AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar, PAN: ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಆಧಾರ್, ಪ್ಯಾನ್ ವಿವರಗಳು ಕಡ್ಡಾಯ: ಕೇಂದ್ರ

ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ನಿಮ್ಮ ಪ್ಯಾನ್ ಮತ್ತು ಆಧಾರ್ ಸಂಖ್ಯೆ ಕಡ್ಡಾಯ ಎಂದು ಎಂದು ಹಣಕಾಸು ಸಚಿವಾಲಯ ಹೇಳಿದೆ.

Aadhaar, PAN: ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಆಧಾರ್, ಪ್ಯಾನ್ ವಿವರಗಳು ಕಡ್ಡಾಯ: ಕೇಂದ್ರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 01, 2023 | 4:55 PM

Share

ಪಾನ್​​ ಕಾರ್ಡ್(PAN) ಮತ್ತು ಆಧಾರ್ ಕಾರ್ಡ್ (Aadhaar)​ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಜೂನ್ 30 ರವರೆಗೆ ಕೇಂದ್ರ ವಿಸ್ತರಿಸಿದೆ. ಇದೀಗ ಕೇಂದ್ರ ಮತ್ತೊಂದು ಮಹತ್ವದ ಆದೇಶವೊಂದನ್ನು ನೀಡಿದೆ. ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಪಾನ್ ಮತ್ತು ಆಧಾರ್ ಕಾರ್ಡ್​ ಮುಖ್ಯ ಎಂದು ಹೇಳಿದೆ. ಈ ಎರಡು ದಾಖಲೆಗಳು ಇನ್ನೂ ಮುಂದೆ ಎಲ್ಲ ದಾಖಲೆಗಳಿಗೂ ಹಾಗೂ ಕೆಲಸಗಳಿಗೆ ಮುಖ್ಯವಾಗಿರುತ್ತದೆ. ಹೀಗಾಗಿ ಪಾನ್ ಮತ್ತು ಆಧಾರ್ ಕಾರ್ಡ್ KYC (Know Your Customer) ಯ ಅವಿಭಾಜ್ಯ ಅಂಗವಾಗಿದೆ. ಈಗ, ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ನಿಮ್ಮ ಪ್ಯಾನ್ ಮತ್ತು ಆಧಾರ್ ಸಂಖ್ಯೆ ಕಡ್ಡಾಯ ಎಂದು ಹಣಕಾಸು ಸಚಿವಾಲಯ ಹೇಳಿದೆ. ಮಾರ್ಚ್ 31ರಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈಗ ಸಣ್ಣ ಉಳಿತಾಯ ಯೋಜನೆಗಳಿಗಾಗಿ KYCಯು ಮುಖ್ಯ ಭಾಗವಾಗಿದೆ. ಈ ಹಿಂದೆ ಆಧಾರ್ ಸಂಖ್ಯೆಯನ್ನು ಸಲ್ಲಿಸದೆಯೇ ಇಂತಹ ಯೋಜನೆಗಳಲ್ಲಿ ಹೂಡಿಕೆ ಮಾಡಬಹುದಾಗಿತ್ತು. ಆದರೆ, ಈಗ ಈ ಯೋಜನೆಗಳಲ್ಲಿ ಹೂಡಿಕೆ ಮಾಡಲು ಚಂದಾದಾರರು ಕನಿಷ್ಠ ಆಧಾರ್ ಸಂಖ್ಯೆಯನ್ನಾದರೂ ಸಲ್ಲಿಸಬೇಕಾಗುತ್ತದೆ. ಅಲ್ಲದೆ, ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಹೂಡಿಕೆಯನ್ನು ಮಾಡಿದರೆ, ಬಳಕೆದಾರರು ಪ್ಯಾನ್ ಸಂಖ್ಯೆಯನ್ನು ಒದಗಿಸಬೇಕಾಗುತ್ತದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

PPF, ಸುಕನ್ಯಾ ಸಮೃದ್ಧಿ ಯೋಜನೆ (SSY), ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಮುಂತಾದ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದ ಚಂದಾದಾರರು ಸೆಪ್ಟೆಂಬರ್ 30ರೊಳಗೆ ಆಧಾರ್ ಸಂಖ್ಯೆಯನ್ನು ಸಲ್ಲಿಸಬೇಕು ಎಂದು ಅಧಿಸೂಚನೆಯು ತಿಳಿಸುತ್ತದೆ. ಹೀಗೆ ಮಾಡಲು ಇಚ್ಛಿಸುವವರು ಹಾಗೂ ಹೊಸ ಚಂದಾದಾರರು ಆರು ತಿಂಗಳೊಳಗೆ ಆಧಾರ್ ವಿವರಗಳನ್ನು ಸಲ್ಲಿಸಬೇಕು ಎಂದು ಹೇಳಿದೆ. ಒಂದು ವೇಳೆ ಚಂದಾದಾರರಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ (UIDAI) ಆಧಾರ್ ಸಂಖ್ಯೆಯನ್ನು ನಿಯೋಜಿಸದಿದ್ದರೆ, ನಿಮ್ಮ ನೋಂದಣಿ ಸಂಖ್ಯೆ ಕಾರ್ಯನಿರ್ವಹಿಸುತ್ತದೆ. ಆದರೆ ಖಾತೆ ತೆರೆದ ಆರು ತಿಂಗಳೊಳಗೆ ಆಧಾರ್ ವಿವರಗಳನ್ನು ಸಲ್ಲಿಸದಿದ್ದರೆ, ಈ ವರ್ಷ ಅಕ್ಟೋಬರ್ 1ರಿಂದ ಸಣ್ಣ ಉಳಿತಾಯ ಯೋಜನೆ ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ.

ಇದನ್ನೂ ಓದಿ: Pan Aadhaar Linking: ಪ್ಯಾನ್ ಆಧಾರ್ ಕಾರ್ಡ್​ ಲಿಂಕ್ ಗಡುವು ಮತ್ತೆ ವಿಸ್ತರಣೆ

ಉಳಿತಾಯ ಖಾತೆ ತೆರೆಯುವಾಗ ಪ್ಯಾನ್ ಸಂಖ್ಯೆಯನ್ನು ಒದಗಿಸಬೇಕು ಎಂದು ಹಣಕಾಸು ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಖಾತೆ ತೆರೆಯುವ ಸಮಯದಲ್ಲಿ ಈ ಎರಡು ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು, ಅದನ್ನು ಕೂಡ ಎರಡು ತಿಂಗಳೊಳಗೆ ಸಲ್ಲಿಸಬೇಕು. ನಿಮ್ಮ ಖಾತೆಯಲ್ಲಿ 50,000 ರೂ. ಕ್ಕಿಂತ ಹೆಚ್ಚಿನ ಹಣವನ್ನು ಹೊಂದಿರಬೇಕು ಎಂದು ಹೇಳಿದೆ.ಖಾತೆಯಿಂದ ಒಂದು ತಿಂಗಳಲ್ಲಿ ಎಲ್ಲಾ ವ್ಯವಹಾರ ವಹಿವಾಟು ನಡೆಸುವಾಗ ಒಟ್ಟು ಮೊತ್ತವು 10,000 ಕ್ಕಿಂತ ರೂ. ಹೆಚ್ಚಿದ್ದರೆ ಮತ್ತು ಯಾವುದೇ ಹಣಕಾಸಿನ ವರ್ಷದಲ್ಲಿ ಖಾತೆಯಲ್ಲಿನ ಕ್ರೆಡಿಟ್‌ಗಳ ಒಟ್ಟು ಮೊತ್ತವು 1 ಲಕ್ಷಕ್ಕಿಂತ ಹೆಚ್ಚಿದ್ದರೆ PAN ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

ನಿಗದಿತ ಅವಧಿಯೊಳಗೆ ಚಂದಾದಾರರು ಪ್ಯಾನ್ ವಿವರಗಳನ್ನು ಸಲ್ಲಿಸದಿದ್ದರೆ, ಪ್ಯಾನ್ ಸಂಖ್ಯೆಯನ್ನು ಒದಗಿಸುವವರೆಗೆ ಖಾತೆಯು ಕಾರ್ಯನಿರ್ವಹಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Published On - 4:55 pm, Sat, 1 April 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ