AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tunnel collapse: ಉತ್ತರಾಖಂಡ್ ಸುರಂಗ ನಿರ್ಮಾಣಕ್ಕೂ ನಮಗೂ ಯಾವ ಸಂಬಂಧವೂ ಇಲ್ಲ: ಅದಾನಿ ಗ್ರೂಪ್ ಸ್ಪಷ್ಟನೆ

Adani Group Clarification: ಉತ್ತರಾಖಂಡ್​ನ ಚಾರ್​ಧಾಮ್ ಯೋಜನೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಸಿಲ್ಕ್ಯಾರಾ ಸುರಂಗ ಕುಸಿತದಲ್ಲಿ ಸಿಲುಕಿರುವ 41 ಮಂದಿಯ ರಕ್ಷಣೆ ಇನ್ನೂ ಸಾಧ್ಯವಾಗಿಲ್ಲ. ಈ ಸುರಂಗ ನಿರ್ಮಾಣದಲ್ಲಿ ಅದಾನಿ ಗ್ರೂಪ್ ಭಾಗಿಯಾಗಿದೆ ಎನ್ನುವಂತಹ ಸುದ್ದಿ ಇದೆ. ಆದರೆ, ಸಂಸ್ಥೆ ಈ ಸುದ್ದಿಯನ್ನು ಬಲವಾಗಿ ತಳ್ಳಿಹಾಕಿದೆ. ತಮ್ಮ ಯಾವುದೇ ಸಂಸ್ಥೆಗೂ ಈ ಸುರಂಬ ನಿರ್ಮಾಣ ಮಾಡುತ್ತಿರುವ ಕಂಪನಿಗೂ ಯಾವ ಸಂಬಂಧ ಇಲ್ಲ ಎಂದು ಅದಾನಿ ಗ್ರೂಪ್ ಹೇಳಿದೆ.

Tunnel collapse: ಉತ್ತರಾಖಂಡ್ ಸುರಂಗ ನಿರ್ಮಾಣಕ್ಕೂ ನಮಗೂ ಯಾವ ಸಂಬಂಧವೂ ಇಲ್ಲ: ಅದಾನಿ ಗ್ರೂಪ್ ಸ್ಪಷ್ಟನೆ
ಉತ್ತರಾಖಂಡ್ ಸುರಂಗ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 27, 2023 | 6:17 PM

Share

ನವದೆಹಲಿ, ನವೆಂಬರ್ 27: ಉತ್ತರಾಖಂಡ್ ರಾಜ್ಯದ ಸಿಲ್​ಕ್ಯಾರಾ ಸುರಂಗ (Silkyara tunnel) ಕುಸಿತಗೊಂಡ ಪರಿಣಾಮ ಕಳೆದ ಎರಡು ವಾರಗಳಿಂದ 41 ಮಂದಿ ಸಿಲುಕಿಕೊಂಡಿದ್ದಾರೆ. ಈ ಸುರಂಗ ನಿರ್ಮಾಣ ಕಾರ್ಯದಲ್ಲಿ ಅದಾನಿ ಗ್ರೂಪ್​ಗೆ ಸೇರಿದ ಸಂಸ್ಥೆಯೊಂದು ಭಾಗಿಯಾಗಿದೆ ಎಂಬಂತಹ ಸುದ್ದಿ ಕೆಲ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕುರಿತು ಅದಾನಿ ಗ್ರೂಪ್ ಸ್ಪಷ್ಟನೆ ನೀಡಿದ್ದು, ಸಿಲ್​ಕ್ಯಾರಾ ಸುರಂಗ ನಿರ್ಮಾಣದಲ್ಲಿ ತಾನು ಪರೋಕ್ಷವಾಗಿಯಾಗಲೀ ನೇರವಾಗಿಯಾಗಲೀ ಭಾಗಿಯಾಗಿಲ್ಲ ಎಂದು ಹೇಳಿದೆ.

ಸಿಲ್ಕ್ಯಾರಾ ಟನಲ್ ನಿರ್ಮಾಣದಲ್ಲಿ ಭಾಗಿಯಾಗಿರುವ ಕಂಪನಿಯ ಮಾಲೀಕತ್ವವಾಗಲೀ, ಅದರ ಪಾಲುದಾರಿಕೆಯಾಗಲೀ ಅದಾನಿ ಗ್ರೂಪ್ ಹೊಂದಿಲ್ಲ ಎಂದು ಸಂಸ್ಥೆಯು ಹೇಳಿಕೆ ನೀಡಿದೆ.

ಇದನ್ನೂ ಓದಿ: ಉತ್ತರಕಾಶಿ: ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆ ಮಾಡುತ್ತಾ ರೋಬೋಟ್, ಡ್ರೋನ್​ಮ್ಯಾನ್ ಮಿಲಿಂದ್ ರಾಜ್ ಯಾರು?

‘ಅದಾನಿ ಗ್ರೂಪ್ ಆಗಲೀ ಅಥವಾ ಅದರ ಯಾವುದೇ ಅಂಗ ಸಂಸ್ಥೆಯಾಗಲೀ ಸುರಂಗದ (ಸಿಲ್ಕ್ಯಾರಾ ಟನಲ್) ನಿರ್ಮಾಣದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ರೀತಿಯಲ್ಲೂ ಭಾಗಿಯಾಗಿಲ್ಲ ಎಂದು ಒತ್ತಿಹೇಳಲು ಇಚ್ಛಿಸುತ್ತೇವೆ. ಹಾಗೆಯೇ, ಸುರಂಗ ನಿರ್ಮಾಣದಲ್ಲಿ ಭಾಗಿಯಾದ ಕಂಪನಿಯ ಮಾಲೀಕತ್ವವಾಗಲೀ ಅಥವಾ ಅದರ ಯಾವುದೇ ಪಾಲನ್ನಾಗಲೀ ನಾವು ಹೊಂದಿಲ್ಲ ಎಂದೂ ಸ್ಪಷ್ಟಪಡಿಸುತ್ತಿದ್ದೇವೆ,’ ಎಂದು ಅದಾನಿ ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ಸುರಂಗ ಕುಸಿತ ಘಟನೆಗೆ ತಮ್ಮ ಕಂಪನಿಯ ಹೆಸರನ್ನು ತಳುಕು ಹಾಕುತ್ತಿರುವುದನ್ನು ಬಲವಾಗಿ ಖಂಡಿಸಿರುವ ಅದಾನಿ ಗ್ರೂಪ್, ಅದೇ ವೇಳೆ ದುರಂತ ಘಟನೆಯಲ್ಲಿ ಸಿಲುಕಿರುವ ಕಾರ್ಮಿಕರು ಮತ್ತು ಅವರ ಕುಟುಂಬಗಳ ಸುರಕ್ಷತೆಗೆ ಪ್ರಾರ್ಥನೆ ಮಾಡುವುದಾಗಿ ಹೇಳಿದೆ.

ಇದನ್ನೂ ಓದಿ: ಅದಾನಿ-ಹಿಂಡನ್ಬರ್ಗ್ ರಿಪೋರ್ಟ್, ಚೀನಾ ಬೆಂಬಲಿಗರ ಕರ್ಮಕಾಂಡ: ರಾಜ್ಯಸಭಾ ಸಂಸದ ಮಹೇಶ್ ಜೇಠ್ಮಲಾನಿ ಅರೋಪ

ಉತ್ತರಾಖಂಡ್​ನ ಚಾರ್ ಧಾಮ್ ಯೋಜನೆಯ ಭಾಗವಾಗಿ ಸಿಲ್​ಕ್ಯಾರಾ – ಬಾರಕೋಟ್ ಸುರಂಗ ನಿರ್ಮಾಣ ಕಾರ್ಯ ನಡೆಯುತ್ತಿದೆ. ಹೈದರಾಬಾದ್​ನ ನವಯುಗ ಎಂಜಿನಿಯರಿಂಗ್ ಕಂಪನಿ ಈ ಸುರಂಗ ನಿರ್ಮಿಸುತ್ತಿದೆ. ನವೆಂಬರ್ 12ರಂದು ಭೂಕುಸಿತ ಸಂಭವಿಸಿದ ಪರಿಣಾಮ ಈ ಸುರಂಗದ ಒಂದು ಭಾಗ ಮಣ್ಣಲ್ಲಿ ಮುಚ್ಚಿಹೋಯಿತು. 260 ಮೀಟರ್ ಕೆಳಗೆ ಸುರಂಗದಲ್ಲಿದ್ದ 41 ಮಂದಿ ಕಾರ್ಮಿಕರು ಹೊರಬರಲಾಗದೇ ಸಿಲುಕಿಕೊಂಡಿದ್ದಾರೆ. 15 ದಿನಗಳಾದರೂ ಅವರನ್ನು ಸುರಕ್ಷಿತವಾಗಿ ಹೊರತರಲು ಸಾಧ್ಯವಾಗುತ್ತಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!