AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani One App: ವಿಮಾನ ನಿಲ್ದಾಣ ಸೇವೆಗಳಿಗಾಗಿ ಅದಾನಿ ಸಮೂಹದಿಂದ ಅದಾನಿ ವನ್ ಆ್ಯಪ್ ಬಿಡುಗಡೆ

ವಿಮಾನ ನಿಲ್ದಾಣಗಳನ್ನು ಕೇಂದ್ರೀಕರಿಸಿಕೊಂಡು ಗ್ರಾಹಕರಿಗೆ ಸೇವೆ ನೀಡಲು ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹ ‘ಅದಾನಿ ವನ್’ ಆ್ಯಪ್ ಬಿಡುಗಡೆ ಮಾಡಿದೆ.

Adani One App: ವಿಮಾನ ನಿಲ್ದಾಣ ಸೇವೆಗಳಿಗಾಗಿ ಅದಾನಿ ಸಮೂಹದಿಂದ ಅದಾನಿ ವನ್ ಆ್ಯಪ್ ಬಿಡುಗಡೆ
ಅದಾನಿ ಸಮೂಹImage Credit source: Reuters
TV9 Web
| Edited By: |

Updated on:Dec 20, 2022 | 7:23 PM

Share

ನವದೆಹಲಿ: ವಿಮಾನ ನಿಲ್ದಾಣಗಳನ್ನು ಕೇಂದ್ರೀಕರಿಸಿಕೊಂಡು ಗ್ರಾಹಕರಿಗೆ ಸೇವೆ ನೀಡಲು ಉದ್ಯಮಿ ಗೌತಮ್ ಅದಾನಿ (Gautam Adani) ನೇತೃತ್ವದ ಅದಾನಿ ಸಮೂಹ (Adani group) ‘ಅದಾನಿ ವನ್ (Adani One app)’ ಆ್ಯಪ್ ಬಿಡುಗಡೆ ಮಾಡಿದೆ. ಈ ಕುರಿತು ಕಂಪನಿಯ ಮುಖ್ಯ ಡಿಜಿಟಲ್ ಅಧಿಕಾರಿ, ಹಿರಿಯ ಉಪಾಧ್ಯಕ್ಷ ನಿತಿನ್ ಸೇಥಿ ಮಾಹಿತಿ ನೀಡಿದ್ದಾರೆ. ಅದಾನಿ ವನ್ ಬಿಡುಗಡೆಯೊಂದಿಗೆ ನಮ್ಮ ಡಿಜಿಟಲ್ ಯಾನದಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದೇವೆ. ಸಾಂಪ್ರದಾಯಿಕ ಉದ್ಯಮಗಳಿಗೆ ಸಮಾನಾಂತರವಾಗಿ ಇದೂ ಸಹ ಕಾರ್ಯನಿರ್ವಹಿಸಲಿದೆ ಎಂದು ಸೇಥಿ ಹೇಳಿದ್ದಾರೆ.

ಈ ಆ್ಯಪ್ ಬಿಡುಗಡೆಯು ಗ್ರಾಹಕರ ಅಭಿಪ್ರಾಯಗಳು ಮತ್ತು ಪ್ರತಿಕ್ರಿಯೆಯನ್ನು ತಿಳಿಯುವ ಗುರಿ ಹೊಂದಿದೆ. ಈ ಮೂಲಕ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ಮತ್ತು ಅವರ ಅನುಭವವನ್ನು ಉತ್ತಮಗೊಸಲು ನಮಗೆ ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Holidays in 2023: 15 ಸುದೀರ್ಘ ವಾರಾಂತ್ಯಗಳು; ಇಲ್ಲಿದೆ 2023ರ ರಜೆ ವಿವರ

ಅದಾನಿ ವನ್ ಆ್ಯಪ್ ಪ್ರಯಾಣಿಕರಿಗೆ ಹೇಗೆ ನೆರವಾಗಲಿದೆ?

ವಿಮಾನಗಳ ಟಿಕೆಟ್ ಕಾಯ್ದಿರಿಸಲು, ಸುಂಕ ರಹಿತ ಅಂಗಡಿಗಳಿಂದ ಖರೀದಿ, ಕ್ಯಾಬ್​ ಬುಕ್ ಮಾಡಲು, ವಿಮಾನಗಳ ಸ್ಥಿತಿಗತಿ ಪರಿಶೀಲಿಸಲು ಹಾಗೂ ಅದಾನಿ ರಿವಾರ್ಡ್ಸ್ ಪ್ರಯೋಜನಗಳನ್ನು ಪಡೆದುಕೊಳ್ಳಲು ಅದಾನಿ ವನ್ ಆ್ಯಪ್ ನೆರವಾಗಲಿದೆ. ಚೆಕ್ ಇನ್ ಬ್ಯಾಗೇಜ್ ಅಸಿಸ್ಟೆನ್ಸ್​ನಂಥ ಸೇವೆಗಳನ್ನು ಪಡೆದುಕೊಳ್ಳಲೂ ಆ್ಯಪ್ ನೆರವಾಗಲಿದೆ ಎಂದು ಕಂಪನಿಯ ವೆಬ್​​ಸೈಟ್​ನಲ್ಲಿ ತಿಳಿಸಲಾಗಿದೆ.

ಅದಾನಿ ವನ್ ಆ್ಯಪ್ ಬಿಡುಗಡೆ ಮಾಡಿರುವುದು ಅದಾನಿ ಅವರ ಉದ್ದೇಶಿತ ‘ಸೂಪರ್ ಆ್ಯಪ್’ ಬಿಡುಗಡೆಗೆ ನೀಡಿರುವ ಸುಳಿವು ಆಗಿರಬಹುದು ಎನ್ನಲಾಗಿದೆ. ಮುಂದಿನ 3-6 ತಿಂಗಳುಗಳ ಒಳಗೆ ‘ಸೂಪರ್ ಆ್ಯಪ್’ ಬಿಡುಗಡೆ ಮಾಡುವುದಾಗಿ ಇತ್ತೀಚೆಗೆ ‘ಫೈನಾನ್ಶಿಯಲ್ ಟೈಮ್ಸ್’ಗೆ ನೀಡಿದ್ದ ಸಂದರ್ಶನದಲ್ಲಿ ಗೌತಮ್ ಅದಾನಿ ತಿಳಿಸಿದ್ದರು. ಅದಾನಿ ಸಮೂಹದ ಅದಾನಿ ಡಿಜಿಟಲ್ ಲ್ಯಾಬ್ಸ್ ಆ್ಯಪ್ ಅಭಿವೃದ್ಧಿಪಡಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Tue, 20 December 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?