AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಅದಾನಿ ಮಹಾಕುಸಿತದಿಂದ ಎಲ್​ಐಸಿ, ಎಸ್​ಬಿಐಗೆ ಹೆಚ್ಚಿನ ಹಾನಿಯಿಲ್ಲ; ಹಣಕಾಸು ಕಾರ್ಯದರ್ಶಿ ಸ್ಪಷ್ಟನೆ

ಅದಾನಿ ಸಮೂಹಕ್ಕೆ ಸಂಬಂಧಿಸಿದ ಆರೋಪಗಳ ವಿರುದ್ಧ ತನಿಖೆಯಾಗಬೇಕೆಂದು ಪ್ರತಿಪಕ್ಷಗಳು ಸಂಸತ್​​ನಲ್ಲಿ ಆಗ್ರಹಿಸಿದ ಬೆನ್ನಲ್ಲೇ ಹಣಕಾಸು ಕಾರ್ಯದರ್ಶಿಯವರು ಈ ಸ್ಪಷ್ಟನೆ ನೀಡಿದ್ದಾರೆ.

Adani Row: ಅದಾನಿ ಮಹಾಕುಸಿತದಿಂದ ಎಲ್​ಐಸಿ, ಎಸ್​ಬಿಐಗೆ ಹೆಚ್ಚಿನ ಹಾನಿಯಿಲ್ಲ; ಹಣಕಾಸು ಕಾರ್ಯದರ್ಶಿ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 03, 2023 | 3:24 PM

Share

ನವದೆಹಲಿ: ಅದಾನಿ ಸಮೂಹ (Adani Group) ಕಂಪನಿಗಳು ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ ಕಂಡಿರುವುದರಿಂದ ಎಲ್​​ಐಸಿ (LIC) ಮತ್ತು ಎಸ್​​ಬಿಐಗೆ (SBI) ಹೆಚ್ಚಿನ ಹಾನಿಯಿಲ್ಲ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ಟಿವಿ ಸೋಮನಾಥನ್ ಸ್ಪಷ್ಟನೆ ನೀಡಿದ್ದಾರೆ. ಇದರೊಂದಿಗೆ, ಅದಾನಿ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಇದೇ ಮೊದಲ ಬಾರಿಗೆ ಮೌನ ಮುರಿದಂತಾಗಿದೆ. ‘ಎನ್​ಡಿ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನೀವು ಸದ್ಯ ಸುದ್ದಿಯಲ್ಲಿರುವ ನಿರ್ದಿಷ್ಟ ಕಂಪನಿಯೊಂದರ ಬಗ್ಗೆ ಪ್ರಶ್ನೆ ಮಾಡುತ್ತಿರುವುದಾದರೆ ಆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಕಂಪನಿಗಳ ಅದೃಷ್ಟದ ಬಗ್ಗೆ ನಾನು ಮಾತನಾಡಲಾರೆ. ಕಂಪನಿಗಳು ಅವುಗಳ ಶಕ್ತಿ ಮತ್ತು ದೌರ್ಬಲ್ಯಕ್ಕನುಗುಣವಾಗಿ ಏಳಿಗೆ ಮತ್ತು ಕುಸಿತ ಕಾಣುತ್ತವೆ. ಎಸ್​ಬಿಐ ಮತ್ತು ಎಲ್​ಐಸಿ ಬಗ್ಗೆಯಷ್ಟೇ ನಾನು ಪ್ರತಿಕ್ರಿಯಿಸಬಲ್ಲೆ ಎಂದು ಹೇಳಿದ್ದಾರೆ.

‘ಯಾವುದೇ ಕಂಪನಿಯಲ್ಲಿ ಎಲ್​​ಐಸಿ ಅಥವಾ ಎಸ್​​ಬಿಐ ಹೂಡಿಕೆ ಮಟ್ಟವು ತುಂಬಾ ಕಡಿಮೆ ಇದೆ. ವಿಮಾ ಕಂಪನಿ ಮತ್ತು ಬ್ಯಾಂಕ್​ ಹೂಡಿಕೆದಾರರು ಈ ಬಗ್ಗೆ ಆತಂಕಪಡಬೇಕಿಲ್ಲ. ಒಂದು ಕಂಪನಿಯ ಭವಿಷ್ಯವು ಈ ಸಂಸ್ಥೆಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವುದಿಲ್ಲ. ಹೀಗಾಗಿ ರಾಷ್ಟ್ರೀಕೃತ ಬ್ಯಾಂಕ್‌ ಠೇವಣಿದಾರರು ಅಥವಾ ವಿಮಾ ಕಂಪನಿಗಳ ಪಾಲಿಸಿದಾರರು ಆತಂಕಪಡಬೇಕಿಲ್ಲ’ ಎಂದು ಅವರು ಹೇಳಿದ್ದಾರೆ.

ಅದಾನಿ ಸಮೂಹಕ್ಕೆ ಸಂಬಂಧಿಸಿದ ಆರೋಪಗಳ ವಿರುದ್ಧ ತನಿಖೆಯಾಗಬೇಕೆಂದು ಪ್ರತಿಪಕ್ಷಗಳು ಸಂಸತ್​​ನಲ್ಲಿ ಆಗ್ರಹಿಸಿದ ಬೆನ್ನಲ್ಲೇ ಹಣಕಾಸು ಕಾರ್ಯದರ್ಶಿಯವರು ಈ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Adani FPO: ಅದಾನಿ ಎಂಟರ್ಪ್ರೈಸಸ್ ಎಫ್​ಪಿಒ ರದ್ದು; ಹೂಡಿಕೆದಾರರಿಗೆ ಹಣ ಮರಳಿಸಲು ನಿರ್ಧಾರ

ಅದಾನಿ ಸಮೂಹದ ಕಂಪನಿಗಳಲ್ಲಿ ಎಲ್​ಐಸಿ 4 ಶತಕೋಟಿ ಡಾಲರ್​ಗೂ ಹೆಚ್ಚು ಹೂಡಿಕೆ ಮಾಡಿದೆ ಎನ್ನಲಾಗಿದ್ದು, ಎಸ್​ಬಿಐ 2.6 ಶತಕೋಟಿ ಡಾಲರ್ ಸಾಲ ನೀಡಿದೆ ಎನ್ನಲಾಗಿದೆ. ಕಳೆದ ವಾರ ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ಲೆಕ್ಕಪತ್ರ ವಂಚನೆ ಮತ್ತು ಷೇರು ಮೌಲ್ಯ ತಿರುಚಿದ ಬಗ್ಗೆ ಅದಾನಿ ಸಮೂಹದ ವಿರುದ್ಧ ಆರೋಪ ಮಾಡಿತ್ತು. ಆ ಬಳಿಕ ಅದಾನಿ ಸಮೂಹದ ಕಂಪನಿಗಳ ಷೇರು ಮೌಲ್ಯದಲ್ಲಿ ಗಣನೀಯ ಕುಸಿತವಾಗಿತ್ತು. ಕಂಪನಿಯ ಮಾಲೀಕ ಗೌತಮ್ ಅದಾನಿ ಸಂಪತ್ತಿನಲ್ಲಿಯೂ ಗಣನೀಯ ಕುಸಿತವಾಗಿದ್ದು, ವಿಶ್ವದ ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿ ಅವರು 16ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಈ ಮಧ್ಯೆ, ಅದಾನಿ ಸಮೂಹದ ವಿವಿಧ ಕಂಪನಿಗಳಿಗೆ ಯಾವ್ಯಾವ ಬ್ಯಾಂಕುಗಳು ಸಾಲ ನೀಡಿವೆ ಎಂದು ಆರ್​ಬಿಐ ಮಾಹಿತಿ ಕಲೆಹಾಕುತ್ತಿದೆ. ಈ ಸಂಬಂಧ ಸ್ಥಳೀಯ ಬ್ಯಾಂಕುಗಳಿಂದ ಆರ್​ಬಿಐ ವಿವರ ಕೋರಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಅದಾನಿ ಎಂಟರ್ಪ್ರೈಸಸ್ ತನ್ನ ಎಫ್​ಪಿಒ (Adani Enterprises FPO) ಯೋಜನೆಯನ್ನು ರದ್ದುಗೊಳಿಸಿದ್ದು, ಹೂಡಿಕೆದಾರರಿಗೆ ಅವರ ಹಣವನ್ನು ವಾಪಸ್ ನೀಡಲು ನಿರ್ಧರಿಸಿರುವುದಾಗಿ ಗುರುವಾರ ತಿಳಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!