೆರಿಕದ ನಂತರದ ಸ್ಥಾನದಲ್ಲಿದೆ ಎಂದು ತಮ್ಮ ಭಾಷಣದಲ್ಲಿ ಸೇರಿಸಿದ ವಿತ್ತ ಸಚಿವರು, “ಸಿಲಿಕಾನ್ ವ್ಯಾಲಿ ಸ್ಟಾರ್ಟ್ಅಪ್​ಗಳಲ್ಲಿ 25 ಪ್ರತಿಶತವನ್ನು ಭಾರತೀಯರು ನಿರ್ವಹಿಸುತ್ತಿದ್ದಾರೆ ಎಂದು ಹೆಮ್ಮೆಯಿಂದ ನಿಮ್ಮ ಕಾಲರ್ ಅನ್ನು ಮೇಲಕ್ಕೆತ್ತಿ” ಎಂದರು.

ಭಾರತದ ದುಡಿಯುವ ಜನಸಂಖ್ಯೆಯು 2028ರಲ್ಲಿ ಚೀನಾವನ್ನು ಹಿಂದಿಕ್ಕಲಿದೆ, 2019ರಿಂದ ವಿಶ್ವಸಂಸ್ಥೆಯ ಜನಸಂಖ್ಯೆಯ ಡೇಟಾವನ್ನು ಉಲ್ಲೇಖಿಸಿ ಸೀತಾರಾಮನ್ ಹೇಳಿದರು. “ಆ ದುಡಿಯುವ ವಯಸ್ಸಿನ ಜನಸಂಖ್ಯೆಯು 2036ರ ವೇಳೆಗೆ ಇಡೀ ಜನಸಂಖ್ಯೆಯ ಶೇ.65ರ ಮಟ್ಟವನ್ನು ತಲುಪಲಿದೆ” ಎಂದರು.

ದುಡಿಯುವ ವರ್ಗ ಹೆಚ್ಚಾದರೆ ಭಾರತದ ಜಿಡಿಪಿ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ. “ದುಡಿಯುವ ವರ್ಗಕ್ಕೆ ತರಬೇತಿ ಮತ್ತು ಸಮಾನ ಅವಕಾಶಗಳನ್ನು ನೀಡಿದಾಗ ಮಾತ್ರ ಲಿಂಗ ಮತ್ತು ವರ್ಗವನ್ನು ಲೆಕ್ಕಿಸದೆ ಅವರು ದೇಶದ ಬೆಳವಣಿಗೆಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ವಿತ್ತ ಸಚಿವರು ಹೇಳಿದರು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Mon, 12 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!