AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani: ಗೌತಮ್ ಅದಾನಿಗೆ ಇನ್ನಷ್ಟು ನಿರಾಳ; ಹಿಂಡನ್ಬರ್ಗ್ ಪ್ರಕರಣದ ತನಿಖೆ ಎಸ್​ಐಟಿಗೆ ವಹಿಸಲು ಸುಪ್ರೀಂಕೋರ್ಟ್ ನಕಾರ

Supreme Court Judgement: ಅದಾನಿ ಗ್ರೂಪ್ ವಿರುದ್ಧ ಹಿಂಡನ್ಬರ್ಗ್ ಮಾಡಿದ ಆರೋಪಗಳ ಸಂಬಂಧ ಸೆಬಿ ಸದ್ಯ ತನಿಖೆ ನಡೆಸುತ್ತಿದೆ. ಈ ತನಿಖೆಯನ್ನು ಎಸ್​ಐಟಿಗೆ ವರ್ಗಾಯಿಸಲು ಸೂಕ್ತ ಕಾರಣಗಳು ಇಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

Adani: ಗೌತಮ್ ಅದಾನಿಗೆ ಇನ್ನಷ್ಟು ನಿರಾಳ; ಹಿಂಡನ್ಬರ್ಗ್ ಪ್ರಕರಣದ ತನಿಖೆ ಎಸ್​ಐಟಿಗೆ ವಹಿಸಲು ಸುಪ್ರೀಂಕೋರ್ಟ್ ನಕಾರ
ಸುಪ್ರೀಂಕೋರ್ಟ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jan 03, 2024 | 11:14 AM

ನವದೆಹಲಿ, ಜನವರಿ 3: ಗೌತಮ್ ಅದಾನಿ (Gautam Adani) ಅವರಿಗೆ ಇನ್ನಷ್ಟು ನಿರಾಳತೆ ತರುವ ಬೆಳವಣಿಗೆಯೊಂದರಲ್ಲಿ, ಸುಪ್ರೀಮ್ ಕೋರ್ಟ್ ಹಿಂಡನ್ಬರ್ಗ್ ಪ್ರಕರಣದ (Adani – Hindenburg Research Case) ತನಿಖೆಯನ್ನು ಸೆಬಿಯಿಂದ ಎಸ್​ಐಟಿಗೆ ವರ್ಗಾಯಿಸಲು ನಿರಾಸಕ್ತಿ ತೋರಿದೆ. ಅದಾನಿ ಗ್ರೂಪ್ ವಿರುದ್ಧ ಹಿಂಡನ್ಬರ್ಗ್ ಮಾಡಿದ ಆರೋಪಗಳ ಸಂಬಂಧ ಸೆಬಿ (SEBI) ಸದ್ಯ ತನಿಖೆ ನಡೆಸುತ್ತಿದೆ. ಈ ತನಿಖೆಯನ್ನು ಎಸ್​ಐಟಿಗೆ ವರ್ಗಾಯಿಸಲು ಸೂಕ್ತ ಕಾರಣಗಳು ಇಲ್ಲ ಎಂದು ಸುಪ್ರೀಂಕೋರ್ಟ್ (supreme court) ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಈ ತೀರ್ಮಾನಕ್ಕೆ ಬಂದಿದೆ.

ಹಿಂಡನ್ಬರ್ಗ್ ರಿಸರ್ಚ್ ಅಥವಾ ಇನ್ಯಾವುದಾದರೂ ವರದಿಯ ಆಧಾರದ ಮೇಲೆ ಪ್ರಕರಣವನ್ನು ಪ್ರತ್ಯೇಕವಾಗಿ ತನಿಖೆ ಮಾಡುವ ಅವಶ್ಯಕತೆ ಇಲ್ಲ. ಹಾಗೆ ತನಿಖೆಗೆ ಆದೇಶಿಸುವಂತಹ ಅಂಶಗಳೂ ಕಾಣುತ್ತಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಈ ನ್ಯಾಯಪೀಠದಲ್ಲಿ ಸಿಜೆಐ ಡಿವೈ ಚಂದ್ರಚೂಡ್ ಜೊತೆಗೆ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲ ಮತ್ತು ಮನೋಜ್ ಮಿಶ್ರಾ ಅವರಿದ್ದಾರೆ.

ಸೆಬಿಗೆ ಮೂರು ತಿಂಗಳ ಗಡುವು

ಅದಾನಿ ಹಿಂಡನ್ಬರ್ಗ್ ಪ್ರಕರಣದಲ್ಲಿ ಸಂಬಂಧ 22 ವಿಷಯಗಳ ಪೈಕಿ 20ರಷ್ಟನ್ನು ಸೆಬಿ ತನಿಖೆ ಪೂರ್ಣಗೊಳಿಸಿದೆ. ಇನ್ನೆರಡು ಪ್ರಕರಣಗಳು ಬಾಕಿ ಇವೆ. ಮುಖ್ಯ ನ್ಯಾಯಮೂರ್ತಿಗಳು ಈ ಎರಡು ಪ್ರಕರಣದ ತನಿಖೆಯನ್ನು 3 ತಿಂಗಳಲ್ಲಿ ಮುಗಿಸುವಂತೆ ಸೆಬಿಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: Gautam Adani: ಅದಾನಿ ಹಿತಾಸಕ್ತಿಗಳಿಗೆ ವಿರುದ್ಧವಾದ ಗುಂಪುಗಳ ದಾಳಿ ಎದುರಾದರೂ ಎದೆಗುಂದಲಿಲ್ಲ: ವಿಡಿಯೋ ಸಂದೇಶದಲ್ಲಿ ಗೌತಮ್ ಅದಾನಿ

ಏನಿದು ಅದಾನಿ ಹಿಂಡನ್ಬರ್ಗ್ ಪ್ರಕರಣ?

ಕಳೆದ ವರ್ಷದ ಜನವರಿಯಲ್ಲಿ ಶಾರ್ಟ್ ಸೆಲ್ಲರ್ ಸಂಸ್ಥೆಯಾದ ಹಿಂಡನ್ಬರ್ಗ್ ರಿಸರ್ಚ್ ಅದಾನಿ ಗ್ರೂಪ್ ವಿರುದ್ಧ ಸ್ಫೋಟಕ ವರದಿ ಬಿಡುಗಡೆ ಮಾಡಿತ್ತು. ಷೇರು ಅಕ್ರಮ ಸೇರಿದಂತೆ ಹಲವು ಆರೋಪಗಳನ್ನು ಮಾಡಲಾಗಿತ್ತು. ಆ ವರದಿ ಬಿಡುಗಡೆ ಆಗುತ್ತಿದ್ದಂತೆಯೇ ಅದಾನಿ ಗ್ರೂಪ್​ನ ವಿವಿಧ ಸಂಸ್ಥೆಗಳ ಷೇರುಗಳು ಕುಸಿತ ಕಂಡವು. ನೋಡನೋಡುತ್ತಿದ್ದಂತೆಯೇ ಕೆಲವೇ ದಿನಗಳಲ್ಲಿ ಅದಾನಿ ಗ್ರೂಪ್​ನ ಒಟ್ಟೂ ಷೇರುಸಂಪತ್ತು ಶೇ. 60ಕ್ಕಿಂತಲೂ ಹೆಚ್ಚು ಕರಗಿಹೋದವು.

ಇದೇ ವೇಳೆ ಸುಪ್ರೀಂಕೋರ್ಟ್ ಈ ಪ್ರಕರಣದ ತನಿಖೆಯನ್ನು ಸೆಬಿಗೆ ವಹಿಸಿತು. ಮೂಲ ಕಾಲಾವಕಾಶದಲ್ಲಿ ಸೆಬಿ ತನಿಖೆ ಪೂರ್ಣಗೊಳಿಸಿಲ್ಲ. ಇದು ಗಂಭೀರ ಸ್ವರೂಪದ್ದಾದ್ದರಿಂದ ತನಿಖೆಗೆ ಹೆಚ್ಚಿನ ಕಾಲಾವಕಾಶ ಬೇಕೆಂದು ಸೆಬಿ ಹೇಳಿದೆ. ಒಟ್ಟು 22 ಅಂಶಗಳಲ್ಲಿ ಸೆಬಿ ತನಿಖೆ ನಡೆಸಿದೆ. ಈ ಪೈಕಿ 20 ಅಂಶಗಳ ತನಿಖೆಯನ್ನು ಸೆಬಿ ಪೂರ್ಣಗೊಳಿಸಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಅದಾನಿ ಗ್ರೂಪ್ ಕಂಪನಿಗಳಿಗೆ ಷೇರುಪೇಟೆಯಲ್ಲಿ ಸುಗ್ಗಿ; ವಿಶ್ವ ಶ್ರೀಮಂತರ ಟಾಪ್15 ಪಟ್ಟಿಯಲ್ಲಿ ಗೌತಮ್ ಅದಾನಿ

ಈವರೆಗೆ ಬಂದಿರುವ ಸುಳಿವುಗಳ ಪ್ರಕಾರ ಅದಾನಿ ಗ್ರೂಪ್ ವಿರುದ್ಧ ಹಿಂಡನ್ಬರ್ಗ್ ಮಾಡಿರುವ ಆರೋಪಗಳಿಗೆ ಪ್ರಬಲ ಸಾಕ್ಷ್ಯಾಧಾರಗಳು ಸೆಬಿಗೆ ಸಿಕ್ಕಿಲ್ಲ ಎನ್ನಲಾಗಿದೆ. ಸುಪ್ರೀಮ್ ಕೋರ್ಟ್ ಕೂಡ ಈ ಹಿಂದಿನ ವಿಚಾರಣೆಗಳಲ್ಲಿ, ಹಿಂಡನ್ಬರ್ಗ್ ಇತ್ಯಾದಿ ಸಂಸ್ಥೆಗಳಲ್ಲಿ ಬಂದ ವರದಿಯನ್ನೇ ಸತ್ಯವೆಂದು ನಂಬಲು ಸಾಧ್ಯ ಇಲ್ಲ ಎನ್ನುವಂಥ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಬೆಳವಣಿಗೆಗಳು ಗೌತಮ್ ಅದಾನಿ ಮತ್ತವರ ಗ್ರೂಪ್​ಗೆ ನಿರಾಳತೆ ತಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:51 am, Wed, 3 January 24

ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ