AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar PAN Linking: ಆಧಾರ್ ಮತ್ತು ಪ್ಯಾನ್​ನಲ್ಲಿ ಹೆಸರು ಇತ್ಯಾದಿ ಮ್ಯಾಚ್ ಆಗದೇ ಲಿಂಕ್ ಆಗುತ್ತಿಲ್ಲವಾ? ಐಟಿ ಇಲಾಖೆ ಕೊಟ್ಟ ಸಲಹೆಗಳಿವು

How To Update Aadhaar and PAN Card Data: ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್​ನಲ್ಲಿ ಹೆಸರು, ಜನ್ಮದಿನಾಂಕ, ಲಿಂಗ ಇತ್ಯಾದಿ ಡೆಮೋಗ್ರಾಫಿಕ್ ಮಾಹಿತಿಗಳು ಸರಿಹೊಂದದೇ, ಅವೆರಡೂ ಲಿಂಕ್ ಆಗುತ್ತಿಲ್ಲ ಎಂಬ ದೂರುಗಳಿವೆ. ಇಂಥ ಸಂದರ್ಭದಲ್ಲಿ ಏನು ಮಾಡಬೇಕು ಎಂದು ಐಟಿ ಇಲಾಖೆ ಕೆಲ ಸಲಹೆ ಕೊಟ್ಟಿದೆ...

Aadhaar PAN Linking: ಆಧಾರ್ ಮತ್ತು ಪ್ಯಾನ್​ನಲ್ಲಿ ಹೆಸರು ಇತ್ಯಾದಿ ಮ್ಯಾಚ್ ಆಗದೇ ಲಿಂಕ್ ಆಗುತ್ತಿಲ್ಲವಾ? ಐಟಿ ಇಲಾಖೆ ಕೊಟ್ಟ ಸಲಹೆಗಳಿವು
ಆಧಾರ್ ಪ್ಯಾನ್ ನಂಬರ್ ಲಿಂಕ್
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Jul 06, 2026 | 10:51 AM

Share

ಆಧಾರ್ ಮತ್ತು ಪ್ಯಾನ್ ನಂಬರ್ ಲಿಂಕ್ ಮಾಡಲು (Aadhaar and Pan Linking) ಜೂನ್ 30 ಕೊನೆಯ ದಿನ. ಆಧಾರ್ ಜೊತೆ ಲಿಂಕ್ ಆಗಿಲ್ಲದ ಪ್ಯಾನ್ ನಂಬರ್​ಗಳು ನಿಷ್ಕ್ರಿಯಗೊಳ್ಳುತ್ತವೆ. ನೀವು ಐಟಿ ರಿಟರ್ನ್ ಫೈಲ್ ಮಾಡಲು ಇತ್ಯಾದಿ ಕಾರ್ಯಗಳಿಗೆ ಈ ನಿಷ್ಕ್ರಿಯ ಪ್ಯಾನ್ ನಂಬರ್ ಬಳಸುತ್ತಿದ್ದರೆ ಆಗ ಸಮಸ್ಯೆ ತಲೆದೋರುತ್ತದೆ. ಡೆಡ್​ಲೈನ್ ಸನಿಹ ಬಂದಿದ್ದರೂ ಬಹಳ ಮಂದಿ ಪ್ಯಾನ್ ಕಾರ್ಡ್​ದಾರರು ಆಧಾರ್​ಗೆ ಲಿಂಕ್ ಮಾಡಿಸಿಲ್ಲ. ನಾನಾ ಕಾರಣಕ್ಕೆ ಆಧಾರ್ ಮತ್ತು ಪ್ಯಾನ್ ಲಿಂಕ್ ಆಗುತ್ತಿಲ್ಲ. ಇಲಾಖೆಯ ದೋಷದಿಂದಲೇ ಒಂದೇ ಪ್ಯಾನ್ ನಂಬರ್ ಒಬ್ಬರಿಗಿಂತ ಹೆಚ್ಚು ಮಂದಿಗೆ ಅಲಾಟ್ ಆಗಿಹೋಗಿರುವುದು, ಪ್ಯಾನ್ ಮತ್ತು ಆಧಾರ್ ದತ್ತಾಂಶದಲ್ಲಿ ಹೊಂದಾಣಿಕೆ ಇಲ್ಲದಿರುವುದು ಇತ್ಯಾದಿ ಕಾರಣಕ್ಕೆ ಲಿಂಕ್ ಆಗುತ್ತಿಲ್ಲ ಎಂಬ ದೂರುಗಳಿವೆ. ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್​ನಲ್ಲಿ ಹೆಸರು, ಜನ್ಮದಿನಾಂಕ, ಲಿಂಗ ಇತ್ಯಾದಿ ಡೆಮೋಗ್ರಾಫಿಕ್ ಮಾಹಿತಿಗಳು ಸರಿಹೊಂದೇ, ಅವೆರಡೂ ಲಿಂಕ್ ಆಗುತ್ತಿಲ್ಲ ಎನ್ನುವ ದೂರುಗಳೂ ಸಾಕಷ್ಟಿವೆ. ಇಂಥ ಒಂದು ಸಂದರ್ಭದಲ್ಲಿ ಏನು ಮಾಡಬೇಕು? ಆದಾಯ ತೆರಿಗೆ ಇಲಾಖೆ ಇದಕ್ಕೆ ಕೆಲ ಸಲಹೆ ನೀಡಿದೆ.

ಹೆಸರು ಇತ್ಯಾದಿ ವಿವರದಲ್ಲಿ ವ್ಯತ್ಯಾಸ ಇದ್ದರೆ ಏನು ಮಾಡಬೇಕು?

ಪ್ಯಾನ್ ಕಾರ್ಡ್​ನಲ್ಲಿರುವ ಮಾಹಿತಿ ಅಪ್​ಡೇಟ್ ಮಾಡುವುದು ಹೀಗೆ….

ಪ್ಯಾನ್ ಕಾರ್ಡ್​ನಲ್ಲಿರುವ ಮಾಹಿತಿಯನ್ನು ಆಧಾರ್​ಗೆ ಹೊಂದಿಕೆಯಾಗುವಂತೆ ಬದಲಾಯಿಸಬೇಕೆಂದಿದ್ದರೆ ಪ್ಯಾನ್​ನ ಪೋರ್ಟಲ್​ಗಳಲ್ಲಿ ಅವಕಾಶ ಇದೆ. ಎರಡು ಪೋರ್ಟಲ್​ಗಳ ಯುಆರ್​ಎಲ್ ಇಲ್ಲಿ ಕೆಳಕಾಣಿಸಿದಂತಿವೆ:

  • ಪ್ರೋಟಿಯಾನ್ ಪೋರ್ಟಲ್: www.onlineservices.nsdl.com/paam/endUserRegisterContact.html
  • ಯುಟಿಐಐಟಿಎಸ್​ಎಲ್ ಪೋರ್ಟಲ್: www.pan.utiitsl.com

ಆಧಾರ್ ಕಾರ್ಡ್​ನಲ್ಲಿರುವ ಮಾಹಿತಿ ಅಪ್​ಡೇಟ್ ಮಾಡುವುದು ಹೀಗೆ….

ಪ್ಯಾನ್ ಕಾರ್ಡ್​ನಲ್ಲಿರುವ ನಿಮ್ಮ ವಿವರ ಸರಿಯಾಗಿದ್ದು ಆಧಾರ್ ಕಾರ್ಡ್​ನಲ್ಲಿ ಮಾಹಿತಿ ಬದಲಾಯಿಸಬೇಕೆಂದಿದ್ದರೆ ಯುಐಡಿಎಐ ವೆಬ್​ಸೈಟ್​ನಲ್ಲಿ ಅವಕಾಶ ಇದೆ. ಈ ವೆಬ್ ತಾಣಕ್ಕೆ ಲಾಗಿನ್ ಆಗಿ ನೀವು ಡೆಮೋಗ್ರಾಫಿಕ್ ಮಾಹಿತಿ ಪರಿಷ್ಕರಿಸಬಹುದು.

ಇದನ್ನೂ ಓದಿ: PM Kisan eKYC: ಪಿಎಂ ಕಿಸಾನ್ ಸ್ಕೀಮ್: ಇಕೆವೈಸಿ ಅಪ್​ಡೇಟ್ ಬಹಳ ಸುಲಭ; ಇಲ್ಲಿವೆ ವಿವಿಧ ವಿಧಾನಗಳು

ಪ್ಯಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್​ನಲ್ಲಿರುವ ಮಾಹಿತಿ ಪರಿಷ್ಕರಿಸಿದ ಬಳಿಕ ಆದಾಯ ತೆರಿಗೆ ಇಲಾಖೆಯ ಇಫೈಲಿಂಗ್ ಪೋರ್ಟಲ್​ಗೆ ಹೋಗಿ ಪ್ಯಾನ್ ಮತ್ತು ಆಧಾರ್ ನಂಬರ್ ಲಿಂಕ್ ಮಾಡಲು ಪ್ರಯತ್ನಿಸಬಹುದು. ಈ ಪೋರ್ಟಲ್​ನ ಲಿಂಕ್ ಇಲ್ಲಿದೆ:

ಐಟಿ ಪೋರ್ಟಲ್​ನಲ್ಲಿ ಆಧಾರ್ ಮತ್ತು ಪ್ಯಾನ್ ಲಿಂಕ್ ಮಾಡಲು ಇನ್ನೂ ಆಗುತ್ತಿಲ್ಲ ಎಂದರೆ….

ನೀವು ಪ್ಯಾನ್ ಮತ್ತು ಆಧಾರ್​ನಲ್ಲಿರುವ ಡೆಮಾಗ್ರಾಫಿಕ್ ಮಾಹಿತಿ ಸರಿಹೊಂದುವಂತೆ ಪರಿಷ್ಕರಿಸಿದ ಬಳಿಕವೂ ಆದಾಯ ತೆರಿಗೆ ಪೋರ್ಟಲ್​ನಲ್ಲಿ ಲಿಂಕ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದಲ್ಲಿ ನೇರವಾಗಿ ಪ್ಯಾನ್ ಸೆಂಟರ್​ಗೆ ಹೋಗಿ ಪ್ರಯತ್ನಿಸಬಹುದು.

ಪ್ಯಾನ್ ಸೇವಾ ನೀಡುಗರ ಯಾವುದಾದರೂ ಒಂದು ಕೇಂದ್ರಕ್ಕೆ ಹೋಗಿ ಅಲ್ಲಿ ಬಯೋಮೆಟ್ರಿಕ್ ಅಥೆಂಟಿಕೇಶನ್ ಮೂಲಕ ಆಧಾರ್ ಮತ್ತು ಪ್ಯಾನ್ ಲಿಂಕ್ ಮಾಡಬಹುದು. ಇದಕ್ಕೆ 50 ರೂ ಶುಲ್ಕ ಇರುತ್ತದೆ. ಇಲ್ಲಿ ಹೋಗುವಾಗ ನಿಮ್ಮ ಜೊತೆ ಪ್ಯಾನ್ ಮತ್ತು ಆಧಾರ್ ದಾಖಲೆಗಳು ಇರಲಿ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:32 am, Tue, 27 June 23

Follow Us
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ
ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ
ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು
ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್