AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡಿತರ ವ್ಯವಸ್ಥೆಯಲ್ಲಿ 58 ಲಕ್ಷ ನಕಲಿ ರೇಶನ್ ಕಾರ್ಡ್ ಪತ್ತೆ; ಡಿಜಿಟಲೀಕರಣದಿಂದ ಇನ್ನೂ ಹಲವು ಲಾಭ

Digitisation drive effect in PDS: ಪಬ್ಲಿಕ್ ಡಿಸ್ಟ್ರಿಬ್ಯೂಶನ್ ಸಿಸ್ಟಂ ಅಥವಾ ಪಿಡಿಎಸ್ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸಿದ ಬಳಿಕ ಪಡಿತರ ಸೋರಿಕೆ ಕಡಿಮೆ ಆಗಿದೆ. 20.4 ರೇಶನ್ ಕಾರ್ಡ್​ಗಳ ಪೈಕಿ 58 ಲಕ್ಷ ನಕಲಿ ರೇಶನ್ ಕಾರ್ಡ್​ಗಳು ಪತ್ತೆಯಾಗಿವೆ. ಕೇಂದ್ರ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ ಶೇ. 64ರಷ್ಟು ರೇಷನ್ ಕಾರ್ಡ್​ದಾರರ ಇಕೆವೈಸಿ ನಡೆದಿದೆ.

ಪಡಿತರ ವ್ಯವಸ್ಥೆಯಲ್ಲಿ 58 ಲಕ್ಷ ನಕಲಿ ರೇಶನ್ ಕಾರ್ಡ್ ಪತ್ತೆ; ಡಿಜಿಟಲೀಕರಣದಿಂದ ಇನ್ನೂ ಹಲವು ಲಾಭ
ನ್ಯಾಯಬೆಲೆ ಅಂಗಡಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 21, 2024 | 2:25 PM

Share

ನವದೆಹಲಿ, ನವೆಂಬರ್ 21: ಡಿಜಿಟಲ್ ಆರ್ಥಿಕತೆಯಲ್ಲಿ ಸೋರಿಕೆಗಳು ಕಡಿಮೆ. ಭಾರತದಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಕೆ ಹೆಚ್ಚಾದಂತೆ ಆಡಳಿತ ಮತ್ತು ಹಣಕಾಸು ವ್ಯವಸ್ಥೆಯ ನಿರ್ವಹಣೆ ಹೆಚ್ಚು ಸಮರ್ಪಕವಾಗಿ ಆಗುತ್ತಿದೆ. ಡಿಬಿಟಿ ಮೂಲಕ ನೇರ ಹಣ ವರ್ಗಾವಣೆ ವಿಧಾನ ಇದಕ್ಕೆ ಉದಾಹರಣೆ. ಹಾಗೆಯೇ, ಪಡಿತರ ವಿತರಣೆ ವ್ಯವಸ್ಥೆಯಲ್ಲೂ ಡಿಜಿಟಲೀಕರಣವು ಗಮನಾರ್ಹ ಪರಿವರ್ತನೆ ತಂದಿದೆ. ಕೇಂದ್ರ ಆಹಾರ ಸಚಿವಾಲಯ ನಿನ್ನೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ 58 ಲಕ್ಷ ನಕಲಿ ರೇಷನ್ ಕಾರ್ಡ್​ಗಳು ಪತ್ತೆಯಾಗಿವೆಯಂತೆ.

ದೇಶಾದ್ಯಂತ 20 ಕೋಟಿಗೂ ಅಧಿಕ ರೇಶನ್ ಕಾರ್ಡ್​ಗಳು, 80 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ಪಡಿತರ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲಾ ರೇಶನ್ ಕಾರ್ಡ್​ಗಳಿಗೂ ಆಧಾರ್ ಅಥೆಂಟಿಕೇಶನ್ ಮತ್ತು ಇಕೆವೈಸಿ ಮಾಡಿಸಲಾಯಿತು. ಬಹುತೇಕ ಎಲ್ಲಾ ಪಡಿತರ ಚೀಟಿಗಳ ಡಿಜಿಟಲೀಕರಣ ಮಾಡಲಾಯಿತು. ಶೇ. 99.8ರಷ್ಟು ರೇಶನ್ ಕಾರ್ಡ್​ಗಳ ಆಧಾರ್ ದೃಢೀಕರಣ ಸಾಧ್ಯವಾಗಿದೆ. ಶೇ. 98.7ರಷ್ಟು ಫಲಾನುಭವಿಗಳ ಬಯೋಮೆಟ್ರಿಕ್ ಅಥೆಂಟಿಕೇಶನ್ ನಡೆದಿದೆ.

ಇದನ್ನೂ ಓದಿ: ಜೊಮಾಟೋದಲ್ಲಿ ಈ ಹುದ್ದೆಗೆ ಒಂದು ವರ್ಷ ಸಂಬಳ ಇಲ್ಲ; ಅಭ್ಯರ್ಥಿಯೇ 20 ಲಕ್ಷ ರು ಕೊಡಬೇಕಂತೆ… ಆದಾಗ್ಯೂ ಸಲ್ಲಿಕೆಯಾಗಿವೆ ಸಖತ್ ಅರ್ಜಿಗಳು

ದೇಶಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ 5.33 ಲಕ್ಷ ಇ-ಪಿಒಎಸ್ ಸಾಧನಗಳನ್ನು ಅಳವಡಿಸಲಾಗಿದೆ. ಇಲ್ಲಿ ಪಡಿತರ ವಿತರಣೆ ವೇಳೆ ಆಧಾರ್ ದೃಢೀಕರಣ ಮಾಡಲು ಸಾಧ್ಯವಾಗಿದೆ. ಸಚಿವಾಲಯದ ಮಾಹಿತಿ ಪ್ರಕಾರ, ಶೇ. 98ರಷ್ಟು ಆಹಾರಧಾನ್ಯಗಳ ವಿತರಣೆಗೆ ಆಧಾರ್ ದೃಢೀಕರಣ ಪಡೆಯಲಾಗುತ್ತಿದೆ. ಇದರಿಂದ ಫಲಾನುಭವಿಗಳಲ್ಲದವರು ಪಡಿತರ ವ್ಯವಸ್ಥೆ ದುರುಪಯೋಗಪಡಿಸಿಕೊಳ್ಳುವುದು ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ.

ಸರ್ಕಾರದ ಇಕೆವೈಸಿ ಯೋಜನೆಯು ಇನ್ನೂ ಚಾಲನೆಯಲ್ಲಿದೆ. ಪಡಿತರ ಫಲಾನುಭವಿಗಳ ಪೈಕಿ ಶೇ. 64 ಮಂದಿ ಇಕೆವೈಸಿಯನ್ನು ಯಶಸ್ವಿಯಾಗಿ ಮಾಡಿದ್ದಾರೆ. ನ್ಯಾಯಬೆಲೆ ಅಂಗಡಿಗಳಲ್ಲಿ ಉಳಿದ ಫಲಾನುಭವಿಗಳಿಂದ ಇಕೆವೈಸಿ ಪಡೆಯುವ ಪ್ರಯತ್ನ ನಡೆಯುತ್ತಿದೆ.

ಇದನ್ನೂ ಓದಿ: ಅದಾನಿ ಸೇರಿ 8 ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆ ಆರೋಪ ದಾಖಲು; ಗೌತಮ್, ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್

ರೇಷನ್ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡಿರುವುದು ಸೋರಿಕೆಯನ್ನು ನಿಗ್ರಹಿಸುವುದರ ಜೊತೆಗೆ ಇನ್ನೂ ಹಲವು ಲಾಭವನ್ನೂ ನೀಡಿದೆ. ‘ಒನ್ ನೇಶನ್ ಒನ್ ರೇಶನ್ ಕಾರ್ಡ್’ ಸ್ಕೀಮ್​ನಲ್ಲಿ ಈಗ ಪಡಿತರ ಫಲಾನುಭವಿಗಳು ದೇಶದ ಯಾವುದೇ ನ್ಯಾಯಬೆಲೆ ಅಂಗಡಿಗೆ ಹೋಗಿ ಪಡಿತರ ಪಡೆಯುವುದು ಸಾಧ್ಯವಾಗಿದೆ. ಆಧಾರ್ ದೃಢೀಕರಣ ಮೂಲಕ ರೇಶನ್ ನೀಡುವ ವ್ಯವಸ್ಥೆ ಬಂದ ಬಳಿಕ ಇದು ಸಾಧ್ಯವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ