AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಷೇರುಬಜಾರಲ್ಲಿ ಅದಾನಿ ಪವರ್ ಅಬ್ಬರ; ಮಾರುಕಟ್ಟೆ ಮೌಲ್ಯದಲ್ಲಿ ಇನ್ಫೋಸಿಸ್ ಹಿಂದಿಕ್ಕಿದ್ದು ಹೇಗೆ?

Adani Power Surpasses Infosys Market Cap: ಅದಾನಿ ಪವರ್ ಮಾರುಕಟ್ಟೆ ಮೌಲ್ಯದಲ್ಲಿ ಐಟಿ ದಿಗ್ಗಜ ಇನ್ಫೋಸಿಸ್ ಅನ್ನು ಹಿಂದಿಕ್ಕಿ ಭಾರತದ ಟಾಪ್ 11 ಕಂಪನಿಗಳಲ್ಲಿ ಒಂದಾಗಿದೆ. ಇತ್ತೀಚಿನ ಷೇರು ಜಿಗಿತ, ಉತ್ತಮ ಲಾಭಾಂಶ, ಸಾಲ ಕಡಿತ ಮತ್ತು ಸಾಂಸ್ಥಿಕ ಹೂಡಿಕೆದಾರರ ಒಲವು ಅದಾನಿ ಪವರ್‌ಗೆ ಶಕ್ತಿ ತುಂಬಿದೆ. ಜಾಗತಿಕ ಐಟಿ ಮಂದಗತಿಯಿಂದ ಇನ್ಫೋಸಿಸ್ ಹಿನ್ನಡೆ ಅನುಭವಿಸಿದ್ದು, ಅದಾನಿ ಪವರ್‌ಗೆ ಮುನ್ನಡೆ ಸಿಕ್ಕಿದೆ. ಇಂಧನ ವಲಯಕ್ಕೆ ಸರ್ಕಾರದ ಉತ್ತೇಜನದಿಂದ ಅದಾನಿ ಪವರ್ ಭವಿಷ್ಯ ಉಜ್ವಲ.

ಷೇರುಬಜಾರಲ್ಲಿ ಅದಾನಿ ಪವರ್ ಅಬ್ಬರ; ಮಾರುಕಟ್ಟೆ ಮೌಲ್ಯದಲ್ಲಿ ಇನ್ಫೋಸಿಸ್ ಹಿಂದಿಕ್ಕಿದ್ದು ಹೇಗೆ?
ಅದಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 27, 2026 | 7:24 PM

Share

ಮುಂಬೈ, ಮೇ 27: ಭಾರತದ ಷೇರು ಮಾರುಕಟ್ಟೆಯಲ್ಲಿ (Stock Market) ಅದಾನಿ ಗ್ರೂಪ್‌ನ ಪ್ರಮುಖ ಕಂಪನಿಯಾದ ‘ಅದಾನಿ ಪವರ್’ (Adani Power) ಐತಿಹಾಸಿಕ ಸಾಧನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಕಂಪನಿಯ ಷೇರುಗಳು ಬರೋಬ್ಬರಿ ಶೇ. 124 ರಷ್ಟು ಭಾರಿ ಜಿಗಿತ ಕಂಡ ಹಿನ್ನೆಲೆಯಲ್ಲಿ, ಅದರ ಷೇರು ಸಂಪತ್ತು ಅಥವಾ ಮಾರುಕಟ್ಟೆ ಮೌಲ್ಯ (Market Capitalization) ಗಣನೀಯವಾಗಿ ಹೆಚ್ಚಿದೆ. ಇದರೊಂದಿಗೆ, ಮಾರುಕಟ್ಟೆ ಮೌಲ್ಯದಲ್ಲಿ ಐಟಿ ದಿಗ್ಗಜ ಇನ್ಫೋಸಿಸ್ (Infosys) ಅನ್ನು ಹಿಂದಿಕ್ಕಿದೆ. ಇದೀಗ ಅದಾನಿ ಪವರ್ ದೇಶದ ಅತ್ಯಂತ ಮೌಲ್ಯಯುತ ಟಾಪ್ ಕಂಪನಿಗಳ ಲೀಗ್‌ಗೆ ಅಧಿಕೃತವಾಗಿ ಲಗ್ಗೆ ಇಟ್ಟಂತಾಗಿದೆ. ಭಾರತದ ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ ಆಗಿರುವ ಅತಿಹೆಚ್ಚು ಮೌಲ್ಯದ ಕಂಪನಿಗಳ ಪಟ್ಟಿಯಲ್ಲಿ ಅದಾನಿ ಪವರ್ 11ನೇ ಸ್ಥಾನಕ್ಕೇರಿದೆ. ರಿಲಾಯನ್ಸ್​ನಿಂದ ಹಿಡಿದು ಐಟಿಸಿವರೆಗೆ ವಿವಿಧ ಕಂಪನಿಗಳು ಟಾಪ್-10ನಲ್ಲಿ ಇವೆ.

ಅದಾನಿ ವರ್ಸಸ್ ಇನ್ಫೋಸಿಸ್, ಮಾರುಕಟ್ಟೆ ಮೌಲ್ಯ

ಷೇರು ಮಾರುಕಟ್ಟೆಯ ಇವತ್ತಿನ ವಹಿವಾಟಿನ ನಂತರದ ಅಂಕಿ-ಅಂಶಗಳ ಪ್ರಕಾರ ಎರಡೂ ಕಂಪನಿಗಳ ಮಾರುಕಟ್ಟೆ ಮೌಲ್ಯದ ಸ್ಥಿತಿ ಹೀಗಿದೆ:

  • ಅದಾನಿ ಪವರ್ (Adani Power): ₹6.78 ಲಕ್ಷ ಕೋಟಿಗಿಂತ ಹೆಚ್ಚು
  • ಇನ್ಫೋಸಿಸ್ (Infosys): ₹6.63 ಲಕ್ಷ ಕೋಟಿ

ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಭಾರತದ ಸಾಂಪ್ರದಾಯಿಕ ಮತ್ತು ಅತ್ಯಂತ ಬಲಿಷ್ಠ ಐಟಿ ಕಂಪನಿಯಾದ ಇನ್ಫೋಸಿಸ್ ಅನ್ನು ಇಂಧನ ಮತ್ತು ವಿದ್ಯುತ್ ವಲಯದ ಕಂಪನಿಯೊಂದು ಮಾರುಕಟ್ಟೆ ಮೌಲ್ಯದಲ್ಲಿ ಓವರ್‌ಟೇಕ್ ಮಾಡಿರುವುದು ಹೂಡಿಕೆದಾರರಲ್ಲಿ ಭಾರಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಆನ್​ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್; ಶೇ 28 ಜಿಎಸ್​ಟಿ ಪೂರ್ವಾನ್ವಯ ತೆರಿಗೆ ಸಿಂಧು ಎಂದು ಕೋರ್ಟ್ ತೀರ್ಪು

ಅದಾನಿ ಪವರ್​ನ ಈ ಭಾರಿ ರ‍್ಯಾಲಿಗೆ ಪ್ರಮುಖ ಕಾರಣಗಳೇನು?

ಲಾಭದಲ್ಲಿ ಭಾರಿ ಪ್ರಗತಿ: ಅದಾನಿ ಪವರ್ ಕಂಪನಿಯು ಇತ್ತೀಚಿನ ತ್ರೈಮಾಸಿಕಗಳಲ್ಲಿ ಸತತವಾಗಿ ಬಲವಾದ ನಿವ್ವಳ ಲಾಭ (Net Profit) ಮತ್ತು ಆದಾಯವನ್ನು ದಾಖಲಿಸುತ್ತಾ ಬಂದಿದೆ. ದೇಶದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯು ಕಂಪನಿಗೆ ವರದಾನವಾಗಿದೆ.

ಸಾಲ ಮರುಪಾವತಿ ಮತ್ತು ಆರ್ಥಿಕ ಸುಧಾರಣೆ: ಹಿಂಡನ್‌ಬರ್ಗ್ ವಿವಾದದ ನಂತರ ಅದಾನಿ ಸಮೂಹವು ತನ್ನ ಸಾಲಗಳನ್ನು ಗಣನೀಯವಾಗಿ ಕಡಿಮೆ ಮಾಡಿಕೊಂಡಿದ್ದು, ಸಾಲದಾತರು ಮತ್ತು ಜಾಗತಿಕ ಹೂಡಿಕೆದಾರರಲ್ಲಿ ನಂಬಿಕೆ ದುಪ್ಪಟ್ಟಾಗಿದೆ.

ಸಾಂಸ್ಥಿಕ ಹೂಡಿಕೆದಾರರ ಒಲವು: ದೇಶೀಯ (DII) ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ಅದಾನಿ ಪವರ್ ಷೇರುಗಳನ್ನು ಭಾರಿ ಪ್ರಮಾಣದಲ್ಲಿ ಖರೀದಿಸುತ್ತಿರುವುದು ಷೇರು ಬೆಲೆ 124% ನಷ್ಟು ಹೆಚ್ಚಾಗಲು ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ: ಪ. ಬಂಗಾಳದಲ್ಲಿ ತೈಲ ನಿಕ್ಷೇಪ; ಉತ್ಪಾದನೆ ದಿಕ್ಕು ಕಾಣಲು ಬೇಕಾಯ್ತು 7 ವರ್ಷ

ಇನ್ಫೋಸಿಸ್‌ಗೆ ಹಿನ್ನಡೆ ಏಕೆ?

ಮತ್ತೊಂದೆಡೆ, ಜಾಗತಿಕವಾಗಿ ಐಟಿ ವಲಯದಲ್ಲಿ (IT Sector) ಕಂಡುಬಂದಿರುವ ಮಂದಗತಿ, ಅಮೆರಿಕ ಮತ್ತು ಯುರೋಪ್ ಮಾರುಕಟ್ಟೆಗಳಿಂದ ಐಟಿ ವೆಚ್ಚ ಕಡಿತ ಮತ್ತು ನಿಧಾನಗತಿಯ ಕ್ಲೈಂಟ್ ಒಪ್ಪಂದಗಳಿಂದಾಗಿ ಇನ್ಫೋಸಿಸ್ ಷೇರುಗಳು ಇತ್ತೀಚಿನ ತಿಂಗಳುಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುನ್ನಡೆಯಲು ಸಾಧ್ಯವಾಗಿಲ್ಲ. ಇದೇ ಆಟದ ಲಾಭ ಪಡೆದ ಅದಾನಿ ಪವರ್ ರೇಸ್‌ನಲ್ಲಿ ಮುಂಚೂಣಿಗೆ ಬಂದಿದೆ.

ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ (Renewable Energy) ವಲಯಕ್ಕೆ ಭಾರತ ಸರ್ಕಾರ ನೀಡುತ್ತಿರುವ ಭಾರಿ ಉತ್ತೇಜನದಿಂದಾಗಿ ಮುಂಬರುವ ದಿನಗಳಲ್ಲಿ ಅದಾನಿ ಪವರ್ ಮತ್ತಷ್ಟು ಎತ್ತರಕ್ಕೆ ಬೆಳೆಯುವ ಮುನ್ಸೂಚನೆಗಳನ್ನು ಮಾರುಕಟ್ಟೆ ತಜ್ಞರು ನೀಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!