AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಮೆಂಟ್ ಆಗಿಲ್ಲವೆಂದು ಬಾಂಗ್ಲಾದೇಶಕ್ಕೆ ಪವರ್ ಕಟ್ ಮಾಡಲು ಅದಾನಿ ಯೋಜನೆ

Adani vs Bangladesh: ಬಾಂಗ್ಲಾದೇಶಕ್ಕೆ ಅರ್ಧದಷ್ಟು ವಿದ್ಯುತ್ ಸರಬರಾಜು ನಿಲ್ಲಿಸಿರುವ ಅದಾನಿ ಪವರ್ ಸಂಸ್ಥೆ ಈಗ ಪೂರ್ಣವಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲು ಮುಂದಾಗಿದೆ. ಅದಾನಿ ಗ್ರೂಪ್​ನಿಂದ ವಿದ್ಯುತ್ ಸರಬರಾಜು ಪಡೆಯುತ್ತಿರುವ ಬಾಂಗ್ಲಾದೇಶ ಸುಮಾರು 846 ಮಿಲಿಯನ್ ಡಾಲರ್​ನಷ್ಟು ಬಿಲ್ ಹಣ ಬಾಕಿ ಉಳಿಸಿಕೊಂಡಿದೆ. ಅದು ಪೂರ್ಣವಾಗಿ ಪಾವತಿಸದಿದ್ದರೆ ವಿದ್ಯುತ್ ಸರಬರಾಜು ಕಟ್ ಮಾಡುವುದಾಗಿ ಎಪಿಜೆಎಲ್ ಹೇಳಿದೆ.

ಪೇಮೆಂಟ್ ಆಗಿಲ್ಲವೆಂದು ಬಾಂಗ್ಲಾದೇಶಕ್ಕೆ ಪವರ್ ಕಟ್ ಮಾಡಲು ಅದಾನಿ ಯೋಜನೆ
ಅದಾನಿ ಪವರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 04, 2024 | 11:30 AM

Share

ನವದೆಹಲಿ, ನವೆಂಬರ್ 4: ಬಾಂಗ್ಲಾದೇಶದಿಂದ ತನಗೆ ಬರಬೇಕಿರುವ ವಿದ್ಯುತ್ ಬಿಲ್ ಇನ್ನೂ ಸಾಕಷ್ಟು ಬಾಕಿ ಇರುವ ಹಿನ್ನೆಲೆಯಲ್ಲಿ ಅದಾನಿ ಸಂಸ್ಥೆ ವಿದ್ಯುತ್ ಸರಬರಾಜು ನಿಲ್ಲಿಸಲು ನಿರ್ಧರಿಸಿದೆ. ಅದಾನಿ ಗ್ರೂಪ್​ಗೆ ಸೇರಿದ ಎಪಿಜೆಎಲ್ ಸಂಸ್ಥೆ ಹಾಗೂ ಬಾಂಗ್ಲಾದೇಶ ಸರ್ಕಾರದ ಮಧ್ಯೆ ವಿದ್ಯುತ್ ಸರಬರಾಜಿಗೆ ಒಪ್ಪಂದವಾಗಿದೆ. ಆದರೆ, 846 ಮಿಲಿಯನ್ ಡಾಲರ್​ನಷ್ಟು ಹಣ ಬಾಕಿ ಉಳಿಸಿಕೊಂಡಿದೆ ಎಂದು ಅದಾನಿ ಪವರ್ ಸಂಸ್ಥೆ ಹೇಳುತ್ತಿದೆ. ಅದು ಪಾವತಿ ಆಗುವವರೆಗೂ ಬಾಂಗ್ಲಾದೇಶಕ್ಕೆ ಪವರ್ ಸಪ್ಲೈ ನಿಲ್ಲಿಸುವುದಾಗಿ ಎಪಿಜೆಎಲ್ ಎಚ್ಚರಿಕೆ ನೀಡಿದೆ. ಈಗಾಗಲೇ ವಿದ್ಯುತ್ ಸರಬರಾಜು ಪ್ರಮಾಣವನ್ನು ಅರ್ಧದಷ್ಟು ಕಡಿಮೆ ಮಾಡಿದೆ ಎನ್ನಲಾಗುತ್ತಿದೆ.

ಕಳೆದ ಗುರುವಾರ ರಾತ್ರಿ ಬಾಂಗ್ಲಾದೇಶಕ್ಕೆ 1,600 ಮೆಗಾವ್ಯಾಟ್​ಗೂ ಹೆಚ್ಚು ಮೊತ್ತದ ವಿದ್ಯುತ್ ಕೊರತೆ ಎದುರಾಗಿತ್ತು ಎಂಬುದು ಬಾಂಗ್ಲಾದೇಶದ ಪವರ್ ಗ್ರಿಡ್ ದತ್ತಾಂಶದಿಂದ ತಿಳಿದುಬಂದಿದೆ. ಅದೇ ವೇಳೆ ಜಾರ್ಖಂಡ್​ನಲ್ಲಿ ಇರುವ ಅದಾನಿ ಪವರ್​ನ 1,496 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕದಲ್ಲಿ 700 ಮೆಗಾವ್ಯಾಟ್ ಮಾತ್ರವೇ ವಿದ್ಯುತ್ ಉತ್ಪಾದನೆ ಆಗುತ್ತಿದೆ.

ಇದನ್ನೂ ಓದಿ: ಜಿಯೋ, ಏರ್ಟೆಲ್ ಮುಟ್ಟದ ಜಾಗಕ್ಕೆ ನುಗ್ಗುತ್ತಿರುವ ಬಿಎಸ್ಸೆನ್ನೆಲ್; ಕಾವೇರಿದೆ ಟೆಲಿಕಾಂ ಪೈಪೋಟಿ

ಅದಾನಿ ಕಂಪನಿಯ ಪವರ್ ರೇಟ್ ಹೆಚ್ಚಾಯ್ತು ಎನ್ನುವ ಬಾಂಗ್ಲಾದೇಶದ ಹೊಸ ಸರ್ಕಾರ

ಶೇಖ್ ಹಸೀನಾ ನೇತೃತ್ವದ ಸರ್ಕಾರ ಪತನಗೊಂಡು ಹೊಸ ಹಂಗಾಮಿ ಸರ್ಕಾರ ಸ್ಥಾಪನೆಯಾದಾಗಿನಿಂದ ಅದಾನಿ ಕಂಪನಿ ಜೊತೆ ಸರ್ಕಾರ ತಗಾದೆ ತೆಗೆಯುತ್ತಲೇ ಇದೆ. ಅದಾನಿ ಕಂಪನಿ ದುಬಾರಿ ಬೆಲೆಗೆ ವಿದ್ಯುತ್ ನೀಡುತ್ತಿದೆ ಎಂಬುದು ಆಕ್ಷೇಪ. ಗುತ್ತಿಗೆಯನ್ನು ಮರುಪರಿಶೀಲಿಸುವುದಾಗಿ ಸರ್ಕಾರ ಹೇಳುತ್ತಿದೆ.

ಅದಾನಿ ಕಂಪನಿ ಸರಬರಾಜು ಮಾಡುವ ವಿದ್ಯುತ್​ನ ದರವು ಕಲ್ಲಿದ್ದಲು ಬೆಲೆ ಪ್ರಕಾರ ಬದಲಾಗುತ್ತದೆ. ಇಂಡೋನೇಷ್ಯನ್ ಕೋಲ್ ಇಂಡೆಕ್ಸ್ ಮತ್ತು ಆಸ್ಟ್ರೇಲಿಯನ್ ನ್ಯೂಕ್ಯಾಸಲ್ ಇಂಡೆಕ್ಸ್​ನಲ್ಲಿನ ಸರಾಸರಿ ಪ್ರಕಾರ ಕಲ್ಲಿದ್ದಲು ದರವನ್ನು ಲೆಕ್ಕ ಮಾಡಲಾಗುತ್ತದೆ.

ಇದನ್ನೂ ಓದಿ: ಇದು ‘ಬೋಸ್’ ಕಥೆ..! ಬ್ರಿಟಿಷರಿಂದ ತಪ್ಪಿಸಿಕೊಂಡು ಅಮೆರಿಕಕ್ಕೆ ಎಸ್ಕೇಪ್ ಆಗಿದ್ದ ಅಪ್ಪ; 30,000 ಕೋಟಿ ರೂ ಉದ್ಯಮ ಕಟ್ಟಿದ ಮಗ

ಬಾಕಿ ಹಣ ಪಾವತಿಯಾಗದಿದ್ದರೆ ಕ್ರಮ: ಅದಾನಿ ಎಚ್ಚರಿಕೆ

ತನಗೆ ಬರಬೇಕಿರುವ ವಿದ್ಯುತ್ ಬಿಲ್ ಬಾಕಿ ಹಣವನ್ನು ಬಾಂಗ್ಲಾದೇಶ ಸರ್ಕಾರ ಪಾವತಿಸಬೇಕು. ಇಲ್ಲದಿದ್ದರೆ ವಿದ್ಯುತ್ ಸರಬರಾಜು ಪೂರ್ಣ ನಿಲ್ಲಿಸಲಾಗುವುದು. ಜೊತೆಗೆ, ವಿದ್ಯುತ್ ಖರೀದಿ ಒಪ್ಪಂದದ (ಪಿಪಿಎ) ಅನುಸಾರ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಜಿಜೆಎಲ್ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ