AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಾನಿ-ಹಿಂಡನ್ಬರ್ಗ್ ಪ್ರಕರಣ: ತನಿಖೆಗೆ ಹೆಚ್ಚುವರಿ ಕಾಲಾವಕಾಶ ಕೇಳುವುದಿಲ್ಲ- ಸುಪ್ರೀಂಕೋರ್ಟ್ ಬಳಿ ಸೆಬಿ ಸ್ಪಷ್ಟನೆ

Adani Hindenburg Case: ಹಿಂಡನ್ಬರ್ಗ್ ರಿಸರ್ಚ್ ವರದಿ ಸಂಬಂಧ ತನಿಖೆ ನಡೆಸುತ್ತಿರುವ ಸೆಬಿ, ತನಿಖೆಗೆ ಹೆಚ್ಚುವರಿ ಕಾಲಾವಕಾಶ ಕೋರುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. ಸೆಬಿ ತನಿಖೆ ನಡೆಸುತ್ತಿರುವ 24 ಪ್ರಕರಣಗಳ ಪೈಕಿ 22 ಪೂರ್ಣಗೊಂಡಿವೆ. ಇನ್ನುಳಿದ ಎರಡು ಪ್ರಕರಣಗಳಲ್ಲಿ ವಿದೇಶಗಳ ಪ್ರಾಧಿಕಾರಗಳಿಂದ ಮಾಹಿತಿ ಬರಬೇಕಿದೆ ಎಂದು ಸೆಬಿ ಸಂಸ್ಥೆ ತನಿಖೆಯ ಸ್ಥಿತಿಗತಿಯನ್ನು ಸರ್ವೋಚ್ಚ ನ್ಯಾಯಪೀಠದ ಮುಂದೆ ಅರುಹಿದೆ.

ಅದಾನಿ-ಹಿಂಡನ್ಬರ್ಗ್ ಪ್ರಕರಣ: ತನಿಖೆಗೆ ಹೆಚ್ಚುವರಿ ಕಾಲಾವಕಾಶ ಕೇಳುವುದಿಲ್ಲ- ಸುಪ್ರೀಂಕೋರ್ಟ್ ಬಳಿ ಸೆಬಿ ಸ್ಪಷ್ಟನೆ
ಅದಾನಿ ಗ್ರೂಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 24, 2023 | 2:28 PM

Share

ನವದೆಹಲಿ, ನವೆಂಬರ್ 24: ಇದೇ ಜನವರಿ ತಿಂಗಳಲ್ಲಿ ಅದಾನಿ ಗ್ರೂಪ್ ವಿರುದ್ಧ ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆ (Hindenburg Research) ಬಹಿರಂಗಗೊಳಿಸಿದ್ದ ಸ್ಫೋಟಕ ವರದಿ ಸಂಬಂಧ ಸುಪ್ರೀಂ ಕೋರ್ಟ್ ಅಣತಿಯಂತೆ ತನಿಖೆ ನಡೆಸುತ್ತಿರುವ ಸೆಬಿ (SEBI) ತಾನು ತನಿಖೆಗೆ ಹೆಚ್ಚುವರಿ ಕಾಲಾವಕಾಶ ಕೋರುವುದಿಲ್ಲ ಎಂದು ಹೇಳಿದೆ. ಇಂದು ಸರ್ವೋಚ್ಚ ನ್ಯಾಯಪೀಠದಲ್ಲಿ ನಡೆದ ವಿಚಾರಣೆಯಲ್ಲಿ, ಸೆಬಿ ಈ ವಿಚಾರ ಸ್ಪಷ್ಟಪಡಿಸಿದೆ. ನ್ಯಾಯಪೀಠದಲ್ಲಿದ್ದ ಸಿಜೆಐ ಡಿವೈ ಚಂದ್ರಚೂಡ್ ಅವರು, ಹಿಂಡನ್ಬರ್ಗ್ ಪ್ರಕರಣದ ತನಿಖೆ ಎಲ್ಲಿಯವರೆಗೆ ಬಂದಿದೆ ಎಂದು ಸೆಬಿಯನ್ನು ವಿಚಾರಿಸಿದರು. ಇದಕ್ಕೆ ಉತ್ತರಿಸಿದ ಸೆಬಿ ಸಂಸ್ಥೆಯ ಪರ ವಕೀಲರು, ಅದಾನಿ-ಹಿಂಡನ್ಬರ್ಗ್ ಪ್ರಕರಣದ 24 ಕೇಸ್​ಗಳ ಪೈಕಿ 22 ಕೇಸ್​ಗಳ ತನಿಖೆ ಪೂರ್ಣಗೊಂಡಿರುವ ಸಂಗತಿಯನ್ನು ತಿಳಿಸಿದರು.

ಇನ್ನುಳಿದ ಎರಡು ಪ್ರಕರಣದಲ್ಲಿ ವಿದೇಶ ಪ್ರಾಧಿಕಾರಗಳಿಂದ (Foreign Regulators) ಮಾಹಿತಿ ಬರಬೇಕಿದೆ. ಎಷ್ಟು ಅವಧಿಗೆ ಆ ಮಾಹಿತಿ ಸಿಗುತ್ತದೆ ಎಂಬುದು ತಮ್ಮ ನಿಯಂತ್ರಣದಲ್ಲಿಲ್ಲ ಎಂದು ಸೆಬಿ ಪರ ವಕಾಲತ್ತು ವಹಿಸಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹತಾ ಹೇಳಿದರು.

ಷೇರು ಬೆಲೆಗಳಲ್ಲಿ ಬಹಳ ವ್ಯತ್ಯಯವಾಗುತ್ತಿದ್ದುದು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಲು ಒಂದು ಕಾರಣ ಎಂದು ಸ್ಪಷ್ಟಪಡಿಸಿದ ಸರ್ವೂಚ್ಚ ನ್ಯಾಯಪೀಠ, ‘ಈ ವ್ಯತ್ಯಯಗಳಿಂದ ಹೂಡಿಕೆದಾರರನ್ನು ರಕ್ಷಿಸಲು ಸೆಬಿ ಏನು ಮಾಡುತ್ತಿದೆ? ಹಿಂಡನ್ಬರ್ಗ್ ವರದಿ ಪ್ರಕಟಗೊಂಡ ತರುವಾಯ ಶಾರ್ಟ್ ಸೆಲ್ಲಿಂಗ್​ನಲ್ಲಿ ಏನಾದರೂ ಅಕ್ರಮವಾಗಿದೆಯಾ?’ ಎಂದು ಮುಖ್ಯ ನ್ಯಾಯಮೂರ್ತಿಗಳು ಸೆಬಿಯನ್ನು ಕೇಳಿದರು.

ಇದನ್ನೂ ಓದಿ: Supreme Court: ಅದಾನಿ-ಹಿಂಡನ್ಬರ್ಗ್ ಪ್ರಕರಣ: ಸೆಬಿ ವಿರುದ್ಧ ನ್ಯಾಯಾಂಗ ನಿಂದನೆ ದೂರು ದಾಖಲು

ಇದಕ್ಕೆ ಉತ್ತರಿಸಿದ ಸೆಬಿ ಪರ ವಕೀಲರು, ‘ಶಾರ್ಟ್ ಸೆಲ್ಲಿಂಗ್ ನಡೆದ ಸಂದರ್ಭಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ಇನ್ನು, ಸುಪ್ರೀಂಕೋರ್ಟ್ ನೇಮಿಸಿದ ತಜ್ಞರ ಸಮಿತಿ ಷೇರುಪೇಟೆ ನಿಯಮ ಬಲಪಡಿಸಲು ಮಾಡಿದ ಸಲಹೆಗಳು ಮತ್ತು ಶಿಫಾರಸುಗಳಿಗೆ ತನ್ನದೇನೂ ಅಭ್ಯಂತರ ಇಲ್ಲ. ಆ ಸಲಹೆಗಳನ್ನು ಪರಿಗಣಿಸಿ ಸ್ವೀಕರಿಸಿದ್ದೇವೆ,’ ಎಂದು ತುಷಾರ್ ಮೆಹ್ತಾ ಮಾಹಿತಿ ನೀಡಿದರು.

ಏನಿದು ಅದಾನಿ ಹಿಂಡನ್ಬರ್ಗ್ ಪ್ರಕರಣ?

ಹಿಂಡನ್ಬರ್ಗ್ ರಿಸರ್ಚ್ ಎಂಬ ಶಾರ್ಟ್ ಸೆಲ್ಲರ್ ಕಂಪನಿಯು ಜನವರಿಯಲ್ಲಿ ಸ್ಫೋಟಕ ವರದಿಯೊಂದನ್ನು ಬಿಡುಗಡೆ ಮಾಡಿತ್ತು. ಅದಾನಿ ಗ್ರೂಪ್ ತನ್ನ ಕಂಪನಿಗಳ ಷೇರುಬೆಲೆ ಕೃತಕವಾಗಿ ಉಬ್ಬುವ ರೀತಿಯಲ್ಲಿ ಅಕ್ರಮಗಳನ್ನು ಎಸಗಿದ್ದೂ ಸೇರಿದಂತೆ ಹಲವು ಗುರುತರ ಆರೋಪಗಳನ್ನು ಮಾಡಿತ್ತು. ಅದಾದ ಬಳಿಕ ಅದಾನಿ ಗ್ರೂಪ್ ಕಂಪನಿಗಳ ಷೇರುಬೆಲೆ ಗಣನೀಯವಾಗಿ ತಗ್ಗಿತು.

ಇದನ್ನೂ ಓದಿ: ಅದಾನಿ ಹಿಂಡನ್ಬರ್ಗ್ ಪ್ರಕರಣ: ನ. 8ರಷ್ಟರಲ್ಲಿ ಅಂತಿಮ ದಾಖಲೆ ಸಲ್ಲಿಸುವಂತೆ ಎಲ್ಲರಿಗೂ ಸುಪ್ರೀಂಕೋರ್ಟ್ ಆದೇಶ

ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿ, ತಜ್ಞರ ಸಮಿತಿಯೊಂದನ್ನು ರಚಿಸಿತು. ಹಾಗೆಯೇ, ಹಿಂಡನ್ಬರ್ಗ್ ವರದಿಯಲ್ಲಿನ ಅಂಶಗಳನ್ನು ತನಿಖೆ ನಡೆಸುವಂತೆ ಷೇರುಪೇಟೆ ನಿಯಂತ್ರಕ ಸಂಸ್ಥೆ ಸೆಬಿಗೆ ಆದೇಶಿಸಿತು. ಮೂರು ತಿಂಗಳೊಳಗೆ ಅದರ ತನಿಖೆ ಪೂರ್ಣಗೊಳಿಸಬೇಕಾಗಿತ್ತಾದರೂ ಸೆಬಿ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಈಗ ತನಿಖೆಯ ಸ್ಥಿತಿ ಎಲ್ಲಿಗೆ ಬಂದಿದೆ ಎಂದು ಸುಪ್ರೀಂಕೋರ್ಟ್ ವಿಚಾರಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ