AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani One App: ವಿಮಾನ ನಿಲ್ದಾಣ ಸೇವೆಗಳಿಗಾಗಿ ಅದಾನಿ ಸಮೂಹದಿಂದ ಅದಾನಿ ವನ್ ಆ್ಯಪ್ ಬಿಡುಗಡೆ

ವಿಮಾನ ನಿಲ್ದಾಣಗಳನ್ನು ಕೇಂದ್ರೀಕರಿಸಿಕೊಂಡು ಗ್ರಾಹಕರಿಗೆ ಸೇವೆ ನೀಡಲು ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹ ‘ಅದಾನಿ ವನ್’ ಆ್ಯಪ್ ಬಿಡುಗಡೆ ಮಾಡಿದೆ.

Adani One App: ವಿಮಾನ ನಿಲ್ದಾಣ ಸೇವೆಗಳಿಗಾಗಿ ಅದಾನಿ ಸಮೂಹದಿಂದ ಅದಾನಿ ವನ್ ಆ್ಯಪ್ ಬಿಡುಗಡೆ
ಅದಾನಿ ಸಮೂಹImage Credit source: Reuters
TV9 Web
| Edited By: |

Updated on:Dec 20, 2022 | 7:23 PM

Share

ನವದೆಹಲಿ: ವಿಮಾನ ನಿಲ್ದಾಣಗಳನ್ನು ಕೇಂದ್ರೀಕರಿಸಿಕೊಂಡು ಗ್ರಾಹಕರಿಗೆ ಸೇವೆ ನೀಡಲು ಉದ್ಯಮಿ ಗೌತಮ್ ಅದಾನಿ (Gautam Adani) ನೇತೃತ್ವದ ಅದಾನಿ ಸಮೂಹ (Adani group) ‘ಅದಾನಿ ವನ್ (Adani One app)’ ಆ್ಯಪ್ ಬಿಡುಗಡೆ ಮಾಡಿದೆ. ಈ ಕುರಿತು ಕಂಪನಿಯ ಮುಖ್ಯ ಡಿಜಿಟಲ್ ಅಧಿಕಾರಿ, ಹಿರಿಯ ಉಪಾಧ್ಯಕ್ಷ ನಿತಿನ್ ಸೇಥಿ ಮಾಹಿತಿ ನೀಡಿದ್ದಾರೆ. ಅದಾನಿ ವನ್ ಬಿಡುಗಡೆಯೊಂದಿಗೆ ನಮ್ಮ ಡಿಜಿಟಲ್ ಯಾನದಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದೇವೆ. ಸಾಂಪ್ರದಾಯಿಕ ಉದ್ಯಮಗಳಿಗೆ ಸಮಾನಾಂತರವಾಗಿ ಇದೂ ಸಹ ಕಾರ್ಯನಿರ್ವಹಿಸಲಿದೆ ಎಂದು ಸೇಥಿ ಹೇಳಿದ್ದಾರೆ.

ಈ ಆ್ಯಪ್ ಬಿಡುಗಡೆಯು ಗ್ರಾಹಕರ ಅಭಿಪ್ರಾಯಗಳು ಮತ್ತು ಪ್ರತಿಕ್ರಿಯೆಯನ್ನು ತಿಳಿಯುವ ಗುರಿ ಹೊಂದಿದೆ. ಈ ಮೂಲಕ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ಮತ್ತು ಅವರ ಅನುಭವವನ್ನು ಉತ್ತಮಗೊಸಲು ನಮಗೆ ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Holidays in 2023: 15 ಸುದೀರ್ಘ ವಾರಾಂತ್ಯಗಳು; ಇಲ್ಲಿದೆ 2023ರ ರಜೆ ವಿವರ

ಅದಾನಿ ವನ್ ಆ್ಯಪ್ ಪ್ರಯಾಣಿಕರಿಗೆ ಹೇಗೆ ನೆರವಾಗಲಿದೆ?

ವಿಮಾನಗಳ ಟಿಕೆಟ್ ಕಾಯ್ದಿರಿಸಲು, ಸುಂಕ ರಹಿತ ಅಂಗಡಿಗಳಿಂದ ಖರೀದಿ, ಕ್ಯಾಬ್​ ಬುಕ್ ಮಾಡಲು, ವಿಮಾನಗಳ ಸ್ಥಿತಿಗತಿ ಪರಿಶೀಲಿಸಲು ಹಾಗೂ ಅದಾನಿ ರಿವಾರ್ಡ್ಸ್ ಪ್ರಯೋಜನಗಳನ್ನು ಪಡೆದುಕೊಳ್ಳಲು ಅದಾನಿ ವನ್ ಆ್ಯಪ್ ನೆರವಾಗಲಿದೆ. ಚೆಕ್ ಇನ್ ಬ್ಯಾಗೇಜ್ ಅಸಿಸ್ಟೆನ್ಸ್​ನಂಥ ಸೇವೆಗಳನ್ನು ಪಡೆದುಕೊಳ್ಳಲೂ ಆ್ಯಪ್ ನೆರವಾಗಲಿದೆ ಎಂದು ಕಂಪನಿಯ ವೆಬ್​​ಸೈಟ್​ನಲ್ಲಿ ತಿಳಿಸಲಾಗಿದೆ.

ಅದಾನಿ ವನ್ ಆ್ಯಪ್ ಬಿಡುಗಡೆ ಮಾಡಿರುವುದು ಅದಾನಿ ಅವರ ಉದ್ದೇಶಿತ ‘ಸೂಪರ್ ಆ್ಯಪ್’ ಬಿಡುಗಡೆಗೆ ನೀಡಿರುವ ಸುಳಿವು ಆಗಿರಬಹುದು ಎನ್ನಲಾಗಿದೆ. ಮುಂದಿನ 3-6 ತಿಂಗಳುಗಳ ಒಳಗೆ ‘ಸೂಪರ್ ಆ್ಯಪ್’ ಬಿಡುಗಡೆ ಮಾಡುವುದಾಗಿ ಇತ್ತೀಚೆಗೆ ‘ಫೈನಾನ್ಶಿಯಲ್ ಟೈಮ್ಸ್’ಗೆ ನೀಡಿದ್ದ ಸಂದರ್ಶನದಲ್ಲಿ ಗೌತಮ್ ಅದಾನಿ ತಿಳಿಸಿದ್ದರು. ಅದಾನಿ ಸಮೂಹದ ಅದಾನಿ ಡಿಜಿಟಲ್ ಲ್ಯಾಬ್ಸ್ ಆ್ಯಪ್ ಅಭಿವೃದ್ಧಿಪಡಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Tue, 20 December 22

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ