AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar card: ಆಧಾರ್​ ನೋಂದಣಿ, ಅಪ್​ಡೇಟ್​ಗೆ ಮಹತ್ವದ ಘೋಷಣೆ; ಕೇಂದ್ರಗಳ ಸಂಖ್ಯೆ ಹೆಚ್ಚಳ

ಆಧಾರ್ ನೋಂದಣಿ ಹಾಗೂ ಅಪ್​ಡೇಟ್ ಸಲೀಸಾಗಿ ಆಗುವ ಉದ್ದೇಶದಿಂದ ಯುಐಡಿಎಐ ಆಧಾರ್​ ಕೇಂದ್ರಗಳ ಸಂಖ್ಯೆ ಹೆಚ್ಚಿಸಲು ನಿರ್ಧರಿಸಿದೆ.

Aadhaar card: ಆಧಾರ್​ ನೋಂದಣಿ, ಅಪ್​ಡೇಟ್​ಗೆ ಮಹತ್ವದ ಘೋಷಣೆ; ಕೇಂದ್ರಗಳ ಸಂಖ್ಯೆ ಹೆಚ್ಚಳ
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on: Oct 02, 2021 | 1:27 PM

Share

ಆಧಾರ್ ಅಪ್​ಡೇಟ್ ಹಾಗೂ ನೋಂದಣಿಯನ್ನು ಇನ್ನಷ್ಟು ಸಲೀಸು ಮಾಡುವ ಉದ್ದೇಶದಿಂದ ಯೂನಿಕ್ ಐಡೆಂಟಿಫಿಕೇಷನ್ ಅಥಾರಿಟಿ ಆಫ್ ಇಂಡಿಯಾದಿಂದ (UIDAI) ಇನ್ನಷ್ಟು ಸಂಖ್ಯೆಯಲ್ಲಿ ಆಧಾರ್​ಗಷ್ಟೇ ಮೀಸಲಾದ ಕೇಂದ್ರಗಳನ್ನು ಭಾರತದಲ್ಲಿ ಆರಂಭಿಸಲು ತೀರ್ಮಾನಿಸಲಾಗಿದೆ. ಇಲ್ಲಿ ಆಧಾರ್​ ನೋಂದಣಿ ಹಾಗೂ ಅಪ್​ಡೇಟ್​ಗಂತಲೇ ಮೀಸಲಾಗಿ ಇಡಲಾಗುತ್ತದೆ. ಭಾರತದ 122 ನಗರಗಳಲ್ಲಿ ಇಂಥ 166 ಕೇಂದ್ರಗಳನ್ನು ಆರಂಭಿಸುವುದಾಗಿ UIDAI ಘೋಷಿಸಿದೆ. ಇದರಿಂದಾಗಿ ಭಾರತೀಯ ನಾಗರಿಕರು ಹೊಸದಾಗಿ ಆಧಾರ್​ ಕಾರ್ಡ್​ಗೆ ಅಪ್ಲೈ ಮಾಡುವುದಕ್ಕೆ ಮತ್ತು ಈಗಾಗಲೇ ಇರುವ ಆಧಾರ್ ಕಾರ್ಡ್ ಅಪ್​ಡೇಟ್​ ಮಾಡುವುದಕ್ಕೆ ಸುಲಭ ಆಗುತ್ತದೆ.​ UIDAIನಿಂದ 55 ಸೇವಾ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಇದು 166 ಕೇಂದ್ರಗಳ ಆರಂಭದ ಭಾಗವಾಗಿ ಶುರು ಮಾಡಲಾಗಿದೆ. ಈಗಾಗಲೇ ಬ್ಯಾಂಕ್​ಗಳು, ಪೋಸ್ಟ್​ ಆಫೀಸ್​ಗಳು ಮತ್ತು ರಾಜ್ಯ ಸರ್ಕಾರಗಳಿಂದ 52,000 ಆಧಾರ್​ ನೋಂದಣಿ ಕೇಂದ್ರಗಳನ್ನು ನಡೆಸಲಾಗುತ್ತದೆ. ಈ ಆಧಾರ್​ ಸೇವಾ ಕೇಂದ್ರಗಳನ್ನು (ASK) ವಾರದ ಎಲ್ಲ ದಿನಗಳಲ್ಲೂ ತೆರೆದಿರುತ್ತದೆ. ಈವರೆಗೆ ದಿವ್ಯಾಂಗ ವ್ಯಕ್ತಿಗಳೂ ಸೇರಿ 70 ಲಕ್ಷ ನಿವಾಸಿಗಳಿಗೆ ಸೇವೆ ನೀಡಲಾಗಿದೆ.

ಈ ಕೇಂದ್ರಗಳಲ್ಲಿ 1000 ಮಂದಿ ನೋಂದಣಿ ಮತ್ತು ಅಪ್​ಡೇಟ್ ಮಾಡುವಷ್ಟು ಸಾಮರ್ಥ್ಯ ಇರುವುದಕ್ಕೆ ಮಾಡೆಲ್-ಎ ಆಧಾರ್​ ಸೇವಾ ಕೇಂದ್ರಗಳು, 500ರ ತನಕ ಇರುವುದಕ್ಕೆ ಮಾಡೆಲ್ ಬಿ ಆಧಾರ್​ ಸೇವಾ ಕೇಂದ್ರ ಮತ್ತು 250 ನೋಂದಣಿ ಮತ್ತು ಅಪ್​ಡೇಟ್​ ಮನವಿ ಮಾಡುವುದಕ್ಕೆ ಮಾಡೆಲ್-ಸಿ ಆಧಾರ್​ ಸೇವಾ ಕೇಂದ್ರಗಳೆಂದು ವಿಭಜಿಸಲಾಗಿದೆ. ಈ ಸೇವಾ ಕೇಂದ್ರಗಳನ್ನು ಪ್ರತಿ ದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 5.30ರ ತನಕ ಕಾರ್ಯ ನಿರ್ವಹಿಸುತ್ತದೆ. ಸಾರ್ವಜನಿಕ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವುದಿಲ್ಲ.

ಆಧಾರ್ ನೋಂದಣಿ ಉಚಿತವಾಗಿದ್ದು, ಉಳಿದಂತೆ ಹೆಸರು ಮತ್ತಿತರ ಬದಲಾವಣೆಗೆ 50 ರೂಪಾಯಿ ಬಯೋಮೆಟ್ರಿಕ್ ಅಪ್​ಡೇಟ್​ ಹಾಗೂ/ಅಥವಾ ಹೆಸರು ಮತ್ತಿತರ ಬದಲಾವಣೆಗಳಿಗೆ 100 ರೂಪಾಯಿ ವಿಧಿಸಲಾಗುತ್ತದೆ. ಆಧಾರ್​ ಸೇವಾ ಕೇಂದ್ರಗಳಿಗೆ ಆನ್​ಲೈನ್ ಅಪಾಯಿಂಟ್​ಮೆಂಟ್​ ವ್ಯವಸ್ಥೆ ಇದ್ದು, ಟೋಕನ್ ಮ್ಯಾನೇಜ್​ಮೆಂಟ್ ಸಿಸ್ಟಮ್​ ಇದೆ. ಇದು ನಿವಾಸಿಗಳಿಗೆ ಅಡೆ-ತಡೆ ಇಲ್ಲದ ನೋಂದಣಿ ಮಾಡುವುದಕ್ಕೆ ವಿವಿಧ ಹಂತಗಳಿಗೆ ಮಾರ್ಗದರ್ಶನ ನೀಡುತ್ತದೆ.

ಇದನ್ನೂ ಓದಿ: Aadhaar Authentication: ಆಧಾರ್​ ದೃಢೀಕರಣದ ದರ ಇಳಿಕೆ ಮಾಡಿದ ಸರ್ಕಾರ; ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ