AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ವಿದೇಶದಲ್ಲಿ ಕುಟುಂಬ ಕಚೇರಿ ತೆರೆಯುವ ಚಿಂತನೆ ಇಲ್ಲ; ಅದಾನಿ ಗ್ರೂಪ್ ಸ್ಪಷ್ಟನೆ

ಅದಾನಿ ಅವರಾಗಲೀ ಅವರ ಕುಟುಂಬದವರಾಗಲೀ ಸಾಗರೋತ್ತರ ದೇಶಗಳಲ್ಲಿ ಕಚೇರಿ ತೆರೆಯುವ ಯೋಜನೆ ಹೊಂದಿಲ್ಲ. ಆ ಕುರಿತು ಸಮಾಲೋಚನೆ ನಡೆಸಿಯೂ ಇಲ್ಲ ಎಂದು ಅದಾನಿ ಗ್ರೂಪ್ ಸ್ಪಷ್ಟಪಡಿಸಿದೆ.

Gautam Adani: ವಿದೇಶದಲ್ಲಿ ಕುಟುಂಬ ಕಚೇರಿ ತೆರೆಯುವ ಚಿಂತನೆ ಇಲ್ಲ; ಅದಾನಿ ಗ್ರೂಪ್ ಸ್ಪಷ್ಟನೆ
ಅದಾನಿ ಸಮೂಹImage Credit source: Reuters
TV9 Web
| Updated By: Ganapathi Sharma|

Updated on: Nov 19, 2022 | 4:51 PM

Share

ನವದೆಹಲಿ: ಹೆಚ್ಚುತ್ತಿರುವ ಸಂಪತ್ತಿನ ನಿರ್ವಹಣೆಗಾಗಿ ವಿದೇಶದಲ್ಲಿ ಕುಟುಂಬದ ಕಚೇರಿ ಆರಂಭಿಸಲು ಏಷ್ಯಾದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ (Gautam Adani) ಚಿಂತನೆ ನಡೆಸಿದ್ದಾರೆ ಎಂಬ ವರದಿಗಳನ್ನು ಅದಾನಿ ಗ್ರೂಪ್ (Adani Group) ಅಲ್ಲಗಳೆದಿದೆ. ಅದಾನಿ ಅವರು ವಿದೇಶದಲ್ಲಿ ಕುಟುಂಬದ ಕಚೇರಿ ತೆರೆಯುವ ಬಗ್ಗೆ ಚಿಂತನೆ ನಡೆಸಿಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ. 58 ಶತಕೋಟಿ ಡಾಲರ್ ವೈಯಕ್ತಿಕ ಸಂಪತ್ತು ಹೊಂದಿರುವ ಅದಾನಿ ಅವರು ನ್ಯೂಯಾರ್ಕ್ (New York) ಅಥವಾ ದುಬೈಯಲ್ಲಿ (Dubai) ಕಚೇರಿ ಆರಂಭಿಸಲು ಯೋಚಿಸುತ್ತಿದ್ದಾರೆ ಎಂದು ಶುಕ್ರವಾರ ‘ಬ್ಲೂಮ್​ಬರ್ಗ್’ ವರದಿ ಮಾಡಿತ್ತು.

‘ಅದಾನಿ ಅವರಾಗಲೀ ಅವರ ಕುಟುಂಬದವರಾಗಲೀ ಸಾಗರೋತ್ತರ ದೇಶಗಳಲ್ಲಿ ಕಚೇರಿ ತೆರೆಯುವ ಯೋಜನೆ ಹೊಂದಿಲ್ಲ. ಆ ಕುರಿತು ಸಮಾಲೋಚನೆ ನಡೆಸಿಯೂ ಇಲ್ಲ’ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಅದಾನಿ ಅವರ ವೈಯಕ್ತಿಕ ಸಂಪತ್ತು ಈ ವರ್ಷವಷ್ಟೇ 58 ಶತಕೋಟಿ ಡಾಲರ್​ಗೆ ಹೆಚ್ಚಳವಾಗಿದೆ. ‘ಬ್ಲೂಮ್​​ಬರ್ಗ್​’ನ ಶತಕೋಟ್ಯಧಿಪತಿಗಳ ಸೂಚ್ಯಂಕದಲ್ಲಿ ಅದಾನಿ ಸ್ಥಾನ ಪಡೆದಿದ್ದು, ವಿಶ್ವದ ಅತ್ಯಂತ ಶ್ರೀಮಂತರಲ್ಲಿಯೂ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ವಿದೇಶದಲ್ಲಿ ಕಚೇರಿ ತೆರೆಯಲು ಮುಂದಾಗುತ್ತಿರುವುದು ಗೌತಮ್ ಅದಾನಿ ಮತ್ತು ಅವರ ಕುಟುಂಬದವರಲ್ಲಿ ಜಾಗತಿಕ ಮಹತ್ವಾಕಾಂಕ್ಷೆಗಳು ಹೆಚ್ಚುತ್ತಿರುವುದನ್ನು ಬಿಂಬಿಸುತ್ತದೆ ಎಂದು ವರದಿ ಹೇಳಿತ್ತು.

ಇದನ್ನೂ ಓದಿ: Gautam Adani: ಹೆಚ್ಚುತ್ತಿರುವ ಸಂಪತ್ತು ನಿರ್ವಹಣೆಗೆ ವಿದೇಶದಲ್ಲಿ ಕಚೇರಿ ತೆರೆಯಲಿದ್ದಾರೆ ಗೌತಮ್ ಅದಾನಿ

ವಿದೇಶದಲ್ಲಿ ಕಚೇರಿ ತೆರೆಯುವುದಕ್ಕಾಗಿ ಅದಾನಿ ಕುಟುಂಬ ಸಲಹೆಗಾರರ ಜತೆ ಮತ್ತು ತೆರಿಗೆ ಸಮಾಲೋಚಕರ ಜತೆ ಮಾತುಕತೆ ನಡೆಸುತ್ತಿದೆ. ಕಚೇರಿಯ ಸ್ಥಳ ಇನ್ನೂ ಅಂತಿಮಗೊಂಡಿಲ್ಲ. ಇದು ಸಮಾಲೋಚಕರ ಸಲಹೆಯಂತೆ ಬದಲಾಗುವ ಸಾಧ್ಯತೆಗಳಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ಬ್ಲೂಮ್​ಬರ್ಗ್ ವರದಿ ತಿಳಿಸಿತ್ತು. ಆದರೆ ಈ ವಿಚಾರವಾಗಿ ಅದಾನಿ ಗ್ರೂಪ್​ನ ವಕ್ತಾರರು ಪ್ರತಿಕ್ರಿಯೆ ನೀಡಿಲ್ಲ ಎಂದೂ ವರದಿಯಲ್ಲಿ ತಿಳಿಸಿತ್ತು. ಇದೀಗ ಅದಾನಿ ಗ್ರೂಪ್ ಗೊಂದಲಗಳಿಗೆ ತೆರೆ ಎಳೆದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್