AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar card: ಆಧಾರ್​ ನೋಂದಣಿ, ಅಪ್​ಡೇಟ್​ಗೆ ಮಹತ್ವದ ಘೋಷಣೆ; ಕೇಂದ್ರಗಳ ಸಂಖ್ಯೆ ಹೆಚ್ಚಳ

ಆಧಾರ್ ನೋಂದಣಿ ಹಾಗೂ ಅಪ್​ಡೇಟ್ ಸಲೀಸಾಗಿ ಆಗುವ ಉದ್ದೇಶದಿಂದ ಯುಐಡಿಎಐ ಆಧಾರ್​ ಕೇಂದ್ರಗಳ ಸಂಖ್ಯೆ ಹೆಚ್ಚಿಸಲು ನಿರ್ಧರಿಸಿದೆ.

Aadhaar card: ಆಧಾರ್​ ನೋಂದಣಿ, ಅಪ್​ಡೇಟ್​ಗೆ ಮಹತ್ವದ ಘೋಷಣೆ; ಕೇಂದ್ರಗಳ ಸಂಖ್ಯೆ ಹೆಚ್ಚಳ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 02, 2021 | 1:27 PM

Share

ಆಧಾರ್ ಅಪ್​ಡೇಟ್ ಹಾಗೂ ನೋಂದಣಿಯನ್ನು ಇನ್ನಷ್ಟು ಸಲೀಸು ಮಾಡುವ ಉದ್ದೇಶದಿಂದ ಯೂನಿಕ್ ಐಡೆಂಟಿಫಿಕೇಷನ್ ಅಥಾರಿಟಿ ಆಫ್ ಇಂಡಿಯಾದಿಂದ (UIDAI) ಇನ್ನಷ್ಟು ಸಂಖ್ಯೆಯಲ್ಲಿ ಆಧಾರ್​ಗಷ್ಟೇ ಮೀಸಲಾದ ಕೇಂದ್ರಗಳನ್ನು ಭಾರತದಲ್ಲಿ ಆರಂಭಿಸಲು ತೀರ್ಮಾನಿಸಲಾಗಿದೆ. ಇಲ್ಲಿ ಆಧಾರ್​ ನೋಂದಣಿ ಹಾಗೂ ಅಪ್​ಡೇಟ್​ಗಂತಲೇ ಮೀಸಲಾಗಿ ಇಡಲಾಗುತ್ತದೆ. ಭಾರತದ 122 ನಗರಗಳಲ್ಲಿ ಇಂಥ 166 ಕೇಂದ್ರಗಳನ್ನು ಆರಂಭಿಸುವುದಾಗಿ UIDAI ಘೋಷಿಸಿದೆ. ಇದರಿಂದಾಗಿ ಭಾರತೀಯ ನಾಗರಿಕರು ಹೊಸದಾಗಿ ಆಧಾರ್​ ಕಾರ್ಡ್​ಗೆ ಅಪ್ಲೈ ಮಾಡುವುದಕ್ಕೆ ಮತ್ತು ಈಗಾಗಲೇ ಇರುವ ಆಧಾರ್ ಕಾರ್ಡ್ ಅಪ್​ಡೇಟ್​ ಮಾಡುವುದಕ್ಕೆ ಸುಲಭ ಆಗುತ್ತದೆ.​ UIDAIನಿಂದ 55 ಸೇವಾ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಇದು 166 ಕೇಂದ್ರಗಳ ಆರಂಭದ ಭಾಗವಾಗಿ ಶುರು ಮಾಡಲಾಗಿದೆ. ಈಗಾಗಲೇ ಬ್ಯಾಂಕ್​ಗಳು, ಪೋಸ್ಟ್​ ಆಫೀಸ್​ಗಳು ಮತ್ತು ರಾಜ್ಯ ಸರ್ಕಾರಗಳಿಂದ 52,000 ಆಧಾರ್​ ನೋಂದಣಿ ಕೇಂದ್ರಗಳನ್ನು ನಡೆಸಲಾಗುತ್ತದೆ. ಈ ಆಧಾರ್​ ಸೇವಾ ಕೇಂದ್ರಗಳನ್ನು (ASK) ವಾರದ ಎಲ್ಲ ದಿನಗಳಲ್ಲೂ ತೆರೆದಿರುತ್ತದೆ. ಈವರೆಗೆ ದಿವ್ಯಾಂಗ ವ್ಯಕ್ತಿಗಳೂ ಸೇರಿ 70 ಲಕ್ಷ ನಿವಾಸಿಗಳಿಗೆ ಸೇವೆ ನೀಡಲಾಗಿದೆ.

ಈ ಕೇಂದ್ರಗಳಲ್ಲಿ 1000 ಮಂದಿ ನೋಂದಣಿ ಮತ್ತು ಅಪ್​ಡೇಟ್ ಮಾಡುವಷ್ಟು ಸಾಮರ್ಥ್ಯ ಇರುವುದಕ್ಕೆ ಮಾಡೆಲ್-ಎ ಆಧಾರ್​ ಸೇವಾ ಕೇಂದ್ರಗಳು, 500ರ ತನಕ ಇರುವುದಕ್ಕೆ ಮಾಡೆಲ್ ಬಿ ಆಧಾರ್​ ಸೇವಾ ಕೇಂದ್ರ ಮತ್ತು 250 ನೋಂದಣಿ ಮತ್ತು ಅಪ್​ಡೇಟ್​ ಮನವಿ ಮಾಡುವುದಕ್ಕೆ ಮಾಡೆಲ್-ಸಿ ಆಧಾರ್​ ಸೇವಾ ಕೇಂದ್ರಗಳೆಂದು ವಿಭಜಿಸಲಾಗಿದೆ. ಈ ಸೇವಾ ಕೇಂದ್ರಗಳನ್ನು ಪ್ರತಿ ದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 5.30ರ ತನಕ ಕಾರ್ಯ ನಿರ್ವಹಿಸುತ್ತದೆ. ಸಾರ್ವಜನಿಕ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವುದಿಲ್ಲ.

ಆಧಾರ್ ನೋಂದಣಿ ಉಚಿತವಾಗಿದ್ದು, ಉಳಿದಂತೆ ಹೆಸರು ಮತ್ತಿತರ ಬದಲಾವಣೆಗೆ 50 ರೂಪಾಯಿ ಬಯೋಮೆಟ್ರಿಕ್ ಅಪ್​ಡೇಟ್​ ಹಾಗೂ/ಅಥವಾ ಹೆಸರು ಮತ್ತಿತರ ಬದಲಾವಣೆಗಳಿಗೆ 100 ರೂಪಾಯಿ ವಿಧಿಸಲಾಗುತ್ತದೆ. ಆಧಾರ್​ ಸೇವಾ ಕೇಂದ್ರಗಳಿಗೆ ಆನ್​ಲೈನ್ ಅಪಾಯಿಂಟ್​ಮೆಂಟ್​ ವ್ಯವಸ್ಥೆ ಇದ್ದು, ಟೋಕನ್ ಮ್ಯಾನೇಜ್​ಮೆಂಟ್ ಸಿಸ್ಟಮ್​ ಇದೆ. ಇದು ನಿವಾಸಿಗಳಿಗೆ ಅಡೆ-ತಡೆ ಇಲ್ಲದ ನೋಂದಣಿ ಮಾಡುವುದಕ್ಕೆ ವಿವಿಧ ಹಂತಗಳಿಗೆ ಮಾರ್ಗದರ್ಶನ ನೀಡುತ್ತದೆ.

ಇದನ್ನೂ ಓದಿ: Aadhaar Authentication: ಆಧಾರ್​ ದೃಢೀಕರಣದ ದರ ಇಳಿಕೆ ಮಾಡಿದ ಸರ್ಕಾರ; ಇಲ್ಲಿದೆ ಸಂಪೂರ್ಣ ವಿವರ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ