AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accenture Employees Bonus: ಆಕ್ಸೆಂಚರ್​ನ 2 ಲಕ್ಷ ಸಿಬ್ಬಂದಿಗೆ ದೊರೆಯಲಿದೆ ಬೋನಸ್

ಆಕ್ಸೆಂಚರ್ ಕಂಪೆನಿಯಿಂದ ಸಿಬ್ಬಂದಿಗೆ ಬೋನಸ್ ನೀಡುವ ಘೋಷಣೆ ಮಾಡಲಾಗಿದೆ. ಇದರಿಂದ ಭಾರತದಲ್ಲಿನ 2 ಲಕ್ಷ ಸಿಬ್ಬಂದಿಗೆ ಅನುಕೂಲ ಆಗುತ್ತದೆ. ಒಂದು ವಾರಕ್ಕೆ ಸಮವಾದ ಮೂಲವೇತನ ಬೋನಸ್ ಆಗಿ ಉದ್ಯೋಗಿಗಳಿಗೆ ಸಿಗುತ್ತದೆ.

Accenture Employees Bonus: ಆಕ್ಸೆಂಚರ್​ನ 2 ಲಕ್ಷ ಸಿಬ್ಬಂದಿಗೆ ದೊರೆಯಲಿದೆ ಬೋನಸ್
ಸಾಂದರ್ಭಿಕ ಚಿತ್ರ
Srinivas Mata
|

Updated on:Mar 19, 2021 | 12:51 PM

Share

ಐಟಿ ಹಾಗೂ ವೃತ್ತಿಪರ ಸೇವೆಗಳನ್ನು ಒದಗಿಸುವ ಆಕ್ಸೆಂಚರ್ ಕಂಪೆನಿಯು ಆಯಾ ಸಿಬ್ಬಂದಿ ಮೂಲವೇತನದ ಒಂದು ವಾರದ ಮೊತ್ತವನ್ನು ಬೋನಸ್ ಆಗಿ ನೀಡಲಿದೆ ಎಂದು ಗುರುವಾರ ಹೇಳಿದೆ. ಕೊರೊನಾ ಬಿಕ್ಕಟ್ಟಿನ ಸವಾಲು ಇರುವಾಗಲೂ ಒಂದು ಸಲದ ಈ ಬೋನಸ್ ವಿತರಣೆ ಮಾಡಲಾಗುತ್ತಿದೆ. ಉದ್ಯೋಗಿಗಳು ಕಂಪೆನಿಗೆ ನೀಡಿದ ಕೊಡುಗೆಗೆ ಪ್ರತಿಯಾಗಿ ಈ ಬೋನಸ್ ನೀಡಲಾಗುತ್ತಿದೆ. ಅಂದ ಹಾಗೆ ಭಾರತದಲ್ಲೇ ಆಕ್ಸೆಂಚರ್ ಕಂಪೆನಿಗೆ ಎರಡು ಲಕ್ಷ ಸಿಬ್ಬಂದಿ ಇದ್ದಾರೆ. ಫೆಬ್ರವರಿ 28, 2021ಕ್ಕೆ ಕೊನೆಯಾದ ಎರಡನೇ ತ್ರೈಮಾಸಿಕದಲ್ಲಿ ಆಕ್ಸೆಂಚರ್ ಕಂಪೆನಿಯು ಆದಾಯದಲ್ಲಿ ಶೇಕಡಾ 8ರಷ್ಟು ಬೆಳವಣಿಗೆ ಕಂಡು, 12.09 ಬಿಲಿಯನ್ ಅಮೆರಿಕನ್ ಡಾಲರ್ ತಲುಪಿತ್ತು.

ಕಂಪೆನಿಯ ನಿವ್ವಳ ಆದಾಯವು ಎರಡನೇ ತ್ರೈಮಾಸಿಕದಲ್ಲಿ 1.46 ಬಿಲಿಯನ್ ಡಾಲರ್ ಆಗಿತ್ತು. ಕಳೆದ ವರ್ಷದ ಇದೇ ಅವಧಿಯಲ್ಲಿ 1.25 ಬಿಲಿಯನ್ ಡಾಲರ್ ನಿವ್ವಳ ಲಾಭ ಬಂದಿತ್ತು. “ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ಕೆಳಗಿರುವವರಿಗೆ ಕಂಪೆನಿಯಿಂದ ಒಂದು ವಾರಕ್ಕೆ ಸಮನಾಗುವ ಮೂಲವೇತನದಷ್ಟು ಬೋನಸ್ ಘೋಷಣೆ ಮಾಡಲಾಗಿದೆ. ಈ ಸವಾಲಿನ ವರ್ಷದಲ್ಲಿ ಗ್ರಾಹಕರಿಗೆ ಆಕ್ಸೆಂಚರ್ ಸಿಬ್ಬಂದಿ ತೋರಿದ ಬದ್ಧತೆ ಹಾಗೂ ಅಭೂತಪೂರ್ವ ಕೊಡುಗೆಯನ್ನು ಗುರುತಿಸಿದೆ,” ಎಂದು ಹಣಕಾಸು ವರದಿಯಲ್ಲಿ ಕಂಪೆನಿಯು ಹೇಳಿದೆ.

ಕಳೆದ ವರ್ಷಕ್ಕೆ ಇದೇ ಅವಧಿಗೆ ಹೋಲಿಸಿದಲ್ಲಿ ಕಂಪೆನಿಯು ಹೊಸ ಬುಕ್ಕಿಂಗ್ 16 ಬಿಲಿಯನ್ ಯುಎಸ್​ಡಿ ತಲುಪುವ ಮೂಲಕ ಶೇ 13ರಷ್ಟು ಏರಿಕೆ ದಾಖಲಿಸಿದೆ. “2021ರ ಹಣಕಾಸು ವರ್ಷದಲ್ಲಿ ಕಂಪೆನಿಯು ಕಾರ್ಯನಿರ್ವಹಣೆ ನಗದು ಹರಿವು 7.65 ಬಿಲಿಯನ್​​ನಿಂದ 8.15 ಬಿಲಿಯನ್ ಯುಎಸ್​ಡಿ ನಿರೀಕ್ಷಿಸುತ್ತಿದೆ. ಈ ಹಿಂದೆ ಆ ಪ್ರಮಾಣ 6.65 ಬಿಲಿಯನ್ ಯುಎಸ್​ಡಿಯಿಂದ 7.15 ಬಿಲಿಯನ್ ಯುಎಸ್​ಡಿ ಇತ್ತು,” ಎಂದು ಆಕ್ಸೆಂಚರ್ ಹೇಳಿದೆ.

ಇದನ್ನೂ ಓದಿ: ಇನ್ಫೋಸಿಸ್ ಸಿಬ್ಬಂದಿ, ಹತ್ತಿರ ಸಂಬಂಧಿಗಳಿಗೆ ಕಂಪೆನಿಯೇ ಭರಿಸಲಿದೆ ಕೊರೊನಾ ಲಸಿಕೆ ವೆಚ್ಚ

Published On - 12:44 pm, Fri, 19 March 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್