Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಆಧಾರ್, ಪ್ಯಾನ್ ಲಿಂಕ್ ಮಾಡಿಲ್ಲವೇ? ಬೇಗ ಮಾಡಿ; ಇಲ್ಲವಾದರೆ ನಿಷ್ಕ್ರಿಯವಾಗಲಿದೆ ಪ್ಯಾನ್ ಕಾರ್ಡ್

ಪ್ಯಾನ್ ಹೊಂದಿರುವವರಿಗೆ ಆಧಾರ್‌ನೊಂದಿಗೆ ಅದನ್ನು ಲಿಂಕ್ ಮಾಡಲು ಕೊನೆಯ ದಿನಾಂಕ 2023ರ ಮಾರ್ಚ್ 31 ಕೊನೆಯ ದಿನವಾಗಿದೆ. ಅಷ್ಟರೊಳಗೆ ಲಿಂಕ್ ಮಾಡದಿದ್ದರೆ, ಪ್ಯಾನ್ ನಿಷ್ಕ್ರಿಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಹೇಳಿದೆ.

ಇನ್ನೂ ಆಧಾರ್, ಪ್ಯಾನ್ ಲಿಂಕ್ ಮಾಡಿಲ್ಲವೇ? ಬೇಗ ಮಾಡಿ; ಇಲ್ಲವಾದರೆ ನಿಷ್ಕ್ರಿಯವಾಗಲಿದೆ ಪ್ಯಾನ್ ಕಾರ್ಡ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Dec 27, 2022 | 10:41 AM

ನವದೆಹಲಿ: ಆಧಾರ್ ಕಾರ್ಡ್ (Aadhaar Card) ಮತ್ತು ಪ್ಯಾನ್ ಕಾರ್ಡ್(PAN card) ಅನ್ನು 2023ರ ಮಾರ್ಚ್ 31ರ ಒಳಗೆ ಲಿಂಕ್ ಮಾಡದಿದ್ದರೆ ಅಂಥವರ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ತಿಳಿಸಿದೆ. 2022ರ ಮಾರ್ಚ್ 31ರ ಒಳಗಾಗಿ ಲಿಂಕ್ ಮಾಡದವರಿಗೆ ಈಗಾಗಲೇ 1,000 ರೂ. ದಂಡ ವಿಧಿಸಲಾಗುತ್ತಿದೆ. ಆದಾಗ್ಯೂ, 2023ರಲ್ಲಿ ಅದು ನಿಷ್ಕ್ರಿಯವಾಗುವವರೆಗೆ ಪ್ಯಾನ್ ಕಾರ್ಡ್ ಅನ್ನು ಬಳಸಲು ಅನುಮತಿಸಲಾಗುತ್ತದೆ ಎಂದು ಮಂಡಳಿ ಹೇಳಿದೆ. ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ವಿಧಿಸಿದ್ದ ಗಡುವನ್ನು ಮಂಡಳಿಯು ಹಲವು ಬಾರಿ ವಿಸ್ತರಣೆ ಮಾಡಿದೆ. ಎರಡೂ ಕಾರ್ಡ್​ಗಳ ಲಿಂಕ್ ಮಾಡುವುದಕ್ಕೆ 2022ರ ಮಾರ್ಚ್ 31ರ ಗಡುವು ನೀಡಲಾಗಿತ್ತು. ಈ ಗಡುವಿನ ಒಳಗೆ ಲಿಂಕ್ ಮಾಡದವರು ಈಗ ದಂಡ ಪಾವತಿಸುವ ಮೂಲಕ ಲಿಂಕ್ ಮಾಡುವ ಅವಕಾಶ ಹೊಂದಿದ್ದಾರೆ. ಆದರೆ, 2023ರ ಮಾರ್ಚ್ 31ರ ಬಳಿಕ ಈ ಅವಕಾಶವೂ ಇಲ್ಲವಾಗಲಿದೆ.

ಈ ವಿಚಾರವಾಗಿ ಎಚ್ಚರಿಕೆ ನೀಡಿ ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ. ‘ಆದಾಯ ತೆರಿಗೆ ಕಾಯ್ದೆ, 1961 ರ ಪ್ರಕಾರ, ವಿನಾಯಿತಿ ಪಡೆದ ವರ್ಗದಲ್ಲಿ ಬರದ ಎಲ್ಲಾ ಪ್ಯಾನ್ ಹೊಂದಿರುವವರಿಗೆ ಆಧಾರ್‌ನೊಂದಿಗೆ ಅದನ್ನು ಲಿಂಕ್ ಮಾಡಲು ಕೊನೆಯ ದಿನಾಂಕ 2023ರ ಮಾರ್ಚ್ 31 ಕೊನೆಯ ದಿನವಾಗಿದೆ. ಅಷ್ಟರೊಳಗೆ ಲಿಂಕ್ ಮಾಡದಿದ್ದರೆ, ಪ್ಯಾನ್ ನಿಷ್ಕ್ರಿಯವಾಗಲಿದೆ. ತಡ ಮಾಡಬೇಡಿ, ಇಂದೇ ಲಿಂಕ್ ಮಾಡಿ’ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಆನ್​ಲೈನ್​ನಲ್ಲಿ ಆಧಾರ್, ಪ್ಯಾನ್ ಲಿಂಕ್ ಮಾಡುವುದು ಹೇಗೆ?

  1. ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್​ಸೈಟ್​ಗೆ ಲಾಗಿನ್ ಆಗಿ.
  2. ಕ್ವಿಕ್ ಲಿಂಕ್ ವಿಭಾಗಕ್ಕೆ ತೆರಳಿ ಲಿಂಕ್ ಆಧಾರ್ ಆಪ್ಷನ್ ಕ್ಲಿಕ್ ಮಾಡಿ.
  3. ಹೊಸ ವಿಂಡೋ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಆಧಾರ್ ವಿವರ ಭರ್ತಿ ಮಾಡಿ. ಪ್ಯಾನ್ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿ.
  4. ‘ಆಧಾರ್ ವಿವರಗಳನ್ನು ವ್ಯಾಲಿಡೇಟ್ ಮಾಡುತ್ತಿದ್ದೇನೆ (I validate my Aadhar details) ಆಪ್ಷನ್ ಮೇಲೆ ಕ್ಲಿಕ್ ಮಾಡಿ.
  5. ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಅದನ್ನು ಭರ್ತಿ ಮಾಡಿ ‘ವ್ಯಾಲಿಡೇಟ್’ ಆಯ್ಕೆಯನ್ನು ಕ್ಲಿಕ್ ಮಾಡಿ.
  6. ದಂಡದ ಮೊತ್ತ ಪಾವತಿಸಲು ಆಯ್ಕೆ ಕಾಣಿಸುತ್ತದೆ. ಇದನ್ನು ಪಾವತಿ ಮಾಡಿದ ಬಳಿಕ ಪ್ಯಾನ್ ಹಾಗೂ ಆಧಾರ್ ಲಿಂಕ್ ಆಗುವುದಲ್ಲದೆ ಅದಕ್ಕೆ ಸಂಬಂಧಿಸಿದ ಸಂದೇಶ ನಿಮ್ಮ ಮೊಬೈಲ್​ಗೆ ಬರುತ್ತದೆ.

ಆಧಾರ್ ಜತೆಗೆ ಪ್ಯಾನ್ ಕಾರ್ಡ್ ಜೋಡಣೆ ಕುರಿತ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:12 am, Tue, 22 November 22

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ