AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅದಾನಿ ಗ್ರೂಪ್​​ನಿಂದ 40 ಲಕ್ಷ ಮಂದಿಗೆ ಅನ್ನದಾನ ಸೇರಿ ವಿವಿಧ ಸೇವೆ

Adani Group Sewa during Puri Rath Yatra: ಇವತ್ತು ಜೂನ್ 26ರಿಂದ ಆರಂಭವಾಗಿ ಜುಲೈ 8ರವರೆಗೂ ಒಡಿಶಾದ ಪುರಿಯಲ್ಲಿ ನಡೆಯುವ ವಿಶ್ವಖ್ಯಾತ ಜಗನ್ನಾಥ ರಥಯಾತ್ರೋತ್ಸವದಲ್ಲಿ ಅದಾನಿ ಗ್ರೂಪ್ ವಿವಿಧ ಸೇವೆ ನಡೆಸುತ್ತಿದೆ. ಸಂಸ್ಥೆಯು ಪುರಿಯ ವಿವಿಧೆಡೆ ಆಹಾರ ಮತ್ತು ಪಾನೀಯದ ಸ್ಟಾಲ್​​ಗಳನ್ನು ಇಟ್ಟು 40 ಲಕ್ಷ ಉಚಿತ ಆಹಾರ ಮತ್ತು ಪಾನೀಯದ ವ್ಯವಸ್ಥೆ ಮಾಡಿದೆ.

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅದಾನಿ ಗ್ರೂಪ್​​ನಿಂದ 40 ಲಕ್ಷ ಮಂದಿಗೆ ಅನ್ನದಾನ ಸೇರಿ ವಿವಿಧ ಸೇವೆ
ಗೌತಮ್ ಅದಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 26, 2025 | 7:29 PM

Share

ಭುವನೇಶ್ವರ್, ಜೂನ್ 26: ಇತ್ತೀಚೆಗೆ ದೆಹಲಿ ಸಮೀಪದ ಪ್ರಯಾಗ್​ರಾಜ್​​ನಲ್ಲಿ ನಡೆದಿದ್ದ ಮಹಾಕುಂಭ ಮೇಳದಲ್ಲಿ ಲಕ್ಷಾಂತರ ಮಂದಿಗೆ ವಿವಿಧ ಸೇವೆಗಳನ್ನು ನೀಡಿದ್ದ ಅದಾನಿ ಗ್ರೂಪ್ ಈಗ ತಮ್ಮ ಸೇವಾ ಕೈಂಕರ್ಯವನ್ನು ಪುರಿ ಜಗನ್ನಾಥ ರಥಯಾತ್ರೆಯಲ್ಲೂ ಮುಂದುವರಿಸಲಿದೆ. ಒಡಿಶಾದ ಪುರಿ ನಗರದಲ್ಲಿ ಇವತ್ತು ಆರಂಭವಾಗಿರುವ ರಥಯಾತ್ರೆ ಜುಲೈ 8ರವರೆಗೂ ನಡೆಯಲಿದೆ. ಅಷ್ಟೂ ದಿನ ಅದಾನಿ ಗ್ರೂಪ್ ಭಕ್ತಾದಿಗಳ ಸೇವೆ ನಡೆಸಲಿದೆ.

ಒಂಬತ್ತು ದಿನಗಳ ಕಾಲ ನಡೆಯುವ ರಥಯಾತ್ರೆಯಲ್ಲಿ ಅದಾನಿ ಗ್ರೂಪ್ ದೊಡ್ಡ ಸಂಖ್ಯೆಯಲ್ಲಿ ಸ್ವಯಂಸೇವಕರನ್ನು ಸೇವೆಗೆ ನಿಯೋಜಿಸಿದೆ. ಈ ವಿಶ್ವವಿಖ್ಯಾತ ಉತ್ಸವಕ್ಕೆ ಬರುವ ಲಕ್ಷಾಂತರ ಭಕ್ತರು, ಕಾರ್ಯಕರ್ತರಿಗೆ ಸೇವೆಯ ವ್ಯವಸ್ಥೆ ಮಾಡಿದೆ. 40 ಲಕ್ಷ ಉಚಿತ ಊಟ ಮತ್ತು ಪಾನೀಯಗಳನ್ನು ಜನರಿಗೆ ಹಂಚಲಿದೆ.

ಇದನ್ನೂ ಓದಿ: ಮುಂಬೈ ಏರ್​ಪೋರ್ಟ್ ವಿಸ್ತರಣೆ ಯೋಜನೆಗೆ ಜಾಗತಿಕ ಹೂಡಿಕೆದಾರರಿಂದ 1 ಬಿಲಿಯನ್ ಡಾಲರ್ ಬಂಡವಾಳ ಪಡೆದ ಅದಾನಿ ಏರ್ಪೋರ್ಟ್ಸ್

ಪುರಿ ನಗರದಾದ್ಯಂತ ಅದಾನಿ ಗ್ರೂಪ್ ವಿಶೇಷ ಫೂಡ್ ಕೌಂಟರ್​​ಗಳನ್ನು ಸ್ಥಾಪಿಸಿದೆ. ಇಲ್ಲಿ ರುಚಿಕರವಾದ ಮತ್ತು ಪೌಷ್ಟಿಕ ಆಹಾರವನ್ನು ನೀಡಲಾಗುತ್ತದೆ. ಪಾನೀಯ ಶಾಪ್​​ಗಳೂ ಕೂಡ ಸ್ಥಾಪನೆಯಾಗಿದ್ದು, ಬಿಸಿಲಿನ ಝಳದಲ್ಲಿ ಜನರಿಗೆ ತಂಪೆರೆಯುವ ತಂಪು ಪಾನೀಯಗಳನ್ನು ಇಲ್ಲಿ ಉಚಿತವಾಗಿ ನೀಡಲಾಗುತ್ತದೆ.

Adani Group offers seva during Puri Rath Yatra, offers 40 lakh free meals and beverages and other service

ಅದಾನಿ ಗ್ರೂಪ್​​ನಿಂದ ಅನ್ನದಾನ ಸೇರಿ ವಿವಿಧ ಸೇವೆ

ಅದಾನಿ ಗ್ರೂಪ್ ಪುರಿಯಲ್ಲಿ ಆಹಾರ ಮತ್ತು ಪಾನೀಯ ಹಂಚುವಿಕೆಗೆ ಮಾತ್ರ ಸೀಮಿತವಾಗಿಲ್ಲ, ಪರಿಸರ ಸಂರಕ್ಷಣೆ, ಭದ್ರತೆ ಇತ್ಯಾದಿ ಕಾರ್ಯಗಳನ್ನೂ ಕೈಗೊಂಡಿದೆ. ವಿವಿಧೆಡೆ ನಿಯೋಜಿಸಲಾದ ಸ್ವಯಂಸೇವಕರು ಪುರಿ ಬೀಚ್​ನಲ್ಲಿ ಪ್ಲಾಸ್ಟಿಕ್ ಇತ್ಯಾದಿ ಕಸಗಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಲಿದ್ದಾರೆ. ಈ ಸ್ವಯಂಸೇವಕರಿಗೆ ಉಚಿತವಾಗಿ ಟಿ-ಶರ್ಟ್​​ಗಳನ್ನು ಕೊಡಲಾಗಿದೆ. ಸ್ವಚ್ಛತಾ ಕಾರ್ಮಿಕರಿಗೆ ಸುರಕ್ಷಿತ ಜಾಕೆಟ್​​ಗಳನ್ನು ಒದಗಿಸಿದೆ. ಪೌರ ಕಾರ್ಮಿಕರು ಮತ್ತು ಭಕ್ತರಿಗೆ ಮಳೆಯಿಂದ ರಕ್ಷಣೆ ನೀಡುವ ರೈನ್ ಕೋಟ್, ಕ್ಯಾಪ್, ಛತ್ರಿ ಇತ್ಯಾದಿ ಸಾಮಗ್ರಿಗಳನ್ನು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: ರಿಲಾಯನ್ಸ್ ಸಂಸ್ಥೆಯ ಯಶಸ್ವಿನ ಹಿಂದಿವೆ ಐದಾರು ಮೌಲ್ಯಗಳು: ಮುಕೇಶ್ ಅಂಬಾನಿ

ಈ ಕಾರ್ಯಗಳನ್ನು ಮಾಡಲು ಅದಾನಿ ಗ್ರೂಪ್ ಜೊತೆಗೆ ಪುರಿ ಜಿಲ್ಲಾಡಳಿತ, ಇಸ್ಕಾನ್, ಸ್ಥಳೀಯ ಸಮುದಾಯ ಸಂಘಟನೆಗಳೂ ಭಾಗಿಯಾಗಿವೆ.

ಅದಾನಿ ಗ್ರೂಪ್ ಪ್ರಯಾಗ್​ರಾಜ್ ಮಹಾಕುಂಭದಲ್ಲೂ ವಿವಿಧ ಸೇವೆಗಳನ್ನು ನೀಡಿ ಗಮನ ಸೆಳೆದಿತ್ತು. ಒಡಿಶಾ ರಾಜ್ಯದಲ್ಲಿ ಅದಾನಿ ಗ್ರೂಪ್ ವಿವಿಧ ಸಾಮಾಜಿಕ ಕೈಂಕರ್ಯಗಳನ್ನು ನಡೆಸುತ್ತಿದೆ. ಆರೋಗ್ಯ, ಶಿಕ್ಷಣ, ಗ್ರಾಮೀಣ ಕ್ಷೇತ್ರದಲ್ಲಿ ವಿವಿಧ ಯೋಜನೆಗಳನ್ನು ಅದು ನೆರವೇರಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Thu, 26 June 25

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!