AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar card: ಆಧಾರ್​ ನೋಂದಣಿ, ಅಪ್​ಡೇಟ್​ಗೆ ಮಹತ್ವದ ಘೋಷಣೆ; ಕೇಂದ್ರಗಳ ಸಂಖ್ಯೆ ಹೆಚ್ಚಳ

ಆಧಾರ್ ನೋಂದಣಿ ಹಾಗೂ ಅಪ್​ಡೇಟ್ ಸಲೀಸಾಗಿ ಆಗುವ ಉದ್ದೇಶದಿಂದ ಯುಐಡಿಎಐ ಆಧಾರ್​ ಕೇಂದ್ರಗಳ ಸಂಖ್ಯೆ ಹೆಚ್ಚಿಸಲು ನಿರ್ಧರಿಸಿದೆ.

Aadhaar card: ಆಧಾರ್​ ನೋಂದಣಿ, ಅಪ್​ಡೇಟ್​ಗೆ ಮಹತ್ವದ ಘೋಷಣೆ; ಕೇಂದ್ರಗಳ ಸಂಖ್ಯೆ ಹೆಚ್ಚಳ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 02, 2021 | 1:27 PM

Share

ಆಧಾರ್ ಅಪ್​ಡೇಟ್ ಹಾಗೂ ನೋಂದಣಿಯನ್ನು ಇನ್ನಷ್ಟು ಸಲೀಸು ಮಾಡುವ ಉದ್ದೇಶದಿಂದ ಯೂನಿಕ್ ಐಡೆಂಟಿಫಿಕೇಷನ್ ಅಥಾರಿಟಿ ಆಫ್ ಇಂಡಿಯಾದಿಂದ (UIDAI) ಇನ್ನಷ್ಟು ಸಂಖ್ಯೆಯಲ್ಲಿ ಆಧಾರ್​ಗಷ್ಟೇ ಮೀಸಲಾದ ಕೇಂದ್ರಗಳನ್ನು ಭಾರತದಲ್ಲಿ ಆರಂಭಿಸಲು ತೀರ್ಮಾನಿಸಲಾಗಿದೆ. ಇಲ್ಲಿ ಆಧಾರ್​ ನೋಂದಣಿ ಹಾಗೂ ಅಪ್​ಡೇಟ್​ಗಂತಲೇ ಮೀಸಲಾಗಿ ಇಡಲಾಗುತ್ತದೆ. ಭಾರತದ 122 ನಗರಗಳಲ್ಲಿ ಇಂಥ 166 ಕೇಂದ್ರಗಳನ್ನು ಆರಂಭಿಸುವುದಾಗಿ UIDAI ಘೋಷಿಸಿದೆ. ಇದರಿಂದಾಗಿ ಭಾರತೀಯ ನಾಗರಿಕರು ಹೊಸದಾಗಿ ಆಧಾರ್​ ಕಾರ್ಡ್​ಗೆ ಅಪ್ಲೈ ಮಾಡುವುದಕ್ಕೆ ಮತ್ತು ಈಗಾಗಲೇ ಇರುವ ಆಧಾರ್ ಕಾರ್ಡ್ ಅಪ್​ಡೇಟ್​ ಮಾಡುವುದಕ್ಕೆ ಸುಲಭ ಆಗುತ್ತದೆ.​ UIDAIನಿಂದ 55 ಸೇವಾ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಇದು 166 ಕೇಂದ್ರಗಳ ಆರಂಭದ ಭಾಗವಾಗಿ ಶುರು ಮಾಡಲಾಗಿದೆ. ಈಗಾಗಲೇ ಬ್ಯಾಂಕ್​ಗಳು, ಪೋಸ್ಟ್​ ಆಫೀಸ್​ಗಳು ಮತ್ತು ರಾಜ್ಯ ಸರ್ಕಾರಗಳಿಂದ 52,000 ಆಧಾರ್​ ನೋಂದಣಿ ಕೇಂದ್ರಗಳನ್ನು ನಡೆಸಲಾಗುತ್ತದೆ. ಈ ಆಧಾರ್​ ಸೇವಾ ಕೇಂದ್ರಗಳನ್ನು (ASK) ವಾರದ ಎಲ್ಲ ದಿನಗಳಲ್ಲೂ ತೆರೆದಿರುತ್ತದೆ. ಈವರೆಗೆ ದಿವ್ಯಾಂಗ ವ್ಯಕ್ತಿಗಳೂ ಸೇರಿ 70 ಲಕ್ಷ ನಿವಾಸಿಗಳಿಗೆ ಸೇವೆ ನೀಡಲಾಗಿದೆ.

ಈ ಕೇಂದ್ರಗಳಲ್ಲಿ 1000 ಮಂದಿ ನೋಂದಣಿ ಮತ್ತು ಅಪ್​ಡೇಟ್ ಮಾಡುವಷ್ಟು ಸಾಮರ್ಥ್ಯ ಇರುವುದಕ್ಕೆ ಮಾಡೆಲ್-ಎ ಆಧಾರ್​ ಸೇವಾ ಕೇಂದ್ರಗಳು, 500ರ ತನಕ ಇರುವುದಕ್ಕೆ ಮಾಡೆಲ್ ಬಿ ಆಧಾರ್​ ಸೇವಾ ಕೇಂದ್ರ ಮತ್ತು 250 ನೋಂದಣಿ ಮತ್ತು ಅಪ್​ಡೇಟ್​ ಮನವಿ ಮಾಡುವುದಕ್ಕೆ ಮಾಡೆಲ್-ಸಿ ಆಧಾರ್​ ಸೇವಾ ಕೇಂದ್ರಗಳೆಂದು ವಿಭಜಿಸಲಾಗಿದೆ. ಈ ಸೇವಾ ಕೇಂದ್ರಗಳನ್ನು ಪ್ರತಿ ದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 5.30ರ ತನಕ ಕಾರ್ಯ ನಿರ್ವಹಿಸುತ್ತದೆ. ಸಾರ್ವಜನಿಕ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವುದಿಲ್ಲ.

ಆಧಾರ್ ನೋಂದಣಿ ಉಚಿತವಾಗಿದ್ದು, ಉಳಿದಂತೆ ಹೆಸರು ಮತ್ತಿತರ ಬದಲಾವಣೆಗೆ 50 ರೂಪಾಯಿ ಬಯೋಮೆಟ್ರಿಕ್ ಅಪ್​ಡೇಟ್​ ಹಾಗೂ/ಅಥವಾ ಹೆಸರು ಮತ್ತಿತರ ಬದಲಾವಣೆಗಳಿಗೆ 100 ರೂಪಾಯಿ ವಿಧಿಸಲಾಗುತ್ತದೆ. ಆಧಾರ್​ ಸೇವಾ ಕೇಂದ್ರಗಳಿಗೆ ಆನ್​ಲೈನ್ ಅಪಾಯಿಂಟ್​ಮೆಂಟ್​ ವ್ಯವಸ್ಥೆ ಇದ್ದು, ಟೋಕನ್ ಮ್ಯಾನೇಜ್​ಮೆಂಟ್ ಸಿಸ್ಟಮ್​ ಇದೆ. ಇದು ನಿವಾಸಿಗಳಿಗೆ ಅಡೆ-ತಡೆ ಇಲ್ಲದ ನೋಂದಣಿ ಮಾಡುವುದಕ್ಕೆ ವಿವಿಧ ಹಂತಗಳಿಗೆ ಮಾರ್ಗದರ್ಶನ ನೀಡುತ್ತದೆ.

ಇದನ್ನೂ ಓದಿ: Aadhaar Authentication: ಆಧಾರ್​ ದೃಢೀಕರಣದ ದರ ಇಳಿಕೆ ಮಾಡಿದ ಸರ್ಕಾರ; ಇಲ್ಲಿದೆ ಸಂಪೂರ್ಣ ವಿವರ

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ