AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani One App: ವಿಮಾನ ನಿಲ್ದಾಣ ಸೇವೆಗಳಿಗಾಗಿ ಅದಾನಿ ಸಮೂಹದಿಂದ ಅದಾನಿ ವನ್ ಆ್ಯಪ್ ಬಿಡುಗಡೆ

ವಿಮಾನ ನಿಲ್ದಾಣಗಳನ್ನು ಕೇಂದ್ರೀಕರಿಸಿಕೊಂಡು ಗ್ರಾಹಕರಿಗೆ ಸೇವೆ ನೀಡಲು ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹ ‘ಅದಾನಿ ವನ್’ ಆ್ಯಪ್ ಬಿಡುಗಡೆ ಮಾಡಿದೆ.

Adani One App: ವಿಮಾನ ನಿಲ್ದಾಣ ಸೇವೆಗಳಿಗಾಗಿ ಅದಾನಿ ಸಮೂಹದಿಂದ ಅದಾನಿ ವನ್ ಆ್ಯಪ್ ಬಿಡುಗಡೆ
ಅದಾನಿ ಸಮೂಹImage Credit source: Reuters
TV9 Web
| Edited By: |

Updated on:Dec 20, 2022 | 7:23 PM

Share

ನವದೆಹಲಿ: ವಿಮಾನ ನಿಲ್ದಾಣಗಳನ್ನು ಕೇಂದ್ರೀಕರಿಸಿಕೊಂಡು ಗ್ರಾಹಕರಿಗೆ ಸೇವೆ ನೀಡಲು ಉದ್ಯಮಿ ಗೌತಮ್ ಅದಾನಿ (Gautam Adani) ನೇತೃತ್ವದ ಅದಾನಿ ಸಮೂಹ (Adani group) ‘ಅದಾನಿ ವನ್ (Adani One app)’ ಆ್ಯಪ್ ಬಿಡುಗಡೆ ಮಾಡಿದೆ. ಈ ಕುರಿತು ಕಂಪನಿಯ ಮುಖ್ಯ ಡಿಜಿಟಲ್ ಅಧಿಕಾರಿ, ಹಿರಿಯ ಉಪಾಧ್ಯಕ್ಷ ನಿತಿನ್ ಸೇಥಿ ಮಾಹಿತಿ ನೀಡಿದ್ದಾರೆ. ಅದಾನಿ ವನ್ ಬಿಡುಗಡೆಯೊಂದಿಗೆ ನಮ್ಮ ಡಿಜಿಟಲ್ ಯಾನದಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದೇವೆ. ಸಾಂಪ್ರದಾಯಿಕ ಉದ್ಯಮಗಳಿಗೆ ಸಮಾನಾಂತರವಾಗಿ ಇದೂ ಸಹ ಕಾರ್ಯನಿರ್ವಹಿಸಲಿದೆ ಎಂದು ಸೇಥಿ ಹೇಳಿದ್ದಾರೆ.

ಈ ಆ್ಯಪ್ ಬಿಡುಗಡೆಯು ಗ್ರಾಹಕರ ಅಭಿಪ್ರಾಯಗಳು ಮತ್ತು ಪ್ರತಿಕ್ರಿಯೆಯನ್ನು ತಿಳಿಯುವ ಗುರಿ ಹೊಂದಿದೆ. ಈ ಮೂಲಕ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ಮತ್ತು ಅವರ ಅನುಭವವನ್ನು ಉತ್ತಮಗೊಸಲು ನಮಗೆ ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Holidays in 2023: 15 ಸುದೀರ್ಘ ವಾರಾಂತ್ಯಗಳು; ಇಲ್ಲಿದೆ 2023ರ ರಜೆ ವಿವರ

ಅದಾನಿ ವನ್ ಆ್ಯಪ್ ಪ್ರಯಾಣಿಕರಿಗೆ ಹೇಗೆ ನೆರವಾಗಲಿದೆ?

ವಿಮಾನಗಳ ಟಿಕೆಟ್ ಕಾಯ್ದಿರಿಸಲು, ಸುಂಕ ರಹಿತ ಅಂಗಡಿಗಳಿಂದ ಖರೀದಿ, ಕ್ಯಾಬ್​ ಬುಕ್ ಮಾಡಲು, ವಿಮಾನಗಳ ಸ್ಥಿತಿಗತಿ ಪರಿಶೀಲಿಸಲು ಹಾಗೂ ಅದಾನಿ ರಿವಾರ್ಡ್ಸ್ ಪ್ರಯೋಜನಗಳನ್ನು ಪಡೆದುಕೊಳ್ಳಲು ಅದಾನಿ ವನ್ ಆ್ಯಪ್ ನೆರವಾಗಲಿದೆ. ಚೆಕ್ ಇನ್ ಬ್ಯಾಗೇಜ್ ಅಸಿಸ್ಟೆನ್ಸ್​ನಂಥ ಸೇವೆಗಳನ್ನು ಪಡೆದುಕೊಳ್ಳಲೂ ಆ್ಯಪ್ ನೆರವಾಗಲಿದೆ ಎಂದು ಕಂಪನಿಯ ವೆಬ್​​ಸೈಟ್​ನಲ್ಲಿ ತಿಳಿಸಲಾಗಿದೆ.

ಅದಾನಿ ವನ್ ಆ್ಯಪ್ ಬಿಡುಗಡೆ ಮಾಡಿರುವುದು ಅದಾನಿ ಅವರ ಉದ್ದೇಶಿತ ‘ಸೂಪರ್ ಆ್ಯಪ್’ ಬಿಡುಗಡೆಗೆ ನೀಡಿರುವ ಸುಳಿವು ಆಗಿರಬಹುದು ಎನ್ನಲಾಗಿದೆ. ಮುಂದಿನ 3-6 ತಿಂಗಳುಗಳ ಒಳಗೆ ‘ಸೂಪರ್ ಆ್ಯಪ್’ ಬಿಡುಗಡೆ ಮಾಡುವುದಾಗಿ ಇತ್ತೀಚೆಗೆ ‘ಫೈನಾನ್ಶಿಯಲ್ ಟೈಮ್ಸ್’ಗೆ ನೀಡಿದ್ದ ಸಂದರ್ಶನದಲ್ಲಿ ಗೌತಮ್ ಅದಾನಿ ತಿಳಿಸಿದ್ದರು. ಅದಾನಿ ಸಮೂಹದ ಅದಾನಿ ಡಿಜಿಟಲ್ ಲ್ಯಾಬ್ಸ್ ಆ್ಯಪ್ ಅಭಿವೃದ್ಧಿಪಡಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Tue, 20 December 22

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್