AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon: ಆಹಾರ ವಿತರಣೆ ಉದ್ಯಮವನ್ನೂ ಸ್ಥಗಿತಗೊಳಿಸಲಿದೆ ಅಮೆಜಾನ್

2020ರ ಮೇ ತಿಂಗಳಲ್ಲಿ, ಕೋವಿಡ್ ಲಾಕ್​​ಡೌನ್ ಸಂದರ್ಭದಲ್ಲಿ ಅಮೆಜಾನ್ ಇಂಡಿಯಾ ಆಹಾರ ವಿತರಣೆ ಉದ್ಯಮವನ್ನು ಆರಂಭಿಸಿತ್ತು.

Amazon: ಆಹಾರ ವಿತರಣೆ ಉದ್ಯಮವನ್ನೂ ಸ್ಥಗಿತಗೊಳಿಸಲಿದೆ ಅಮೆಜಾನ್
ಅಮೆಜಾನ್Image Credit source: PTI
TV9 Web
| Edited By: |

Updated on:Nov 26, 2022 | 11:24 AM

Share

ನವದೆಹಲಿ: ಎಜುಟೆಕ್ ತಾಣ ಅಮೆಜಾನ್​ ಅಕಾಡೆಮಿಯನ್ನು (Amazon Academy) ಹಂತ ಹಂತವಾಗಿ ಮುಚ್ಚುವುದಾಗಿ ತಿಳಿಸಿದ ಮರುದಿನವೇ,ಆಹಾರ ವಿತರಣೆ (Food Delivery) ಉದ್ಯಮವನ್ನೂ ಸ್ಥಗಿತಗೊಳಿಸುವುದಾಗಿ ಅಮೆಜಾನ್ ಇಂಡಿಯಾ (Amazon India) ತಿಳಿಸಿದೆ ಎಂದು ವರದಿಯಾಗಿದೆ. ಆಹಾರ ವಿತರಣೆ ಸೇವೆಯನ್ನು ಡಿಸೆಂಬರ್ 29ರಿಂದ ನಿಲ್ಲಿಸುವುದಾಗಿ ಪಾಲುದಾರರಿಗೆ ಅಮೆಜಾನ್ ತಿಳಿಸಿದೆ ಎಂದು ‘ಮನಿ ಕಂಟ್ರೋಲ್’ ವರದಿ ಮಾಡಿದೆ. 2020ರ ಮೇ ತಿಂಗಳಲ್ಲಿ, ಕೋವಿಡ್ ಲಾಕ್​​ಡೌನ್ ಸಂದರ್ಭದಲ್ಲಿ ಅಮೆಜಾನ್ ಇಂಡಿಯಾ ಆಹಾರ ವಿತರಣೆ ಉದ್ಯಮವನ್ನು ಆರಂಭಿಸಿತ್ತು.

ಹೀಗಾಗಿ ಡಿಸೆಂಬರ್ 29ರ ನಂತರ ‘ಅಮೆಜಾನ್ ಫುಡ್​’ ಮೂಲಕ ಗ್ರಾಹಕರು ಆಹಾರವನ್ನು ತರಿಸಿಕೊಳ್ಳಲು ಸಾಧ್ಯವಾಗದು. ಅಲ್ಲಿಯವರೆಗೂ ನೀವು ಆರ್ಡರ್​ಗಳನ್ನು ಸ್ವೀಕರಿಸಬಹುದು. ಕೊನೆಯ ದಿನಾಂಕದ ವರೆಗೂ ಗ್ರಾಹಕರಿಗೆ ಸೇವೆ ನೀಡುತ್ತೇವೆ ಎಂದು ರೆಸ್ಟೋರೆಂಟ್ ಮಾಲೀಕರಿಗೆ ಅಮೆಜಾನ್ ಫುಡ್ ಕಳುಹಿಸಿದ ಇ-ಮೇಲ್ ಸಂದೇಶದಿಂದ ತಿಳಿದುಬಂದಿದೆ ಎಂದು ವರದಿ ಉಲ್ಲೇಖಿಸಿದೆ.

ಬಾಕಿ ಇರುವ ಎಲ್ಲಾ ಪಾವತಿಗಳು ಮತ್ತು ಇತರ ಒಪ್ಪಂದದ ಬಾಧ್ಯತೆಗಳನ್ನು ಪೂರೈಸುವುದಾಗಿ ರೆಸ್ಟೋರೆಂಟ್ ಪಾಲುದಾರರಿಗೆ ಅಮೆಜಾನ್ ಭರವಸೆ ನೀಡಿದೆ ಎಂದೂ ವರದಿ ತಿಳಿಸಿದೆ.

ಆರ್ಥಿಕ ಸಂಕಷ್ಟದ ಕಾರಣ ಎಜುಟೆಕ್ ತಾಣ ಅಮೆಜಾನ್​ ಅಕಾಡೆಮಿಯನ್ನು ಹಂತ ಹಂತವಾಗಿ ಮುಚ್ಚಲಾಗುವುದು ಎಂದು ಅಮೆಜಾನ್ ಹೇಳಿರುವುದಾಗಿ ಶುಕ್ರವಾರ ವರದಿಯಾಗಿತ್ತು. ಇದರೊಂದಿಗೆ ಭಾರತದಲ್ಲಿ ಕಾರ್ಯಾರಂಭ ಮಾಡಿದ ಎರಡು ವರ್ಷಗಳ ಒಳಗಾಗಿ ತಾಣ ಸ್ಥಗಿತಗೊಂಡಂತಾಗಲಿದೆ. ಅಮೆಜಾನ್ ಅಕಾಡೆಮಿಯನ್ನು ಕೂಡ ಕೋವಿಡ್ ಎರಡನೇ ಲಾಕ್​ಡೌನ್ ಸಂದರ್ಭದಲ್ಲಿ ಆರಂಭಿಸಲಾಗಿತ್ತು. ಜಾಗತಿಕ ಮಟ್ಟದಲ್ಲಿ ಸುಮಾರು 10 ಸಾವಿರ ನೌಕರರನ್ನು ಕೆಲಸದಿಂದ ವಜಾಗೊಳಿಸಲು ಚಿಂತನೆ ನಡೆಸಿರುವುದಾಗಿ ಅಮೆಜಾನ್ ಕಂಪನಿ ಇತ್ತೀಚೆಗೆ ಹೇಳಿತ್ತು. ಇದರ ಬೆನ್ನಲ್ಲೇ ಭಾರತದಲ್ಲಿ ಹಲವು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ಬೇರ್ಪಡಿಕೆ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ವರದಿಯಾಗಿತ್ತು. ಕಾರ್ಮಿಕ ಕಾನೂನನ್ನು ಕಂಪನಿ ಉಲ್ಲಂಘಿಸುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ಇದಕ್ಕಾಗಿ ಕಾರ್ಮಿಕ ಸಚಿವಾಲಯದಿಂದ ಕಂಪನಿಗೆ ಸಮನ್ಸ್ ನೀಡಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sat, 26 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ