AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಾನಿ ಕಂಪನಿಗಳ ವಿರುದ್ಧ ಮತ್ತೆ ವಂಚನೆ ಆರೋಪ; ಇದು ಸೋರೋಸ್ ಪಿತೂರಿ ಎಂದ ಅದಾನಿ ಗ್ರೂಪ್

Adani Group vs OCCRP: ಮಾರಿಷಸ್ ಮೂಲಕ ಅಪಾರದರ್ಶಕ ಫಂಡ್​ಗಳ ಮೂಲಕ ಅದಾನಿ ಗ್ರೂಪ್​ನ ವಿವಿಧ ಕಂಪನಿಗಳ ಷೇರುಗಳ ವಹಿವಾಟು ನಡೆಸುವ ಮೂಲಕ ಅದಾನಿ ಆಪ್ತರು ಸಾಕಷ್ಟು ಲಾಭ ಮಾಡಿಕೊಂಡಿದ್ದಾರೆ ಎಂದು ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಷನ್ ರಿಪೋರ್ಟಿಂಗ್ ಪ್ರಾಜೆಕ್ಟ್ (ಒಸಿಸಿಆರ್​​ಪಿ) ತನ್ನ ತನಿಖಾ ವರದಿಯಲ್ಲಿ ಆರೋಪ ಮಾಡಿದೆ. ಈ ಆರೋಪವನ್ನು ಅದಾನಿ ಗ್ರೂಪ್ ಸಾರಾಸಗಟಾಗಿ ತಳ್ಳಿಹಾಕಿದೆ.

ಅದಾನಿ ಕಂಪನಿಗಳ ವಿರುದ್ಧ ಮತ್ತೆ ವಂಚನೆ ಆರೋಪ; ಇದು ಸೋರೋಸ್ ಪಿತೂರಿ ಎಂದ ಅದಾನಿ ಗ್ರೂಪ್
ಅದಾನಿ ಗ್ರೂಪ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 31, 2023 | 11:39 AM

ನವದೆಹಲಿ, ಆಗಸ್ಟ್ 31: ಹಿಂಡನ್ಬರ್ಗ್ ರಿಸರ್ಚ್ ತನಿಖಾ ವರದಿ (Hindenburg Research) ಬಿಡುಗಡೆಯಾಗಿ ಆರೇಳು ತಿಂಗಳ ಬಳಿಕ ಪತ್ರಕರ್ತರ ಸಮೂಹದ ವೆಬ್​ಸೈಟ್​ವೊಂದು ತನಿಖಾ ವರದಿಯೊಂದನ್ನು ಪ್ರಕಟಿಸಿದೆ. ಮಾರಿಷಸ್ ದೇಶದ ಅಪಾರದರ್ಶಕ ಫಂಡ್​ಗಳ (Opaque Funds) ಮೂಲಕ ಅದಾನಿ ಗ್ರೂಪ್​ನ ಬಿಸಿನೆಸ್ ಪಾರ್ಟ್ನರ್​ಗಳು ಕೋಟ್ಯಂತರ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂದು ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಷನ್ ರಿಪೋರ್ಟಿಂಗ್ ಪ್ರಾಜೆಕ್ಟ್ ವೆಬ್​ಸೈಟ್​ನಲ್ಲಿ (OCCRP- Organised Crime and Corruption Reporting Project) ಆರೋಪಿಸಲಾಗಿದೆ. ಅನಾಮಧೇಯ ಪತ್ರಕರ್ತರು ತನಿಖೆ ನಡೆಸಿ ಈ ವರದಿ ರೂಪಿಸಿದ್ದಾರೆನ್ನಲಾಗಿದೆ. ಆದರೆ, ಈ ವರದಿಯನ್ನು ಅದಾನಿ ಗ್ರೂಪ್ ಸಾರಾಸಗಟಾಗಿ ತಳ್ಳಿಹಾಕಿದೆ. ಹಿಂಡನ್ಬರ್ಗ್ ರಿಸರ್ಚ್ ವರದಿಯಲ್ಲಿ ಪ್ರಸ್ತಾಪವಾಗಿರುವ ಕೆಲ ಅಂಶವನ್ನೇ ಮತ್ತೆ ಬಳಸಿ ಹೊಸ ಆರೋಪ ಮಾಡಲಾಗಿದೆ ಎಂದು ಅದಾನಿ ಗ್ರೂಪ್ ಸ್ಪಷ್ಟಪಡಿಸಿದೆ.

ಅದಾನಿ ಗ್ರೂಪ್​ನ ಪ್ರಮುಖ ಸಾರ್ವಜನಿಕ ಹೂಡಿಕೆದಾರರು (Public Investors) ಅದಾನಿಯ ಆಪ್ತರೇ ಆಗಿದ್ದಾರೆ. ಇದು ಭಾರತದ ಷೇರುಮಾರುಕಟ್ಟೆ ಕಾನೂನಿನ ಉಲ್ಲಂಘನೆಯಾಗಿರುವ ಸಾಧ್ಯತೆ ಇದೆ ಎಂದು ತನಿಖಾ ವರದಿ ಹೇಳುತ್ತದೆ. ಟ್ಯಾಕ್ಸ್ ಹೇವನ್ ಎನಿಸಿರುವ ಮಾರಿಷಸ್​ನ ಫಂಡ್​ಗಳ ಮೂಲಕ ಅದಾನಿ ಗ್ರೂಪ್​ನ ವಿವಿಧ ಕಂಪನಿಗಳ ಷೇರುಗಳನ್ನು ಖರೀದಿಸಿದ ಮತ್ತು ಮಾರಿದ ಪ್ರಕರಣಗಳು ಕನಿಷ್ಠ ಎರಡಾದರೂ ಇದೆ ಎಂದು ಹೇಳಲಾಗಿದೆ.

ಮಾರಿಷಸ್ ಫಂಡ್​ಗಳ ಮೂಲಕ ವರ್ಷಗಳಿಂದ ಅದಾನಿ ಷೇರುಗಳನ್ನು ಖರೀದಿಸುವುದು ಮತ್ತು ಮಾರುವುದು ಮಾಡುತ್ತಾ ಸಾಕಷ್ಟು ಲಾಭ ಮಾಡಲಾಗಿದೆ. ಈ ಹೂಡಿಕೆಗಳನ್ನು ನಿರ್ವಹಿಸುವ ಮ್ಯಾನೇಜ್ಮೆಂಟ್ ಸಂಸ್ಥೆ ವಿನೋದ್ ಅದಾನಿ ಕಂಪನಿಗೆ ಹಣ ಪಾವತಿಸಿದೆ ಎಂದೂ ಒಸಿಸಿಆರ್​ಪಿಯ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಅತ್ಯಂತ ಕಡಿಮೆ ಬೆಲೆಗೆ ಯಾರೇ ಕೊಟ್ಟರೂ ತೈಲ ಖರೀದಿಸುತ್ತೇವೆ: ಕೇಂದ್ರ ಸಚಿವ ಹರದಿಪ್ ಸಿಂಗ್ ಪುರಿ

ಮಾರಿಷಸ್ ದೇಶದ ಒಪೇಕ್ ಫಂಡ್ ಅಥವಾ ಅಪಾರದರ್ಶಕ ಫಂಡ್​ಗಳ ಮೂಲಕ ಈ ಕೆಲಸ ಆಗಿರುವುದು ತಿಳಿದುಬಂದಿದೆ. ಒಪೇಕ್ ಫಂಡ್ ಎನ್ನುವುದು ತನ್ನ ಪೋರ್ಟ್​ಫೋಲಿಯೋಗಳ ಮಾಹಿತಿಯನ್ನು ಹೂಡಿಕೆದಾರರಿಗೆ ತಿಳಿಸುವುದಿಲ್ಲ. ಈ ಫಂಡ್​ಗಳು ಯಾವ್ಯಾವ ಕಂಪನಿಗಳ ಷೇರುಗಳ ಮೇಲೆ ಹೂಡಿಕೆ ಮಾಡಿವೆ ಎನ್ನುವ ಮಾಹಿತಿ ಅದರ ಹೂಡಿಕೆದಾರರಿಗೆ ಗೊತ್ತಿರುವುದಿಲ್ಲ. ಹೆಡ್ಜ್ ಫಂಡ್​ಗಳು ಇಂಥವಕ್ಕೆ ಉದಾಹರಣೆ.

ಅದಾನಿ ಗ್ರೂಪ್ ಸ್ಪಷ್ಟನೆ

ಒಸಿಸಿಆರ್​ಪಿಯಿಂದ ಪ್ರಕಟವಾಗಿರುವ ವರದಿಯನ್ನು ಅದಾನಿ ಗ್ರೂಪ್ ಅಲ್ಲಗಳೆದಿದೆ. ಹಿಂಡನ್ಬರ್ಗ್ ರಿಸರ್ಚ್ ಈ ಹಿಂದೆ ಬಿಡುಗಡೆ ಮಾಡಿದ ತನಿಖಾ ವರದಿಯಲ್ಲಿ ಈ ಅಂಶಗಳು ಇವೆ. ಇದೆಲ್ಲವೂ ಜಾರ್ಜ್ ಸೋರೋಸ್ ಪಿತೂರಿಯಾಗಿದೆ. ಹಿಂಡನ್ಬರ್ಗ್ ರಿಪೋರ್ಟ್ ವರದಿಯೇ ಆಧಾರರಹಿತವಾಗಿದೆ. ಸೋರೋಸ್ ಬೆಂಬಲಿತ ವರ್ಗಗಳು ಹಾಗೂ ವಿದೇಶೀ ಮೀಡಿಯಾದ ಒಂದು ಗುಂಪು ಈ ಸುಳ್ಳು ವಿಚಾರವನ್ನು ಜಗ್ಗಿಜಗ್ಗಿ ಎಳೆಯುತ್ತಿವೆ ಎಂದು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕಾಲಜ್ಞಾನಿ ಗೂಗಲ್; ಯಾವ ಸಮಯದಲ್ಲಿ ಕಡಿಮೆ ಬೆಲೆಗೆ ವಿಮಾನ ಟಿಕೆಟ್ ಬುಕ್ ಮಾಡಬಹುದು? ಗೂಗಲ್ ಫ್ಲೈಟ್ಸ್​ನಲ್ಲಿದೆ ಹೊಸ ಫೀಚರ್

ಒಸಿಸಿಆರ್​ಪಿ ವರದಿಯಲ್ಲಿ ಮಾಡಿರುವ ಆರೋಪಗಳು ಹಿಂಡನ್ಬರ್ಗ್ ವರದಿಯಲ್ಲಿ ಪ್ರಸ್ತಾಪವಾಗಿವೆ. ಸೆಬಿಯಿಂದ ಇದರ ತನಿಖೆ ನಡೆಯುತ್ತಿದೆ. ತನ್ನ ಕಡೆಯಿಂದ ಯಾವ ತಪ್ಪೂ ಆಗಿಲ್ಲ ಎಂದು ಅದಾನಿ ಗ್ರೂಪ್ ಸ್ಪಷ್ಟಪಡಿಸಿದೆ.

ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಷನ್ ರಿಪೋರ್ಟಿಂಗ್ ಪ್ರಾಜೆಕ್ಟ್ ಎಂಬುದು ಸ್ವತಂತ್ರ ಪತ್ರಕರ್ತರಿಂದ ನಿರ್ವಹಿಸುವ ಸಂಸ್ಥೆಯಾಗಿದೆ. ಎಡಪಂಥದಲ್ಲಿ ಗುರುತಿಸಿಕೊಂಡಿರುವ ಖ್ಯಾತ ಹೂಡಿಕೆದಾರರು ಮತ್ತು ಉದ್ಯಮಿಗಳಾದ ಜಾರ್ಜ್ ಸೋರೋಸ್, ರಾಕ್​ಫೆಲರ್ ಬ್ರದರ್ಸ್ ಮೊದಲಾದವರು ಒಸಿಸಿಆರ್​ಪಿಗೆ ಫಂಡಿಂಗ್ ಮಾಡುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:22 am, Thu, 31 August 23

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ