AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಾನಿ ಬಿಸಿನೆಸ್ ಸಾಮ್ರಾಜ್ಯ ವಿಸ್ತರಣೆ; ಬೇರೆ ಬೇರೆ ದೇಶಗಳಲ್ಲಿ ಉದ್ದಿಮೆ ಸ್ಥಾಪನೆಗೆ ಅದಾನಿ ಗ್ರೂಪ್ ಆಲೋಚನೆ

Adani's Port Business: ಹಿಂಡನ್ಬರ್ಗ್ ರೀಸರ್ಚ್ ಸಂಸ್ಥೆಯ ತನಿಖಾ ವರದಿ ಪ್ರಕಟಗೊಂಡ ಬಳಿಕ ಅದಾನಿ ಗ್ರೂಪ್ ಅಕ್ಷರಶಃ ಅಧಃಪತನವಾಗಿತ್ತು. ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಅಂತಾರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸ ಉಳಿಸಿಕೊಳ್ಳಲು ಗ್ರೂಪ್ ಕೂಡ ಬಹಳಷ್ಟು ಶ್ರಮ ಹಾಕುತ್ತಿದೆ. ಶ್ರೀಲಂಕಾ ಮತ್ತು ಇಸ್ರೇಲ್​ನಲ್ಲಿ ಮಾತ್ರವಲ್ಲದೇ, ಬಾಂಗ್ಲಾದೇಶ, ವಿಯೆಟ್ನಾಂ ಮತ್ತು ತಾಂಜೇನಿಯಾ ದೇಶಗಳಲ್ಲಿ ಪೋರ್ಟ್ ನಿರ್ಮಾಣ ಸಾಧ್ಯತೆಯನ್ನು ಅದಾನಿ ಗ್ರೂಪ್ ಅವಲೋಕಿಸುತ್ತಿದೆ.

ಅದಾನಿ ಬಿಸಿನೆಸ್ ಸಾಮ್ರಾಜ್ಯ ವಿಸ್ತರಣೆ; ಬೇರೆ ಬೇರೆ ದೇಶಗಳಲ್ಲಿ ಉದ್ದಿಮೆ ಸ್ಥಾಪನೆಗೆ ಅದಾನಿ ಗ್ರೂಪ್ ಆಲೋಚನೆ
ಅದಾನಿ ಗ್ರೂಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 13, 2023 | 10:52 AM

Share

ನವದೆಹಲಿ, ನವೆಂಬರ್ 13: ಶ್ರೀಲಂಕಾ, ಇಸ್ರೇಲ್ ದೇಶಗಳಲ್ಲಿ ಪೋರ್ಟ್​ಗಳನ್ನು ನಿರ್ಮಿಸುತ್ತಿರುವ ಅದಾನಿ ಗ್ರೂಪ್ (Adani Group) ಇದೀಗ ಇನ್ನೂ ಬೇರೆ ಬೇರೆ ದೇಶಗಳಲ್ಲಿ ಬಂದರುಗಳ ನಿರ್ಮಾಣ ಗುತ್ತಿಗೆಗೆ ಪ್ರಯತ್ನಿಸಲು ಆಲೋಚಿಸುತ್ತಿದೆ. ಅದಾನಿ ಗ್ರೂಪ್ ಸಿಇಒ ಕರಣ್ ಅದಾನಿ ಈ ವಿಚಾರವನ್ನು ದೃಢಪಡಿಸಿದ್ದಾರೆ ಎಂದು ಬ್ಲೂಮ್​ಬರ್ಗ್ ಸುದ್ದಿಸಂಸ್ಥೆ ವರದಿ ಮಾಡಿದೆ. ಈ ವರದಿ ಪ್ರಕಾರ, ಶ್ರೀಲಂಕಾ ಮತ್ತು ಇಸ್ರೇಲ್​ನಲ್ಲಿ ಮಾತ್ರವಲ್ಲದೇ, ಬಾಂಗ್ಲಾದೇಶ, ವಿಯೆಟ್ನಾಂ ಮತ್ತು ತಾಂಜೇನಿಯಾ ದೇಶಗಳಲ್ಲಿ ಪೋರ್ಟ್ ನಿರ್ಮಾಣ ಸಾಧ್ಯತೆಯನ್ನು ಅದಾನಿ ಗ್ರೂಪ್ ಅವಲೋಕಿಸುತ್ತಿದೆ. ಇತರ ದೇಶಗಳ ಜೊತೆ ಭಾರತದ ವ್ಯವಹಾರ ಹೆಚ್ಚುತ್ತಿರುವುದೂ ಬಂದರುಗಳ ಅವಶ್ಯಕತೆ ಹಿಂದೆಂದಿಗಿಂತಲೂ ಹೆಚ್ಚಾಗುತ್ತಿದೆ.

‘ಟ್ರೇಡಿಂಗ್ ವ್ಯಾಪಕವಾಗಿ ಹೆಚ್ಚುತ್ತಿದೆ. ನಾವು (ಭಾರತ) ಅದರೊಟ್ಟಿಗೆ ಓಡುತ್ತಿದ್ದೇವೆ. ನಮ್ಮಲ್ಲಿ ಪೂರ್ಣ ಸಾಮರ್ಥ್ಯದ ಕೊರತೆ ಯಾವಾಗಲೂ ಕಾಡುತ್ತಾ ಬಂದಿದೆ. ಈ ಸಂಗತಿ ಭಾರತೀಯ ವ್ಯವಹಾರಕ್ಕೆ ಹಿನ್ನಡೆ ತರುತ್ತಿದೆ,’ ಎಂದು ಅದಾನಿ ಗ್ರೂಪ್​ನ ಸಿಇಒ ಕರಣ್ ಅದಾನಿ ಹೇಳಿದ್ದಾರೆ.

ಇದನ್ನೂ ಓದಿ: ಬೈಜೂಸ್​ನ ಒಂದು ಭಾಗದ ಸಾಲ ತೀರಿಸಿದ ಮಣಿಪಾಲ್ ಸಂಸ್ಥೆಯ ರಂಜನ್ ಪೈ; ಅದಕ್ಕೆ ಬದಲಾಗಿ ಆಕಾಶ್ ಬೋರ್ಡ್​ನಲ್ಲಿ ಸದಸ್ಯತ್ವ

ಹಿಂಡನ್ಬರ್ಗ್ ರೀಸರ್ಚ್ ಸಂಸ್ಥೆಯ ತನಿಖಾ ವರದಿ ಪ್ರಕಟಗೊಂಡ ಬಳಿಕ ಅದಾನಿ ಗ್ರೂಪ್ ಅಕ್ಷರಶಃ ಅಧಃಪತನವಾಗಿತ್ತು. ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಅಂತಾರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸ ಉಳಿಸಿಕೊಳ್ಳಲು ಗ್ರೂಪ್ ಕೂಡ ಬಹಳಷ್ಟು ಶ್ರಮ ಹಾಕುತ್ತಿದೆ. ಕೊಲಂಬೋದಲ್ಲಿರುವ ಬಂದರಿನಲ್ಲಿ ವೆಸ್ಟ್ ಕಂಟೇನರ್ ಟರ್ಮಿನಲ್ ಅನ್ನು ಅದಾನಿ ಪೋರ್ಟ್ಸ್ ನಿರ್ಮಿಸುತ್ತಿದೆ. ಈ ಯೋಜನೆಗೆ ಅಮೆರಿಕ ಸರ್ಕಾರ ಬೆಂಬಲ ವ್ಯಕ್ತಪಡಿಸಿದ್ದು, ಆ ದೇಶದಿಂದ 553 ಮಿಲಿಯನ್ ಡಾಲರ್ ಹೂಡಿಕೆ ಈ ಪ್ರಾಜೆಕ್ಟ್​ಗೆ ಹರಿದುಬರಲಿದೆ.

ಅಮೆರಿಕದ ಈ ನಡೆ ಎರಡು ರೀತಿಯಲ್ಲಿ ಪ್ರಾಮುಖ್ಯತೆ ಪಡೆದಿದೆ. ಶ್ರೀಲಂಕಾ ನಿಧಾನವಾಗಿ ಚೀನಾ ತೆಕ್ಕೆಗೆ ಜಾರುವುದನ್ನು ತಪ್ಪಿಸುವುದು ಒಂದು; ಹಾಗೂ ಭಾರತದ ಸ್ನೇಹವನ್ನು ಇನ್ನಷ್ಟು ಗಟ್ಟಿಗೊಳಿಸುವುದು ಇನ್ನೊಂದು. ಹಿಂದೂ ಮಹಾಸಾಗರದಲ್ಲಿ ಚೀನಾದ ಪ್ರಭಾವ ಕಡಿಮೆ ಮಾಡುವ ನಿಟ್ಟಿನಲ್ಲಿ ಇವೆಲ್ಲವೂ ಮುಖ್ಯ ಆಗುತ್ತದೆ. ಕುತೂಹಲವೆಂದರೆ ಕೊಲಂಬೋ ಪೋರ್ಟ್​ನಲ್ಲಿ ಚೀನಾ ಕೂಡ ಒಂದು ಪ್ರತ್ಯೇಕ ಟರ್ಮಿನಲ್ ನಿರ್ಮಿಸಿದೆ.

ಇದನ್ನೂ ಓದಿ: ನವೆಂಬರ್ 10ರವರೆಗೂ ಭಾರತದ ಈಕ್ವಿಟಿ ಮಾರುಕಟ್ಟೆಗಳಿಂದ 5,800 ಕೋಟಿ ರೂ ವಿದೇಶೀ ಹೂಡಿಕೆಗಳು ಹಿಂತೆಗೆತ

ಪೋರ್ಟ್ ಮಾತ್ರವಲ್ಲ, ಇತರ ಅಂತಾರಾಷ್ಟ್ರೀಯ ಇನ್​ಫ್ರಾಸ್ಟ್ರಕ್ಚರ್ ವ್ಯವಹಾರದಲ್ಲಿ ಹೆಜ್ಜೆ ಬಲಗೊಳಿಸುವುದು ಅದಾನಿ ಗ್ರೂಪ್​ನ ಗುರಿಯಾಗಿದೆ. ಚೀನಾ ತನ್ನ ತೀವ್ರತೆಯನ್ನು ಕಡಿಮೆ ಮಾಡಿರುವುದು ಅದಾನಿ ಗ್ರೂಪ್​ನಂತಹ ಕಂಪನಿಗಳಿಗೆ ಹೆಚ್ಚು ಅವಕಾಶ ಸಿಗುವಂತೆ ಮಾಡಬಹುದು ಎಂಬುದು ತಜ್ಞರ ಅನಿಸಿಕೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ