Digital Banking Units: 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ 75 ಡಿಜಿಟಲ್ ಬ್ಯಾಂಕಿಂಗ್ ಯೂನಿಟ್ ಉದ್ಘಾಟನೆ

75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ದೇಶದ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಯೂನಿಟ್​ಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ವರದಿ ಆಗಿದೆ.

Digital Banking Units: 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ 75 ಡಿಜಿಟಲ್ ಬ್ಯಾಂಕಿಂಗ್ ಯೂನಿಟ್ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
| Updated By: Srinivas Mata

Updated on:May 06, 2022 | 12:04 PM

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಗಸ್ಟ್ 15ನೇ ತಾರೀಕಿನಂದು 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಯೂನಿಟ್​ಗಳನ್ನು (DBUs) ಉದ್ಘಾಟನೆ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಘಟಕಗಳು ಒಟ್ಟಾರೆಯಾಗಿ ಕಾಗದರಹಿತವಾಗಿ ಇರುತ್ತವೆ. ಮತ್ತು ಇವುಗಳನ್ನು ಡಿಜಿಟಲ್ ಆರ್ಥಿಕ ಸಾಕ್ಷರತಾ ಕೇಂದ್ರಗಳನ್ನಾಗಿ ಬಳಸಿಕೊಳ್ಳಲಾಗುವುದು. ಕೇಂದ್ರದಿಂದ 75 ಜಿಲ್ಲೆಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಮೂಲಸೌಕರ್ಯ ಒದಗಿಸಲು ಹಾಗೂ ಡಿಜಿಟಲ್ ಬ್ಯಾಂಕಿಂಗ್ ಯೂನಿಟ್​ಗಳ ಸಿಬ್ಬಂದಿಗೆ ತರಬೇತಿ ನೀಡುವಂತೆ ಬ್ಯಾಂಕ್​ಗಳಿಗೆ ತಿಳಿಸಲಾಗಿದೆ ಎಂದು ಮೇ 6ನೇ ತಾರೀಕಿನಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಸರ್ಕಾರದಿಂದ ಗುರುತಿಸಿದ ಜಿಲ್ಲೆಗಳಲ್ಲಿ ಲೇಹ್, ಶ್ರೀನಗರ್, ಐಜ್​ವಾಲ್, ಕೋಟಾ, ನೈನಿತಾಲ್, ಲಖನೌ ಒಳಗೊಂಡಿದೆ. ಆಯ್ದ ಹಣಕಾಸು ಸಂಸ್ಥೆಗಳು ಈಗಾಗಲೇ ಕೆಲಸ ಆರಂಭಿಸಿದ್ದು, 2022ರ ಜುಲೈನಲ್ಲಿ ಕಾರ್ಯಾರಂಭ ಮಾಡಲಿದೆ.

ಡಿಜಿಟಲ್ ಬ್ಯಾಂಕಿಂಗ್ ಯೂನಿಟ್​ಗಳನ್ನು ಸ್ಥಾಪಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಏಪ್ರಿಲ್ 8ನೇ ತಾರೀಕಿನಂದು ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ. ಬಜೆಟ್​ನಲ್ಲಿ ಘೋಷಣೆ ಮಾಡಿದ ಬೆನ್ನಿಗೆ ತೆಗೆದುಕೊಂಡಿರುವ ತೀರ್ಮಾನ ಇದು. ಡಿಬಿಯು ಎಂಬುದು ವಿಶೇಷವಾಗಿ ರೂಪುಗೊಂಡ ಬಿಜಿನೆಸ್ ಯೂನಿಟ್/ಹಬ್. ಅಲ್ಲಿ ಕೆಲವು ಡಿಜಿಟಲ್ ಮೂಲಸೌಕರ್ಯ ಇರುತ್ತದೆ. ಡಿಜಿಟಲ್ ಬ್ಯಾಂಕಿಂಗ್ ಉತ್ಪನ್ನಗಳು ಹಾಗೂ ಸೇವೆಗಳನ್ನು ಒದಗಿಸುವುದಕ್ಕೆ ಬೇಕಾದಷ್ಟು ಸವಲತ್ತು ಇರುತ್ತದೆ. ಡಿಬಿಯು ಉದ್ದೇಶ ಏನೆಂದರೆ, ಡಿಜಿಟಲ್ ಹಣಕಾಸು ಸೇವೆ ವಿಸ್ತರಣೆ ಮತ್ತು ಆರ್ಥಿಕ ಒಳಗೊಳ್ಳುವಿಕೆ.

ಮಾರ್ಗದರ್ಶಿ ಸೂತ್ರದ ಪ್ರಕಾರ, ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್​ಗಳಾಗಿದ್ದು, ಈ ಹಿಂದಿನ ಡಿಜಿಟಲ್ ಬ್ಯಾಂಕಿಂಗ್ ಅನುಭವ ಇದ್ದಲ್ಲಿ ಟಯರ್​ 1ರಿಂದ ಟಯರ್ 6 ಕೇಂದ್ರಗಳಲ್ಲಿ ಡಿಬಿಯುಗಳನ್ನು ತೆರೆಯಲು ಅನುಮತಿಸಲಾಗುತ್ತದೆ. ಪ್ರತಿ ಪ್ರಕರಣದಲ್ಲೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅನುಮತಿ ಬೇಕಾಗುವುದಿಲ್ಲ. ಬ್ಯಾಂಕ್​ಗಳ ಡಿಬಿಯುಗಳನ್ನು ಬ್ಯಾಂಕ್​ಗಳ ಔಟ್​ಲೆಟ್​ಗಳಂತೆ ಪರಿಗಣಿಸಲಾಗುತ್ತದೆ ಎಂದು ಆರ್​ಬಿಐ ಹೇಳಿದೆ. ಈಗಿರುವ ಬ್ಯಾಂಕಿಂಗ್ ಔಟ್​ಲೆಟ್​ಗಿಂತ ಫಾರ್ಮಾಟ್​ನಲ್ಲಿ, ರಚನೆಯಲ್ಲಿ ಪ್ರತ್ಯೇಕವಾಗಿರುತ್ತದೆ. ಡಿಜಿಟಲ್ ಬ್ಯಾಂಕಿಂಗ್ ಬಳಕೆದಾರರಿಗೆ ಸೂಕ್ತವಾಗಿರುತ್ತದೆ.

ಇನ್ನೂ ಹೆಚ್ಚಿನ ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬ್ಯಾಂಕಿಂಗ್ ಕ್ಷೇತ್ರ ಸುಧಾರಣೆಗೆ ಕೇಂದ್ರ ಮಹತ್ವದ ತೀರ್ಮಾನ, 6 ವರ್ಷಗಳಲ್ಲಿ 5 ಲಕ್ಷ ಕೋಟಿ ಸಾಲ ವಸೂಲು: ನಿರ್ಮಲಾ ಸೀತಾರಾಮನ್

Published On - 12:03 pm, Fri, 6 May 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು