AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SEBI: ಷೇರು ಮಾರ್ಕೆಟ್​ ವ್ಯವಹಾರ ಸುಗಮಕ್ಕೆ ಸೆ. 30ರೊಳಗೆ ಪ್ಯಾನ್- ಆಧಾರ್ ಜೋಡಣೆ ಕಡ್ಡಾಯ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವವರಿಗೆ ಪ್ಯಾನ್​- ಆಧಾರ್ ಅನ್ನು ಸೆಪ್ಟೆಂಬರ್ 30, 2021ರೊಳಗೆ ಜೋಡಣೆ ಮಾಡಬೇಕು ಎಂದು ಸೆಬಿ ತಿಳಿಸಿದೆ.

SEBI: ಷೇರು ಮಾರ್ಕೆಟ್​ ವ್ಯವಹಾರ ಸುಗಮಕ್ಕೆ ಸೆ. 30ರೊಳಗೆ ಪ್ಯಾನ್- ಆಧಾರ್ ಜೋಡಣೆ ಕಡ್ಡಾಯ
ಸೆಬಿ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Srinivas Mata

Updated on:Sep 03, 2021 | 10:40 PM

ಗ್ರಾಹಕರು ತಮ್ಮ ಪ್ಯಾನ್ ಅನ್ನು ಆಧಾರ್ ಸಂಖ್ಯೆಯೊಂದಿಗೆ ಸೆಪ್ಟೆಂಬರ್ 30, 2021ರೊಳಗೆ ಜೋಡಣೆ ಮಾಡುವಂತೆ ಹೂಡಿಕೆದಾರರಿಗೆ ಮಾರುಕಟ್ಟೆ ನಿಯಂತ್ರಕವಾದ ಸೆಕ್ಯೂರಿಟೀಸ್ ಮತ್ತು ಎಕ್ಸ್​ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಶುಕ್ರವಾರ ಸೂಚಿಸಿದೆ. ಫೆಬ್ರವರಿ 13, 2020ರ ಸಿಬಿಡಿಟಿ ಅಧಿಸೂಚನೆಯನ್ನು ಉಲ್ಲೇಖಿಸಿ, ಮಾರುಕಟ್ಟೆ ನಿಯಂತ್ರಕ ಹೀಗೆ ಹೇಳಿದೆ: “… ಜುಲೈ 01, 2017ರ ವೇಳೆಗೆ ವ್ಯಕ್ತಿಯು ಪ್ಯಾನ್ (ಪರ್ಮನೆಂಟ್ ಅಕೌಂಟ್ ನಂಬರ್) ಪಡೆದಿದ್ದಲ್ಲಿ ಅದನ್ನು ಸೆಪ್ಟೆಂಬರ್ 30, 2021 ಅಥವಾ ಸಿಬಿಡಿಟಿ ನಿಗದಿಪಡಿಸಿದ ಉಳಿದ ಯಾವುದೇ ದಿನಾಂಕದಂದು ಜೋಡಣೆ ಆಗದಿದ್ದರೆ ಅದು ನಿಷ್ಕ್ರಿಯವಾಗುತ್ತದೆ”.

ಸಿಬಿಡಿಟಿ ಅಧಿಸೂಚನೆಯ ದೃಷ್ಟಿಯಿಂದ, ಸೆಕ್ಯೂರಿಟೀಸ್ ಮಾರುಕಟ್ಟೆಯಲ್ಲಿನ ಎಲ್ಲ ವಹಿವಾಟುಗಳಿಗೆ ಪ್ಯಾನ್ ಏಕೈಕ ಗುರುತಿನ ಸಂಖ್ಯೆ ಆಗಿರುವುದರಿಂದ ಮಾರುಕಟ್ಟೆ ಮೂಲಸೌಕರ್ಯ ಸಂಸ್ಥೆಗಳು (ಎಂಐಐಗಳು) ಸೇರಿದಂತೆ ಎಲ್ಲ ಸೆಬಿ ನೋಂದಾಯಿತ ಸಂಸ್ಥೆಗಳು ಈ ಅಧಿಸೂಚನೆಯ ನಿಯಮಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಸೆಪ್ಟೆಂಬರ್ 30, 2021ರ ನಂತರ ಹೊಸ ಖಾತೆಗಳನ್ನು ತೆರೆಯುವಾಗ ಅಥವಾ CBDT ಸೂಚಿಸಿದ ಯಾವುದೇ ಇತರ ದಿನಾಂಕದಂದು ಸಕ್ರಿಯವಾಗಿರುವ ಪ್ಯಾನ್ ಅನ್ನು ಮಾತ್ರ ಗ್ರಾಹಕರಿಂದ ಸ್ವೀಕರಿಸಬೇಕು (ಅಂದರೆ ಆಧಾರ್‌ನೊಂದಿಗೆ ಜೋಡಣೆ ಆಗಿರುವಂಥದ್ದು)” ಎಂಬುದನ್ನು ಇದು ಸೇರಿಸಿದೆ.

ಸೆಕ್ಯೂರಿಟೀಸ್ ಮಾರುಕಟ್ಟೆಯಲ್ಲಿ ನಿರಂತರ ಮತ್ತು ಸುಗಮ ವಹಿವಾಟುಗಳಿಗಾಗಿ ಸೆಪ್ಟೆಂಬರ್ 30ರ ಮೊದಲು ಆಧಾರ್ ಸಂಖ್ಯೆಯೊಂದಿಗೆ ತಮ್ಮ ಪ್ಯಾನ್ ಅನ್ನು ಜೋಡಣೆ ಮಾಡುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಈಗಾಗಲೇ ಇರುವ ಎಲ್ಲ ಹೂಡಿಕೆದಾರರಿಗೆ ಸೆಬಿ ಸೂಚಿಸಿದೆ.

ಇದನ್ನೂ ಓದಿ: Financial Tasks: ಸೆಪ್ಟೆಂಬರ್​ ತಿಂಗಳಲ್ಲಿ ಪೂರ್ಣ ಮಾಡಲೇ ಬೇಕಾದ 5 ಆರ್ಥಿಕ ಜವಾಬ್ದಾರಿಗಳು ಇವು

(Aadhaar PAN Linking Mandatory For Stock Market Investors Within September 30 2021 According To SEBI)

Published On - 10:39 pm, Fri, 3 September 21

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?