AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಎಲ್​ಪಿಜಿ ಗ್ಯಾಸ್​ಗೆ ಆಧಾರ್ ಅಪ್​ಡೇಟ್ ಮಾಡಬೇಕು; ಹೊಸದಾಗಿ ಇಕೆವೈಸಿ ಮಾಡುವ ಕ್ರಮ ಇಲ್ಲಿದೆ

LPG users Aadhaar based ekyc update: ಎಲ್​ಪಿಜಿ ಗ್ಯಾಸ್ ಕನೆಕ್ಷನ್ ಹೊಂದಿರುವವರು ಇಕೆವೈಸಿ ಅಪ್​ಡೇಟ್ ಮಾಡಬೇಕಾಗುತ್ತದೆ. ಗ್ರಾಹಕರಿಂದ ಇಕೆವೈಸಿ ಪಡೆಯುವಂತೆ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ. ಅಡುಗೆ ಅನಿಲವನ್ನು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗುತ್ತಿರುವುದನ್ನು ತಡೆಯಲು ಈ ಕ್ರಮ ಕೈಗೊಂಡಿದೆ.

ನಿಮ್ಮ ಎಲ್​ಪಿಜಿ ಗ್ಯಾಸ್​ಗೆ ಆಧಾರ್ ಅಪ್​ಡೇಟ್ ಮಾಡಬೇಕು; ಹೊಸದಾಗಿ ಇಕೆವೈಸಿ ಮಾಡುವ ಕ್ರಮ ಇಲ್ಲಿದೆ
ಎಲ್​ಪಿಜಿ ಆಧಾರ್ ಇಕೆವೈಸಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 11, 2024 | 6:47 PM

Share

ಬೆಂಗಳೂರು, ಜುಲೈ 11: ನಿಮ್ಮ ಎಲ್​ಪಿಜಿ ಗ್ಯಾಸ್ ಸಂಪರ್ಕಕ್ಕೆ ಇಕೆವೈಸಿ ಅಪ್​ಡೇಟ್ ಮಾಡಬೇಕಾಗುತ್ತದೆ. ಐಒಸಿ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಗ್ರಾಹಕರಿಂದ ಆಧಾರ್ ಆಧಾರಿತ ಇಕೆವೈಸಿ ಪಡೆಯುತ್ತಿವೆ. ಅಡುಗೆ ಅನಿಲ ಸಂಪರ್ಕವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಕಾರ್ಯ ಮಾಡಲಾಗುತ್ತಿದೆ. ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಮೊನ್ನೆ ಈ ವಿಚಾರದ ಬಗ್ಗೆ ಮಾತನಾಡಿ, ಆಧಾರ್ ಮೂಲಕ ಇಕೆವೈಸಿ ಅಪ್​ಡೇಟ್ ಮಾಡಲು ಕಾರಣಗಳನ್ನು ನೀಡಿದ್ದಾರೆ.

ಯಾಕೆ ಪಡೆಯಲಾಗುತ್ತಿದೆ ಇಕೆವೈಸಿ?

ಅಡುಗೆ ಅನಿಲವನ್ನು ಸರ್ಕಾರ ಸಬ್ಸಿಡಿ ದರದಲ್ಲಿ ನೀಡುತ್ತದೆ. 14.2 ಕಿಲೋ ತೂಕದ ಅಡುಗೆ ಅನಿಲ ಸಿಲಿಂಡರ್​ನ ಬೆಲೆ ಸದ್ಯ 803 ರೂ ಇದೆ. ಆದರೆ, 19 ಕಿಲೋ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 1,646 ರೂ ಇದೆ. ಸುಮಾರು 600 ರೂನಷ್ಟು ಅಂತರ ಇದೆ. ಸಾಕಷ್ಟು ಜನರು ವಾಣಿಜ್ಯ ಉಪಯೋಗಕ್ಕೆ ಅಡುಗೆ ಅನಿಲವನ್ನೇ ಬಳಸುತ್ತಿದ್ದಾರೆ. ಹೋಟೆಲ್ ಇತ್ಯಾದಿಯವರು ಅಡುಗೆ ಅನಿಲ ಬಳಕೆದಾರರ ಹೆಸರಲ್ಲಿ ಸಿಲಿಂಡರ್ ಪಡೆದು ಬಳಸುವುದು ಇತ್ಯಾದಿ ನಡೆಯುತ್ತಿದೆ. ಇದನ್ನು ತಡೆಯಲು ಸರ್ಕಾರ ಗ್ರಾಹಕರಿಂದ ಆಧಾರ್ ಇಕೆವೈಸಿ ಮಾಡಿಸುವಂತೆ ಇಂಡೇನ್, ಎಚ್​ಪಿ, ಬಿಪಿ ಗ್ಯಾಸ್ ವಿತರಕರಿಗೆ ತಿಳಿಸಿದೆ.

ಇದನ್ನೂ ಓದಿ: BSNL Offer: ಬಿಎಸ್​ಎನ್​ಎಲ್​ನಿಂದ ಹೊಸ ಭರ್ಜರಿ ಪ್ಲಾನ್ ಬಿಡುಗಡೆ; ಜಿಯೋ, ಏರ್ಟೆಲ್​ನಿಂದ ಗ್ರಾಹಕರ ವಲಸೆ?

ಇಕೆವೈಸಿ ಅಪ್​ಡೇಟ್ ಮಾಡುವುದು ಹೇಗೆ?

  1. ನಿಮಗೆ ಗ್ಯಾಸ್ ಡೆಲಿವರಿಗೆ ಬರುವ ವ್ಯಕ್ತಿಗೆ ನಿಮ್ಮ ಆಧಾರ್ ವಿವರ ಸಲ್ಲಿಸಬೇಕು. ಅವರ ಬಳಿ ಇರುವ ಆ್ಯಪ್​ವೊಂದರಲ್ಲಿ ನಿಮ್ಮ ಆಧಾರ್ ವಿವರ ಫೀಡ್ ಮಾಡಲಾಗುತ್ತದೆ. ಆಧಾರ್​ಗೆ ನೊಂದಾಯಿತವಾದ ನಿಮ್ಮ ಮೊಬೈಲ್ ನಂಬರ್​ಗೆ ಒಟಿಪಿ ಬರುತ್ತದೆ. ಅದನ್ನು ಸಲ್ಲಿಸಿದರೆ ಇಕೆವೈಸಿ ಅಪ್​ಡೇಟ್ ಆದಂತೆ.
  2. ನಿಮ್ಮ ಗ್ಯಾಸ್ ವಿತರಕ ಏಜೆನ್ಸಿಯ ಕಚೇರಿಗೆ ಹೋಗಿ ಇಕೆವೈಸಿ ಮಾಡಬಹುದು. ನಿಮ್ಮ ಆಧಾರ್ ಪ್ರತಿಯನ್ನು ಅಲ್ಲಿಗೆ ತೆಗೆದುಕೊಂಡು ಹೋಗಬೇಕಾಗುತ್ತದೆ.
  3. ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳ ಮೊಬೈಲ್ ಆ್ಯಪ್​ಗಳಲ್ಲಿ ಇಕೆವೈಸಿ ಅಪ್​ಡೇಟ್ ಮಾಡುವ ಅವಕಾಶ ಇರುತ್ತದೆ.

ಗಮನಿಸಬೇಕಾದ ಸಂಗತಿ ಎಂದರೆ, ಗ್ಯಾಸ್ ಸಂಪರ್ಕಕ್ಕೆ ಇಕೆವೈಸಿ ಅಪ್​ಡೇಟ್ ಮಾಡಲು ಸದ್ಯ ಸರ್ಕಾರ ಯಾವ ಡೆಡ್​ಲೈನ್ ನೀಡಿಲ್ಲ. ಹೀಗಾಗಿ, ಆತುರ ಮಾಡದೇ ತಾಳ್ಮೆಯಿಂದ ಇಕೆವೈಸಿ ಮಾಡಲು ಸಾಕಷ್ಟು ಸಮಯಾವಕಾಶ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ