AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar: ಆಧಾರ್ ಅಪ್​ಡೇಶನ್; ಡೆಡ್​ಲೈನ್​ಗೆ ಕೆಲವೇ ದಿನ; ಜೂನ್ 14ರೊಳಗೆ ಹೇಗೆ ಮಾಡುವುದು? ಅಪ್​ಡೇಟ್ ಮಾಡದಿದ್ದರೆ ಮುಂದೇನು?

June 14 Deadline For Free Aadhaar Update: ಆಧಾರ್ ಕಾರ್ಡ್ ಅನ್ನು ಯಾವುದೇ ಶುಲ್ಕ ಇಲ್ಲದೇ ಅಪ್​ಡೇಟ್ ಮಾಡಬೇಕೆನ್ನುವವರಿಗೆ ಜೂನ್ 14ರವರೆಗೂ ಕಾಲಾವಕಾಶ ಕೊಡಲಾಗಿದೆ. ಮೈ ಆಧಾರ್ ಪೋರ್ಟಲ್​ನಲ್ಲಿ ಮಾತ್ರ ಈ ಸೌಲಭ್ಯ ಇದೆ.

Aadhaar: ಆಧಾರ್ ಅಪ್​ಡೇಶನ್; ಡೆಡ್​ಲೈನ್​ಗೆ ಕೆಲವೇ ದಿನ; ಜೂನ್ 14ರೊಳಗೆ ಹೇಗೆ ಮಾಡುವುದು? ಅಪ್​ಡೇಟ್ ಮಾಡದಿದ್ದರೆ ಮುಂದೇನು?
ಆಧಾರ್ ಕಾರ್ಡ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 09, 2023 | 3:48 PM

Share

ಬೆಂಗಳೂರು: 10 ವರ್ಷಕ್ಕಿಂತ ಹೆಚ್ಚು ಕಾಲದಿಂದ ಅಪ್​ಡೇಟ್ ಆಗದೇ ಇರುವ ಆಧಾರ್ ಕಾರ್ಡನ್ನು ಅಪ್​ಡೇಟ್ (Aadhaar Card Updation) ಮಾಡುವಂತೆ ಸರ್ಕಾರ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೋಟ್ಯಂತರ ಜನರು ಆಧಾರ್ ಕಾರ್ಡ್​ನಲ್ಲಿರುವ ತಮ್ಮ ಮಾಹಿತಿಯನ್ನು ನವೀಕರಿಸುವ ಕೆಲಸ ಮಾಡುತ್ತಿದ್ದಾರೆ. ಆಧಾರ್ ಕೇಂದ್ರಕ್ಕೆ ಹೋಗಿ 50 ರೂ ಕೊಟ್ಟು ನಮ್ಮ ಡೆಮಾಗ್ರಾಫಿಕ್ ಮಾಹಿತಿ ಅಪ್​ಡೇಟ್ ಮಾಡಬಹುದು. ಆದರೆ, ಹೆಚ್ಚಿನ ಜನರು ಶೀಘ್ರದಲ್ಲಿ ಈ ಅಪ್​ಡೇಟ್ ಮಾಡಲು ಸಾಧ್ಯವಾಗುವಂತೆ ಆನ್​ಲೈನ್​ನಲ್ಲೂ ಅವಕಾಶ ಮಾಡಿಕೊಡಲಾಗಿದೆ. ಜೂನ್ 14ರವರೆಗೂ ನೀವು ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್ ಅಪ್​ಡೇಟ್ ಮಾಡಬಹುದು. ಯಾವುದೇ ಶುಲ್ಕ ಪಾವತಿಸಬೇಕಿಲ್ಲ. ಇದು ಯುಐಡಿಎಐನ ಅಧಿಕೃತ ವೆಬ್​ಸೈಟ್​ನಲ್ಲಿ (UIDAI Website) ಇರುವ ಆಫರ್. ಇನ್ನೈದು ದಿನದಲ್ಲಿ ಈ ಆಫರ್ ಮುಗಿಯುತ್ತದೆ. ಜೂನ್ 14ರವರೆಗೂ ಉಚಿತವಾಗಿ ನಮ್ಮ ಆಧಾರ್​ನ ಡೆಮೋಗ್ರಾಫಿಕ್ ವಿವರಗಳನ್ನು ಅಪ್​ಡೇಟ್ ಮಾಡಬಹುದು. ಡೆಮಾಗ್ರಾಫಿಕ್ ವಿವರ ಎಂದರೆ ನಮ್ಮ ವಿಳಾಸ, ಹೆಸರು, ಜನ್ಮದಿನಾಂಕ ಇತ್ಯಾದಿ. ಆದರೆ, ಈ ಉಚಿತ ಸೇವೆ ಕೇವಲ ಮೈ ಆಧಾರ್ ಪೋರ್ಟಲ್​ನಲ್ಲಿ ಮಾತ್ರವೇ.

10 ವರ್ಷ ಬಳಿಕ ಅಧಾರ್ ಕಾರ್ಡ್ ಅಪ್​ಡೇಟ್ ಆಗಬೇಕು ಎಂದಿದೆ ಸರ್ಕಾರ

ನಮ್ಮಲ್ಲಿ ಹೆಚ್ಚಿನ ಜನರು ಆಧಾರ್ ಕಾರ್ಡ್ ಮಾಡಿಸಿದಾಗಿನಿಂದ ಒಮ್ಮೆಯೂ ಅಪ್​ಡೇಟ್ ಮಾಡಿಲ್ಲ. 10 ವರ್ಷಗಳಿಂದ ಅಪ್​ಡೇಟ್ ಆಗದ ಆಧಾರ್ ಕಾರ್ಡ್ ಅನ್ನು ಅಪ್​ಡೇಟ್ ಮಾಡಬೇಕೆಂದು ಸರ್ಕಾರ ಜನಸಾಮಾನ್ಯರಿಗೆ ಸೂಚಿಸಿದೆ. ಐಡಿ ಪ್ರೂಫ್, ಅಡ್ರೆಸ್ ಪ್ರೂಫ್ ದಾಖಲೆಗಳನ್ನು ಆಧಾರ್​ಗೆ ಮತ್ತೊಮ್ಮೆ ಸಲ್ಲಿಸಬೇಕಾಗುತ್ತದೆ. ಇದರಿಂದ ಆಧಾರ್ ಡಾಟಾಬೇಸ್​ನಲ್ಲಿ ಸಮರ್ಪಕ ಮಾಹಿತಿ ಸಂಗ್ರಹವಾಗಿರುತ್ತದೆ.

ಜೂನ್ 14ರೊಳಗೆ ಆಧಾರ್ ಅಪ್​ಡೇಟ್ ಮಾಡದಿದ್ದರೆ…?

ಜೂನ್ 14ರೊಳಗೆ ಆಧಾರ್ ಕಾರ್ಡ್ ಅಪ್​ಡೇಟ್ ಮಾಡದೇ ಹೋದರೆ ಉಚಿತ ಎಂಬುದು ರದ್ದಾಗುವುದು ಬಿಟ್ಟರೆ ಬೇರೇನೂ ವ್ಯತ್ಯಾಸವಾಗದು. ಮಾಮೂಲಿಯ ರೀತಿಯಲ್ಲಿ ನೀವು ಆಧಾರ್ ಸೆಂಟರ್​ಗೆ ಹೋಗಿ ಆಧಾರ್ ವಿವರ ಅಪ್​ಡೇಟ್ ಮಾಡಿಸಬೇಕೆಂದರೆ 50 ರೂ ಶುಲ್ಕ ಪಾವತಿಸಲೇಬೇಕು. ಜೂನ್ 14ರ ನಂತರ ಮೈ ಆಧಾರ್ ಪೋರ್ಟಲ್​ನಲ್ಲೂ ನೀವು 50 ರೂ ಶುಲ್ಕ ಪಾವತಿಸಿಯೇ ಆಧಾರ್ ಅಪ್​ಡೇಶನ್ ಮಾಡಬೇಕಾಗುತ್ತದೆ.

ಇದನ್ನೂ ಓದಿHotstar Free: ಕ್ರಿಕೆಟ್ ಪ್ರಿಯರಿಗೆ ಖುಷಿ ಸುದ್ದಿ; ಜಿಯೋ ಹಾದಿ ಹಿಡಿದ ಹಾಟ್​ಸ್ಟಾರ್; ಏಷ್ಯಾಕಪ್, ವಿಶ್ವಕಪ್ ಫ್ರೀ ಸ್ಟ್ರೀಮಿಂಗ್

ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್ ಅಪ್​ಡೇಟ್ ಮಾಡುವುದು ಹೇಗೆ?

  • ಮೈ ಆಧಾರ್​ನ ಅಧಿಕೃತ ಪೋರ್ಟಲ್​ myaadhaar.uidai.gov.inಗೆ ಹೋಗಿ ಆಧಾರ್ ನಂಬರ್ ಬಳಸಿ ಲಾಗಿನ್ ಅಗಬೇಕು.
  • ಪ್ರೊಸೀಡ್ ಟು ಅಪ್​ಡೇಟ್ ಅಡ್ರೆಸ್ ಎಂಬ ಅಯ್ಕೆ ಆರಿಸಿಕೊಳ್ಳಿ
  • ಈಗ ನಿಮ್ಮ ಅಧಾರ್ ನೊಂದಾಯಿತ ಮೊಬೈಲ್​ಗೆ ಓಟಿಪಿ ಬರುತ್ತದೆ.
  • ಒಟಿಪಿ ಹಾಕಿದ ಬಳಿಕ ಡಾಕ್ಯುಮೆಂಟ್ ಅಪ್​ಡೆಟ್ ಮೇಲೆ ಕ್ಲಿಕ್ ಮಾಡಿ.
  • ಈಗ ವ್ಯಕ್ತಿಯ ವಿವರ ಕಾಣಿಸುತ್ತದೆ. ಅದು ಸರಿಯಾಗಿದ್ದರೆ ಮುಂದಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಬಳಿಕ ಐಡಿ ಮತ್ತು ಅಡ್ರೆಸ್ ಪ್ರೂಫ್ ದಾಖಲೆಗಳನ್ನು ಆಯ್ದುಕೊಳ್ಳಿ.
  • ನೀವು ಸ್ಕ್ಯಾನ್ ಮಾಡಿದ ಈ ದಾಖಲೆಗಳ ಪ್ರತಿತಿಯನ್ನು ಅಪ್​ಲೋಡ್ ಮಾಡಿ
  • ಈಗ ನಿಮ್ಮ ಮನವಿ ಸ್ವೀಕೃತವಾಗುತ್ತದೆ. 14 ಅಂಕಿಗಳ ಯುಆರ್​ಎನ್ ನಂಬರ್ ಜನರೇಟ್ ಆಗುತ್ತದೆ.

ಕೆಲ ದಿನಗಳ ಬಳಿಕ ಆಧಾರ್ ಕಾರ್ಡ್​ನಲ್ಲಿ ನಿಮ್ಮ ಹೊಸ ಮಾಹಿತಿ ಅಪ್​ಡೇಟ್ ಆಗಿರುತ್ತದೆ. ಅದನ್ನು ನೀವು ಯುಆರ್​ಎನ್ ನಂಬರ್ ಬಳಸಿ ಟ್ರ್ಯಾಕ್ ಮಾಡಬಹುದು. ಅಪ್​ಡೇಟ್ ಆದ ಆಧಾರ್ ಕಾರ್ಡ್​ನ ಪ್ರಿಂಟೌಟ್ ಪಡೆದು ನಿಮ್ಮ ಬಳಿ ಇಟ್ಟುಕೊಳ್ಳಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!