AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accenture Employees Bonus: ಆಕ್ಸೆಂಚರ್​ನ 2 ಲಕ್ಷ ಸಿಬ್ಬಂದಿಗೆ ದೊರೆಯಲಿದೆ ಬೋನಸ್

ಆಕ್ಸೆಂಚರ್ ಕಂಪೆನಿಯಿಂದ ಸಿಬ್ಬಂದಿಗೆ ಬೋನಸ್ ನೀಡುವ ಘೋಷಣೆ ಮಾಡಲಾಗಿದೆ. ಇದರಿಂದ ಭಾರತದಲ್ಲಿನ 2 ಲಕ್ಷ ಸಿಬ್ಬಂದಿಗೆ ಅನುಕೂಲ ಆಗುತ್ತದೆ. ಒಂದು ವಾರಕ್ಕೆ ಸಮವಾದ ಮೂಲವೇತನ ಬೋನಸ್ ಆಗಿ ಉದ್ಯೋಗಿಗಳಿಗೆ ಸಿಗುತ್ತದೆ.

Accenture Employees Bonus: ಆಕ್ಸೆಂಚರ್​ನ 2 ಲಕ್ಷ ಸಿಬ್ಬಂದಿಗೆ ದೊರೆಯಲಿದೆ ಬೋನಸ್
ಸಾಂದರ್ಭಿಕ ಚಿತ್ರ
Srinivas Mata
|

Updated on:Mar 19, 2021 | 12:51 PM

Share

ಐಟಿ ಹಾಗೂ ವೃತ್ತಿಪರ ಸೇವೆಗಳನ್ನು ಒದಗಿಸುವ ಆಕ್ಸೆಂಚರ್ ಕಂಪೆನಿಯು ಆಯಾ ಸಿಬ್ಬಂದಿ ಮೂಲವೇತನದ ಒಂದು ವಾರದ ಮೊತ್ತವನ್ನು ಬೋನಸ್ ಆಗಿ ನೀಡಲಿದೆ ಎಂದು ಗುರುವಾರ ಹೇಳಿದೆ. ಕೊರೊನಾ ಬಿಕ್ಕಟ್ಟಿನ ಸವಾಲು ಇರುವಾಗಲೂ ಒಂದು ಸಲದ ಈ ಬೋನಸ್ ವಿತರಣೆ ಮಾಡಲಾಗುತ್ತಿದೆ. ಉದ್ಯೋಗಿಗಳು ಕಂಪೆನಿಗೆ ನೀಡಿದ ಕೊಡುಗೆಗೆ ಪ್ರತಿಯಾಗಿ ಈ ಬೋನಸ್ ನೀಡಲಾಗುತ್ತಿದೆ. ಅಂದ ಹಾಗೆ ಭಾರತದಲ್ಲೇ ಆಕ್ಸೆಂಚರ್ ಕಂಪೆನಿಗೆ ಎರಡು ಲಕ್ಷ ಸಿಬ್ಬಂದಿ ಇದ್ದಾರೆ. ಫೆಬ್ರವರಿ 28, 2021ಕ್ಕೆ ಕೊನೆಯಾದ ಎರಡನೇ ತ್ರೈಮಾಸಿಕದಲ್ಲಿ ಆಕ್ಸೆಂಚರ್ ಕಂಪೆನಿಯು ಆದಾಯದಲ್ಲಿ ಶೇಕಡಾ 8ರಷ್ಟು ಬೆಳವಣಿಗೆ ಕಂಡು, 12.09 ಬಿಲಿಯನ್ ಅಮೆರಿಕನ್ ಡಾಲರ್ ತಲುಪಿತ್ತು.

ಕಂಪೆನಿಯ ನಿವ್ವಳ ಆದಾಯವು ಎರಡನೇ ತ್ರೈಮಾಸಿಕದಲ್ಲಿ 1.46 ಬಿಲಿಯನ್ ಡಾಲರ್ ಆಗಿತ್ತು. ಕಳೆದ ವರ್ಷದ ಇದೇ ಅವಧಿಯಲ್ಲಿ 1.25 ಬಿಲಿಯನ್ ಡಾಲರ್ ನಿವ್ವಳ ಲಾಭ ಬಂದಿತ್ತು. “ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ಕೆಳಗಿರುವವರಿಗೆ ಕಂಪೆನಿಯಿಂದ ಒಂದು ವಾರಕ್ಕೆ ಸಮನಾಗುವ ಮೂಲವೇತನದಷ್ಟು ಬೋನಸ್ ಘೋಷಣೆ ಮಾಡಲಾಗಿದೆ. ಈ ಸವಾಲಿನ ವರ್ಷದಲ್ಲಿ ಗ್ರಾಹಕರಿಗೆ ಆಕ್ಸೆಂಚರ್ ಸಿಬ್ಬಂದಿ ತೋರಿದ ಬದ್ಧತೆ ಹಾಗೂ ಅಭೂತಪೂರ್ವ ಕೊಡುಗೆಯನ್ನು ಗುರುತಿಸಿದೆ,” ಎಂದು ಹಣಕಾಸು ವರದಿಯಲ್ಲಿ ಕಂಪೆನಿಯು ಹೇಳಿದೆ.

ಕಳೆದ ವರ್ಷಕ್ಕೆ ಇದೇ ಅವಧಿಗೆ ಹೋಲಿಸಿದಲ್ಲಿ ಕಂಪೆನಿಯು ಹೊಸ ಬುಕ್ಕಿಂಗ್ 16 ಬಿಲಿಯನ್ ಯುಎಸ್​ಡಿ ತಲುಪುವ ಮೂಲಕ ಶೇ 13ರಷ್ಟು ಏರಿಕೆ ದಾಖಲಿಸಿದೆ. “2021ರ ಹಣಕಾಸು ವರ್ಷದಲ್ಲಿ ಕಂಪೆನಿಯು ಕಾರ್ಯನಿರ್ವಹಣೆ ನಗದು ಹರಿವು 7.65 ಬಿಲಿಯನ್​​ನಿಂದ 8.15 ಬಿಲಿಯನ್ ಯುಎಸ್​ಡಿ ನಿರೀಕ್ಷಿಸುತ್ತಿದೆ. ಈ ಹಿಂದೆ ಆ ಪ್ರಮಾಣ 6.65 ಬಿಲಿಯನ್ ಯುಎಸ್​ಡಿಯಿಂದ 7.15 ಬಿಲಿಯನ್ ಯುಎಸ್​ಡಿ ಇತ್ತು,” ಎಂದು ಆಕ್ಸೆಂಚರ್ ಹೇಳಿದೆ.

ಇದನ್ನೂ ಓದಿ: ಇನ್ಫೋಸಿಸ್ ಸಿಬ್ಬಂದಿ, ಹತ್ತಿರ ಸಂಬಂಧಿಗಳಿಗೆ ಕಂಪೆನಿಯೇ ಭರಿಸಲಿದೆ ಕೊರೊನಾ ಲಸಿಕೆ ವೆಚ್ಚ

Published On - 12:44 pm, Fri, 19 March 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ