AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani FPO: ಅದಾನಿ ಎಂಟರ್​ಪ್ರೈಸಸ್ ಎಫ್​ಪಿಒ ಇಂದೇ ಕೊನೆ; ಷೇರು ಖರೀದಿಗೆ ಶೇ 7-12 ರಿಯಾಯಿತಿ

ಕಳೆದ ಶುಕ್ರವಾರ (ಜನವರಿ 27) ಅದಾನಿ ಎಂಟರ್​ಪ್ರೈಸಸ್ ಎಫ್​ಪಿಒ ಆರಂಭಗೊಂಡಿತ್ತು. ಹೊಸ ಷೇರುಗಳ ಬಿಡುಗಡೆ ಮೂಲಕ 20,000 ಕೋಟಿ ರೂ. ಸಂಗ್ರಹದ ಗುರಿಯನ್ನು ಕಂಪನಿ ಹೊಂದಿದ್ದು, ದೇಶದ ಅತಿದೊಡ್ಡ ಪ್ರಮಾಣದ ಎಫ್​ಪಿಒ ಇದಾಗಿದೆ.

Adani FPO: ಅದಾನಿ ಎಂಟರ್​ಪ್ರೈಸಸ್ ಎಫ್​ಪಿಒ ಇಂದೇ ಕೊನೆ; ಷೇರು ಖರೀದಿಗೆ ಶೇ 7-12 ರಿಯಾಯಿತಿ
ಅದಾನಿ ಗ್ರೂಪ್ ಮತ್ತು ಗೌತಮ್ ಅದಾನಿ (ಸಂಗ್ರಹ ಚಿತ್ರ)
Follow us
Ganapathi Sharma
|

Updated on:Jan 31, 2023 | 11:01 AM

ಮುಂಬೈ: ಅದಾನಿ ಸಮೂಹದ ಅಧೀನದಲ್ಲಿ ಕಾರ್ಯನಿರ್ವಹಿಸುವ ಅದಾನಿ ಎಂಟರ್​ಪ್ರೈಸಸ್ (Adani Enterprises) ಎಫ್​ಪಿಒ (Follow-On Public Offer) ಇಂದು ಕೊನೆಯಾಗುತ್ತಿದ್ದು, ಶೇ 7-12 ರಿಯಾಯಿತಿ ದರದಲ್ಲಿ ಕಂಪನಿ ಷೇರುಗಳು ಖರೀದಿಗೆ ಲಭ್ಯವಿರಲಿವೆ. ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ವರದಿಯ ಪರಿಣಾಮ ಕಂಪನಿಯ ಷೇರು ಮೌಲ್ಯದಲ್ಲಿ ಕಳೆದ ವಾರ ಕುಸಿತವಾಗಿದ್ದರೂ ಸೋಮವಾರದ ವಹಿವಾಟಿನ ಕೊನೆಯಲ್ಲಿ ಶೇ 4.2ರ ಚೇತರಿಕೆ ಕಂಡುಬಂದಿತ್ತು. ದಿನದ ವಹಿವಾಟಿನ ಅಂತ್ಯದಲ್ಲಿ ಕಂಪನಿಯ ಷೇರು ಬೆಲೆ 2,878 ರೂ. ಆಗಿತ್ತು. ಎಫ್​ಪಿಒಗೆ ನಿಗದಿ ಮಾಡಿರುವ 3,112-3,276 ರೂ.ಗಿಂತ ಶೇ 7-12ರ ರಿಯಾಯಿತಿಯಲ್ಲಿ ಷೇರುಗಳು ದೊರೆಯಲಿವೆ ಎಂದು ಷೇರು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಶುಕ್ರವಾರದ ವಹಿವಾಟಿನಲ್ಲಿ ಅದಾನಿ ಎಂಟರ್​​ಪ್ರೈಸಸ್ ಷೇರು ಮೌಲ್ಯದಲ್ಲಿ ಶೇ 18ರಷ್ಟು ಕುಸಿತವಾಗಿತ್ತು. ಬುಧವಾರ ಶೇ 1.18ರಷ್ಟು ಕುಸಿತ ದಾಖಲಾಗಿತ್ತು. ಅದಾನಿ ಕಂಪನಿಗಳ ಪೈಕಿ ನಾಲ್ಕು ಕಂಪನಿಗಳ ಷೇರು ಮೌಲ್ಯದಲ್ಲಿ ಸೋಮವಾರ ಕುಸಿತವಾಗಿತ್ತು. ಆದರೆ, ಅದಾನಿ ಎಂಟರ್​​ಪ್ರೈಸಸ್, ಅಂಬುಜಾ ಸಿಮೆಂಟ್ಸ್ ಮತ್ತು ಎಸಿಸಿ ಷೇರು ಮೌಲ್ಯದಲ್ಲಿ ಶೇ 1.65 ಮತ್ತು ಶೇ 1.1 ರ ವೃದ್ಧಿ ದಾಖಲಾಗಿತ್ತು. ಆದರೆ ಒಟ್ಟಾರೆಯಾಗಿ ಸಮೂಹದ ಮಾರುಕಟ್ಟೆ ಬಂಡವಾಳದಲ್ಲಿ 1.36 ಲಕ್ಷ ಕೋಟಿ ಕುಸಿತವಾಗಿದೆ. ಇದರೊಂದಿಗೆ ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ ಅದಾನಿ ಸಮೂಹದ ಸಂಪತ್ತು ಒಟ್ಟು 5.56 ಲಕ್ಷ ಕೋಟಿ ಕರಗಿದಂತಾಗಿದೆ.

ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಅದಾನಿ

ಕಂಪನಿಗಳ ಸಂಪತ್ತು ಗಣನೀಯವಾಗಿ ಕುಸಿದ ಬೆನ್ನಲ್ಲೇ ಗೌತಮ್ ಅದಾನಿ ಸಂಪತ್ತಿನಲ್ಲಿಯೂ ಭಾರೀ ಕುಸಿತವಾಗಿದೆ. ಫೋರ್ಬ್ಸ್​ ಬಿಲಿಯನೇರ್​ಗಳ ಪಟ್ಟಿಯಲ್ಲಿ ಅವರು ಸೋಮವಾರ 8ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ನಿವ್ವಳ ಸಂಪತ್ತಿನ ಮೌಲ್ಯ 8.1 ಶತಕೋಟಿ ಡಾಲರ್ ಆಗಿದೆ.

ಇದನ್ನೂ ಓದಿ: IMF on India Growth: ಭಾರತದ ಆರ್ಥಿಕತೆ ಉಜ್ವಲವಾಗಿದೆ; ಭಾರತದ ಪ್ರಗತಿ ಬಗ್ಗೆ ಭರವಸೆ ಹೆಚ್ಚಿಸಿದ ಐಎಂಎಫ್ ವರದಿ

ಕಳೆದ ಶುಕ್ರವಾರ (ಜನವರಿ 27) ಅದಾನಿ ಎಂಟರ್​ಪ್ರೈಸಸ್ ಎಫ್​ಪಿಒ ಆರಂಭಗೊಂಡಿತ್ತು. ಹೊಸ ಷೇರುಗಳ ಬಿಡುಗಡೆ ಮೂಲಕ 20,000 ಕೋಟಿ ರೂ. ಸಂಗ್ರಹದ ಗುರಿಯನ್ನು ಕಂಪನಿ ಹೊಂದಿದ್ದು, ದೇಶದ ಅತಿದೊಡ್ಡ ಪ್ರಮಾಣದ ಎಫ್​ಪಿಒ ಇದಾಗಿದೆ. ಎಷ್ಟು ಮೊತ್ತ ಸಂಗ್ರಹವಾಗಲಿದೆ ಎಂಬುದು ಇಂದಿನ (ಜನವರಿ 31) ವಹಿವಾಟಿನ ಕೊನೆಯಲ್ಲಿ ತಿಳಿದುಬರಲಿದೆ.

ಏನಿದು ಎಫ್​ಪಿಒ?

ಎಫ್​​ಪಿಒ ಇದರ ವಿಸ್ತೃತ ರೂಪ ‘ಫಾಲೋ ಆನ್ ಪಬ್ಲಿಕ್ ಆಫರಿಂಗ್’. ಇದು ಐಪಿಒ (ಇನಿಷಿಯಲ್ ಪಬ್ಲಿಕ್ ಆಫರಿಂಗ್)​ ಅಥವಾ ಆರಂಭಿಕ ಸಾರ್ವಜನಿಕ ಕೊಡುಗೆಗಿಂತ ಭಿನ್ನ. ಆರಂಭಿಕ ಸಾರ್ವಜನಿಕ ಕೊಡುಗೆ ಎಂದರೆ ಕಂಪನಿಯೊಂದು ಷೇರುಗಳನ್ನು ಮಾರಾಟ ಮಾಡುವ ಮೂಲಕ ಷೇರು ಮಾರುಕಟ್ಟೆ ಪ್ರವೇಶಿಸುವ ಹಂತ. ಸರಳವಾಗಿ ಹೇಳುವುದಾದರೆ ಇದರ ನಂತರದ ಹಂತವೇ ಎಫ್​ಪಿಒ. ಕಂಪನಿಯೊಂದು ಐಪಿಒ ಮೂಲಕ ಷೇರು ಮಾರಾಟ ಮಾಡಿದ ನಂತರದಲ್ಲಿ, ಮತ್ತಷ್ಟು ಬಂಡವಾಳ ಸಂಗ್ರಹಕ್ಕಾಗಿ ಹೆಚ್ಚುವರಿಯಾಗಿ ಷೇರುಗಳನ್ನು ಬಿಡುಗಡೆ ಮಾಡುವುದೇ ‘ಫಾಲೋ ಆನ್ ಪಬ್ಲಿಕ್ ಆಫರಿಂಗ್ ಅಥವಾ ಎಫ್​ಪಿಒ’. ಉದ್ಯಮದ ವಿಸ್ತರಣೆಗಾಗಿ, ಸಾಲ ತೀರಿಸಲು ಮತ್ತು ಇತರ ಮುಖ್ಯ ಉದ್ದೇಶಗಳಿಗಾಗಿ ದೊಡ್ಡ ಮಟ್ಟದ ಬಂಡವಾಳ ಸಂಗ್ರಹಣೆ ಗುರಿಯೊಂದಿಗೆ ಕಂಪನಿಗಳು ಎಫ್​ಪಿಒ ಹಮ್ಮಿಕೊಳ್ಳುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:23 am, Tue, 31 January 23

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?