AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಅದಾನಿ ಪ್ರಕರಣ; ಹೂಡಿಕೆದಾರರ ಹಿತದೃಷ್ಟಿಯಿಂದ ತಜ್ಞರ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಸೂಚನೆ

ಅದಾನಿ ಸಮೂಹದ ವಿರುದ್ಧ ಕೇಳಿಬಂದಿರುಬವ ಅಕ್ರಮದ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

Adani Row: ಅದಾನಿ ಪ್ರಕರಣ; ಹೂಡಿಕೆದಾರರ ಹಿತದೃಷ್ಟಿಯಿಂದ ತಜ್ಞರ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಸೂಚನೆ
ಸುಪ್ರೀಂ ಕೋರ್ಟ್​
Follow us
Ganapathi Sharma
|

Updated on: Feb 10, 2023 | 6:04 PM

ನವದೆಹಲಿ: ಅದಾನಿ ಸಮೂಹದ (Adani Group) ವಿರುದ್ಧ ಕೇಳಿಬಂದಿರುಬವ ಅಕ್ರಮದ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ಸೂಚನೆ ನೀಡಿದೆ. ಹೂಡಿಕೆದಾರರ ಹಿತ ಕಾಯುವುದಕ್ಕಾಗಿ ಈ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಹೇಳಿದೆ. ಅದಾನಿ ಸಮೂಹದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಬೆನ್ನಲ್ಲೇ ಸರ್ವೋಚ್ಚ ನ್ಯಾಯಾಲಯ ಈ ಸೂಚನೆ ನೀಡಿದೆ. ಅದಾನಿ ಪ್ರಕರಣಕ್ಕೆ ಸಂಬಂಧಿಸಿ ಮಧ್ಯ ಪ್ರವೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನಾವು ಮಧ್ಯ ಪ್ರವೇಶಿಸುವುದು ಹಾಗಿರಲಿ. ಇಂಥ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಲು ಸರಿಯಾದ ವ್ಯವಸ್ಥೆ ನಮ್ಮಲ್ಲಿದೆಯೇ? ನೀತಿ ನಿರೂಪಣೆ ವಿಷಯದಲ್ಲಿ ನಾವು ಮಧ್ಯ ಪ್ರವೇಶಿಸುವುದಿಲ್ಲ. ಅದು ಸರ್ಕಾರಕ್ಕೆ ಸಂಬಂಧಿಸಿದ ವಿಷಯ ಎಂದು ಹೇಳಿದರು.

‘ಒಟ್ಟಾರೆ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲು ಮತ್ತು ಸರ್ಕಾರ ಈ ವಿಚಾರದಲ್ಲಿ ಆಸಕ್ತಿ ತಳೆದಿದೆಯೇ ಎಂಬುದರ ಪರಿಶೀಲನೆಗೆ ತಜ್ಞರ ತಂಡ ರೂಪಿಸುವಂತೆ ನಾವು ಸಲಹೆ ನೀಡುತ್ತಿದ್ದೇವೆ. ಮಾರುಕಟ್ಟೆ ನಿಯಂತ್ರಣ ಪ್ರಕ್ರಿಯೆ ಹಾಗೂ ಭಾರತದ ಹೂಡಿಕೆದಾರರು ಕಳೆದ ಎರಡು ವಾರಗಳಿಂದ ಸುರಕ್ಷಿತರಾಗಿದ್ದಾರೆಯೇ ಎಂಬುದನ್ನು ಖಾತರಿಪಡಸಿಕೊಳ್ಳುವಂತೆ ಸಾಲಿಸಿಟರ್ ಜನರಲ್ ಅವರಿಗೆ ನಾವು ಸೂಚಿಸಿದ್ದೇವೆ’ ಎಂದು ಅವರು ಹೇಳಿದರು.

ಮಾರುಕಟ್ಟೆ ನಿಯಂತ್ರಕ ಸೆಬಿ ಎಲ್ಲವನ್ನೂ ನಿರ್ವಹಿಸುತ್ತಿದೆ. ನಾವು ಅವರ ಚೌಕಟ್ಟನ್ನು ಮೀರುವುದಿಲ್ಲ. ನಾವು ಮಾತುಕತೆ ನಡೆಸುತ್ತೇವಷ್ಟೇ ಎಂಬುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ ಎಂದು ಚಂದ್ರಚೂಡ್ ಹೇಳಿದರು.

ಇದನ್ನೂ ಓದಿ: Adani Row: ಹಿಂಡನ್​ಬರ್ಗ್ ವಿರುದ್ಧ ಅಮೆರಿಕದಲ್ಲಿ ಕಾನೂನು ಹೋರಾಟಕ್ಕೆ ಅಣಿಯಾದ ಅದಾನಿ; ಕಾನೂನು ಸಲಹಾ ಸಂಸ್ಥೆಗೆ ಮೊರೆ

ಅದಾನಿ ಸಮೂಹವು ಷೇರು ಮೌಲ್ಯ ತಿರುಚುವುದರ ಜತೆಗೆ ಅಕ್ರಮ ಚಟುವಟಿಕೆಯಲ್ಲಿ ತೊಡಗಿತ್ತು ಎಂದು ಅಮೆರಿಕದ ಶಾರ್ಟ್​ ಸೆಲ್ಲರ್ ಸಂಸ್ಥೆ ಹಿಂಡನ್​ಬರ್ಗ್ ರಿಸರ್ಚ್​ ಎರಡು ವಾರಗಳ ಹಿಂದೆ ಆರೋಪಿಸಿತ್ತು. ಪರಿಣಾಮವಾಗಿ ಅದಾನಿ ಸಮೂಹದ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿತ್ತು. ವಿಶ್ವದ ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಅದಾನಿ ಕೇವಲ ಒಂದು ವಾರದ ಅವಧಿಯಲ್ಲಿ 20ನೇ ಸ್ಥಾನಕ್ಕಿಂತಲೂ ಹೆಚ್ಚು ಕುಸಿದಿದ್ದರು. ಇದಾಗಿ ಕೆಲವು ದಿನಗಳ ನಂತರ ಕಂಪನಿ ಷೇರು ಮೌಲ್ಯ ಮತ್ತೆ ವೃದ್ಧಿಯಾಗತೊಡಗಿತ್ತು. ಈ ವಾರದ ಆರಂಭದಲ್ಲಿ ಅಪ್ಪರ್​​ ಸರ್ಕ್ಯೂಟ್​​ನಲ್ಲಿದ್ದ ಷೇರು ಮೌಲ್ಯ ಈಗ ಮತ್ತೆ ಕುಸಿಯತೊಡಗಿದೆ. ಅದಾನಿ ಸಮೂಹದ ಕಂಪನಿಗಳ ಫ್ರೀ ಫ್ಲೋಟ್ ಸ್ಟೇಟಸ್ ಪರಿಶೀಲನೆ ನಡೆಸುವುದಾಗಿ ಮಾರ್ಗನ್‌ ಸ್ಟ್ಯಾನ್ಲಿ (MSCI) ಹೇಳಿಕೆ ನೀಡಿದ್ದೇ ಇದಕ್ಕೆ ಕಾರಣವಾಗಿದೆ.

ಈ ಮಧ್ಯೆ, ಹಿಂಡನ್​ಬರ್ಗ್ ರಿಸರ್ಚ್ ವಿರುದ್ಧ ಅಮೆರಿಕದಲ್ಲಿ ಕಾನೂನು ಹೋರಾಟ ನಡೆಸಲು ಉದ್ಯಮಿ ಗೌತಮ್ ಅದಾನಿ ಮುಂದಾಗಿದ್ದಾರೆ. ಅದಕ್ಕಾಗಿ ಅಮೆರಿಕದ ದುಬಾರಿ ಕಾನೂನು ಸಲಹಾ ಸಂಸ್ಥೆ ವಾಚೆಲ್ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!