Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon: ಆಹಾರ ವಿತರಣೆ ಉದ್ಯಮವನ್ನೂ ಸ್ಥಗಿತಗೊಳಿಸಲಿದೆ ಅಮೆಜಾನ್

2020ರ ಮೇ ತಿಂಗಳಲ್ಲಿ, ಕೋವಿಡ್ ಲಾಕ್​​ಡೌನ್ ಸಂದರ್ಭದಲ್ಲಿ ಅಮೆಜಾನ್ ಇಂಡಿಯಾ ಆಹಾರ ವಿತರಣೆ ಉದ್ಯಮವನ್ನು ಆರಂಭಿಸಿತ್ತು.

Amazon: ಆಹಾರ ವಿತರಣೆ ಉದ್ಯಮವನ್ನೂ ಸ್ಥಗಿತಗೊಳಿಸಲಿದೆ ಅಮೆಜಾನ್
ಅಮೆಜಾನ್Image Credit source: PTI
Follow us
TV9 Web
| Updated By: Ganapathi Sharma

Updated on:Nov 26, 2022 | 11:24 AM

ನವದೆಹಲಿ: ಎಜುಟೆಕ್ ತಾಣ ಅಮೆಜಾನ್​ ಅಕಾಡೆಮಿಯನ್ನು (Amazon Academy) ಹಂತ ಹಂತವಾಗಿ ಮುಚ್ಚುವುದಾಗಿ ತಿಳಿಸಿದ ಮರುದಿನವೇ,ಆಹಾರ ವಿತರಣೆ (Food Delivery) ಉದ್ಯಮವನ್ನೂ ಸ್ಥಗಿತಗೊಳಿಸುವುದಾಗಿ ಅಮೆಜಾನ್ ಇಂಡಿಯಾ (Amazon India) ತಿಳಿಸಿದೆ ಎಂದು ವರದಿಯಾಗಿದೆ. ಆಹಾರ ವಿತರಣೆ ಸೇವೆಯನ್ನು ಡಿಸೆಂಬರ್ 29ರಿಂದ ನಿಲ್ಲಿಸುವುದಾಗಿ ಪಾಲುದಾರರಿಗೆ ಅಮೆಜಾನ್ ತಿಳಿಸಿದೆ ಎಂದು ‘ಮನಿ ಕಂಟ್ರೋಲ್’ ವರದಿ ಮಾಡಿದೆ. 2020ರ ಮೇ ತಿಂಗಳಲ್ಲಿ, ಕೋವಿಡ್ ಲಾಕ್​​ಡೌನ್ ಸಂದರ್ಭದಲ್ಲಿ ಅಮೆಜಾನ್ ಇಂಡಿಯಾ ಆಹಾರ ವಿತರಣೆ ಉದ್ಯಮವನ್ನು ಆರಂಭಿಸಿತ್ತು.

ಹೀಗಾಗಿ ಡಿಸೆಂಬರ್ 29ರ ನಂತರ ‘ಅಮೆಜಾನ್ ಫುಡ್​’ ಮೂಲಕ ಗ್ರಾಹಕರು ಆಹಾರವನ್ನು ತರಿಸಿಕೊಳ್ಳಲು ಸಾಧ್ಯವಾಗದು. ಅಲ್ಲಿಯವರೆಗೂ ನೀವು ಆರ್ಡರ್​ಗಳನ್ನು ಸ್ವೀಕರಿಸಬಹುದು. ಕೊನೆಯ ದಿನಾಂಕದ ವರೆಗೂ ಗ್ರಾಹಕರಿಗೆ ಸೇವೆ ನೀಡುತ್ತೇವೆ ಎಂದು ರೆಸ್ಟೋರೆಂಟ್ ಮಾಲೀಕರಿಗೆ ಅಮೆಜಾನ್ ಫುಡ್ ಕಳುಹಿಸಿದ ಇ-ಮೇಲ್ ಸಂದೇಶದಿಂದ ತಿಳಿದುಬಂದಿದೆ ಎಂದು ವರದಿ ಉಲ್ಲೇಖಿಸಿದೆ.

ಬಾಕಿ ಇರುವ ಎಲ್ಲಾ ಪಾವತಿಗಳು ಮತ್ತು ಇತರ ಒಪ್ಪಂದದ ಬಾಧ್ಯತೆಗಳನ್ನು ಪೂರೈಸುವುದಾಗಿ ರೆಸ್ಟೋರೆಂಟ್ ಪಾಲುದಾರರಿಗೆ ಅಮೆಜಾನ್ ಭರವಸೆ ನೀಡಿದೆ ಎಂದೂ ವರದಿ ತಿಳಿಸಿದೆ.

ಆರ್ಥಿಕ ಸಂಕಷ್ಟದ ಕಾರಣ ಎಜುಟೆಕ್ ತಾಣ ಅಮೆಜಾನ್​ ಅಕಾಡೆಮಿಯನ್ನು ಹಂತ ಹಂತವಾಗಿ ಮುಚ್ಚಲಾಗುವುದು ಎಂದು ಅಮೆಜಾನ್ ಹೇಳಿರುವುದಾಗಿ ಶುಕ್ರವಾರ ವರದಿಯಾಗಿತ್ತು. ಇದರೊಂದಿಗೆ ಭಾರತದಲ್ಲಿ ಕಾರ್ಯಾರಂಭ ಮಾಡಿದ ಎರಡು ವರ್ಷಗಳ ಒಳಗಾಗಿ ತಾಣ ಸ್ಥಗಿತಗೊಂಡಂತಾಗಲಿದೆ. ಅಮೆಜಾನ್ ಅಕಾಡೆಮಿಯನ್ನು ಕೂಡ ಕೋವಿಡ್ ಎರಡನೇ ಲಾಕ್​ಡೌನ್ ಸಂದರ್ಭದಲ್ಲಿ ಆರಂಭಿಸಲಾಗಿತ್ತು. ಜಾಗತಿಕ ಮಟ್ಟದಲ್ಲಿ ಸುಮಾರು 10 ಸಾವಿರ ನೌಕರರನ್ನು ಕೆಲಸದಿಂದ ವಜಾಗೊಳಿಸಲು ಚಿಂತನೆ ನಡೆಸಿರುವುದಾಗಿ ಅಮೆಜಾನ್ ಕಂಪನಿ ಇತ್ತೀಚೆಗೆ ಹೇಳಿತ್ತು. ಇದರ ಬೆನ್ನಲ್ಲೇ ಭಾರತದಲ್ಲಿ ಹಲವು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ಬೇರ್ಪಡಿಕೆ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ವರದಿಯಾಗಿತ್ತು. ಕಾರ್ಮಿಕ ಕಾನೂನನ್ನು ಕಂಪನಿ ಉಲ್ಲಂಘಿಸುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ಇದಕ್ಕಾಗಿ ಕಾರ್ಮಿಕ ಸಚಿವಾಲಯದಿಂದ ಕಂಪನಿಗೆ ಸಮನ್ಸ್ ನೀಡಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sat, 26 November 22

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ