AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಸಿ ಮತ್ತು ಅಂಬುಜಾ ಸಿಮೆಂಟ್ಸ್‌ನ ಷೇರುಗಳಲ್ಲಿ ಇಂದು ಶೇ.10 ರಷ್ಟು ಏರಿಕೆ

ಅಂಬುಜಾ ಸಿಮೆಂಟ್ಸ್ ಮತ್ತು ಅದರ ಅಂಗಸಂಸ್ಥೆ ಎಸಿಸಿ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಂಡ ಬೆನ್ನಲ್ಲೆ ಅದಾನಿ ಎಂಟರ್‌ಪ್ರೈಸಸ್, ಎಸಿಸಿ ಮತ್ತು ಅಂಬುಜಾ ಸಿಮೆಂಟ್ಸ್‌ನ ಷೇರುಗಳು ಇಂದು ಶೇಕಡಾ 10 ರಷ್ಟು ಏರಿಕೆ ಕಂಡವು.

ಎಸಿಸಿ ಮತ್ತು ಅಂಬುಜಾ ಸಿಮೆಂಟ್ಸ್‌ನ ಷೇರುಗಳಲ್ಲಿ ಇಂದು ಶೇ.10 ರಷ್ಟು ಏರಿಕೆ
ಎಸಿಸಿ ಮತ್ತು ಅಂಬುಜಾ ಸಿಮೆಂಟ್ಸ್‌ನ ಷೇರುಗಳು ಇಂದು ಶೇಕಡಾ 10 ರಷ್ಟು ಏರಿಕೆ ಕಂಡವು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 19, 2022 | 4:27 PM

Share

ಅದಾನಿ ಎಂಟರ್‌ಪ್ರೈಸಸ್ (Adani Enterprises), ಎಸಿಸಿ ಮತ್ತು ಅಂಬುಜಾ ಸಿಮೆಂಟ್ಸ್‌ (ACC Cement and Ambuja Cement)ನ ಷೇರುಗಳು ಇಂದು ಶೇಕಡಾ 10 ರಷ್ಟು ಏರಿಕೆ ಕಂಡವು. ಅದಾನಿ ಗ್ರೂಪ್ ಶುಕ್ರವಾರ ಅಂಬುಜಾ ಸಿಮೆಂಟ್ಸ್ ಮತ್ತು ಅದರ ಅಂಗಸಂಸ್ಥೆ ಎಸಿಸಿ ಲಿಮಿಟೆಡ್ ಅನ್ನು ಸ್ವಿಟ್ಜರ್ಲೆಂಡ್‌ನ ಹೋಲ್ಸಿಮ್ ಗ್ರೂಪ್‌ನಿಂದ 6.4 ಬಿಲಿಯನ್‌ಗೆ ಸ್ವಾಧೀನಪಡಿಸಿಕೊಂಡಿತು. ಅದರಂತೆ ಆದಿತ್ಯ ಬಿರ್ಲಾ ಗ್ರೂಪ್‌ (Aditya Birla Group)ನ ಅಲ್ಟ್ರಾಟೆಕ್ ಸಿಮೆಂಟ್‌ (Ultratech Cement)ನ ನಂತರ ಅದಾನಿಯ ಎಸಿಸಿ ಸಿಮೆಂಟ್ ಭಾರತದಲ್ಲಿ ಎರಡನೇ ಅತಿದೊಡ್ಡ ಸಿಮೆಂಟ್ ಕಂಪನಿಯಾಗಿದೆ. ಇದರ ಬೆನ್ನಲ್ಲೇ ಷೇರುಗಳು ಶೇಕಡಾ 10 ರಷ್ಟು ಏರಿಕೆ ಕಂಡಿವೆ.

ಸ್ವಾದೀನ ಪ್ರಕ್ರಿಯೆ ಪೂರ್ಣಗೊಂಡ ಬೆಳವಣಿಗೆಯಿಂದ ಉತ್ತೇಜಿತಗೊಂಡಿರುವ ಅಂಬುಜಾ ಸಿಮೆಂಟ್ಸ್ ಷೇರುಗಳು ದಾಖಲೆಯ ಗರಿಷ್ಠ 567.9 ರೂ.ಗೆ ತಲುಪಿ, ಬಿಎಸ್‌ಇಯಲ್ಲಿ ಹಿಂದಿನ 516.30 ರೂ.ಗೆ ಹೋಲಿಸಿದರೆ ಶೇ.9.99ರಷ್ಟು ಏರಿಕೆ ಕಂಡಿದೆ. ಅಂಬುಜಾ ಸಿಮೆಂಟ್ಸ್ ಸ್ಟಾಕ್ ಸರಾಸರಿಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದೆ. ಸ್ಟಾಕ್ ಒಂದು ವರ್ಷದಲ್ಲಿ 32.52 ರಷ್ಟು ಏರಿಕೆಯಾಗಿದೆ ಮತ್ತು 2022 ರಲ್ಲಿ 47.42 ಶೇಕಡಾವನ್ನು ಗಳಿಸಿದೆ. ಒಂದು ತಿಂಗಳಲ್ಲಿ ಸ್ಟಾಕ್ 32.49 ಶೇಕಡಾವನ್ನು ಗಳಿಸಿದೆ. ಬಿಎಸ್‌ಇಯಲ್ಲಿ 99.82 ಕೋಟಿ ವಹಿವಾಟು ನಡೆದಿದೆ. ಹೆಚ್ಚುವರಿಯಾಗಿ, ಅದಾನಿ ಗ್ರೂಪ್ ಷೇರುಗಳ ಆದ್ಯತೆಯ ಹಂಚಿಕೆಯ ಮೂಲಕ ಅಂಬುಜಾ ಸಿಮೆಂಟ್ಸ್‌ಗೆ 20,000 ಕೋಟಿ ರೂಪಾಯಿಗಳನ್ನು ತುಂಬಲಿದೆ ಎಂದು ವರದಿಗಳು ತಿಳಿಸಿವೆ.

ಅದಾನಿ ಕುಟುಂಬವು ಅಂಬುಜಾ ಸಿಮೆಂಟ್ಸ್ ಮತ್ತು ಎಸಿಸಿಯ ಸ್ವಾಧೀನವನ್ನು ಪೂರ್ಣಗೊಳಿಸಿದೆ ಮತ್ತು ದೇಶದ ಎರಡನೇ ಅತಿದೊಡ್ಡ ಸಿಮೆಂಟ್ ಕಂಪನಿಯಾಗಿದೆ. ಎಸಿಸಿಯಲ್ಲಿ ಅದಾನಿಯವರ ಪಾಲು ಈಗ ಶೇ.56.7ರಷ್ಟಿದ್ದರೆ ಅಂಬುಜಾದಲ್ಲಿ ಶೇ.63.2ರಷ್ಟಿದೆ. ಸ್ವಾಧೀನದ ನಂತರ, ಎರಡೂ ಕಂಪನಿಗಳು ತಮ್ಮ ನಿರ್ವಹಣೆ ಮತ್ತು ಮಂಡಳಿಗಳನ್ನು ಬದಲಾಯಿಸಿವೆ ಮತ್ತು ಜನವರಿ-ಡಿಸೆಂಬರ್‌ನಿಂದ ಏಪ್ರಿಲ್-ಮಾರ್ಚ್‌ಗೆ ಹಣಕಾಸು ವರ್ಷದಲ್ಲಿ ಬದಲಾವಣೆಯನ್ನು ಘೋಷಿಸಿವೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್