AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5G Spectrum: 2022ರ ಏಪ್ರಿಲ್ ಅಥವಾ ಮೇ ವೇಳೆಗೆ 5G ತರಂಗಾಂತರ ಹರಾಜು ನಿರೀಕ್ಷೆ

5ಜಿ ತರಂಗಾಂತರ ಹರಾಜು 2022ರ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

5G Spectrum: 2022ರ ಏಪ್ರಿಲ್ ಅಥವಾ ಮೇ ವೇಳೆಗೆ 5G ತರಂಗಾಂತರ ಹರಾಜು ನಿರೀಕ್ಷೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 11, 2021 | 2:42 PM

Share

ಮುಂದಿನ ವರ್ಷ, ಅಂದರೆ 2022ರ ಏಪ್ರಿಲ್ ಅಥವಾ ಮೇ ವೇಳೆಗೆ 5G ತರಂಗಾಂತರ ಹರಾಜು ಮಾಡುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ ಎಂದು ಸಂಪರ್ಕ, ಐಟಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ. “ಸದ್ಯಕ್ಕೆ ಟೆಲಿಕಾಂ ನಿಯಂತ್ರಕವು ಅದರ ಮೇಲೆ ಕಾರ್ಯ ನಿರ್ವಹಿಸುತ್ತಿದೆ. ಒಮ್ಮೆ ಆ ಕಡೆಯಿಂದ ತಮ್ಮ ಶಿಫಾರಸುಗಳನ್ನು ಕಳುಹಿಸಿದರೆ ನಾವು ಹರಾಜನ್ನು ಪ್ರಾರಂಭಿಸಲು ಸಾಧ್ಯವಾಗುತ್ತದೆ,” ಎಂದು ಟೈಮ್ಸ್ ನೌ ಸಮಾವೇಶ 2021ರಲ್ಲಿ ಸಚಿವರು ಹೇಳಿದ್ದಾರೆ. ಟೆಲಿಕಾಂ ನಿಯಂತ್ರಕವು ತನ್ನ ಶಿಫಾರಸುಗಳನ್ನು ಫೆಬ್ರವರಿ ಅಂತ್ಯದೊಳಗೆ ಅಥವಾ ಮುಂದಿನ ವರ್ಷದ ಮಾರ್ಚ್ ಆರಂಭದಲ್ಲಿ ಕಳುಹಿಸುವ ನಿರೀಕ್ಷೆ ದೂರಸಂಪರ್ಕ ಇಲಾಖೆಗೆ (DoT) ಇದೆ ಎಂದು ವೈಷ್ಣವ್ ಹೇಳಿದ್ದಾರೆ.

“ಟ್ರಾಯ್ ಸಮಾಲೋಚನೆಯು ಸಾಕಷ್ಟು ಸಮಗ್ರವಾಗಿದೆ ಮತ್ತು ದೊಡ್ಡ ಕ್ರಮವಾಗಿದೆ,” ಎಂದು ಅವರು ವಿವರಿಸಿದ್ದಾರೆ. ಈ ಮಧ್ಯೆ, ಟೆಲಿಕಾಂ ಕ್ಷೇತ್ರದ ಲಾಭದಾಯಕತೆಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಈ ವಲಯದಲ್ಲಿ ವ್ಯಾಪಕವಾದ ದಾವೆಗಳಿಗೆ ಮೂಲ ಕಾರಣ ನಿಯಂತ್ರಣದ ಸಂಕೀರ್ಣ ರಚನೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.

“ಪ್ರಧಾನಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ, ನೀತಿಯ ಆದ್ಯತೆಯು ಈಗ ನಿಯಂತ್ರಕ ರಚನೆಯನ್ನು ಸರಳಗೊಳಿಸುವ ಕಡೆಗೆ ಇರುತ್ತದೆ ಎಂಬುದನ್ನು ನೀವು ನೋಡುತ್ತೀರಿ,” ಎಂದು ಅವರು ಹೇಳಿದ್ದಾರೆ. ಈಗಾಗಲೇ ಘೋಷಿಸಲಾದ ಸುಧಾರಣೆಗಳ ಸಂಪೂರ್ಣ ಸಾಮರ್ಥ್ಯ ಮತ್ತು ಸುಧಾರಣೆಗಳು ಮುಂದಿನ ಎರಡು- ಮೂರು ವರ್ಷಗಳಲ್ಲಿ ಸಾಕಾರಗೊಳ್ಳಲಿವೆ ಎಂದು ವೈಷ್ಣವ್ ತಿಳಿಸಿದ್ದಾರೆ.

ಇದನ್ನೂ ಓದಿ: 5ಜಿ ತರಂಗಾಂತರ: ದೆಹಲಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಜೂಹಿ ಚಾವ್ಲಾ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ