Amazon: ಆಹಾರ ವಿತರಣೆ ಉದ್ಯಮವನ್ನೂ ಸ್ಥಗಿತಗೊಳಿಸಲಿದೆ ಅಮೆಜಾನ್

2020ರ ಮೇ ತಿಂಗಳಲ್ಲಿ, ಕೋವಿಡ್ ಲಾಕ್​​ಡೌನ್ ಸಂದರ್ಭದಲ್ಲಿ ಅಮೆಜಾನ್ ಇಂಡಿಯಾ ಆಹಾರ ವಿತರಣೆ ಉದ್ಯಮವನ್ನು ಆರಂಭಿಸಿತ್ತು.

Amazon: ಆಹಾರ ವಿತರಣೆ ಉದ್ಯಮವನ್ನೂ ಸ್ಥಗಿತಗೊಳಿಸಲಿದೆ ಅಮೆಜಾನ್
ಅಮೆಜಾನ್Image Credit source: PTI
Follow us
| Updated By: ಗಣಪತಿ ಶರ್ಮ

Updated on:Nov 26, 2022 | 11:24 AM

ನವದೆಹಲಿ: ಎಜುಟೆಕ್ ತಾಣ ಅಮೆಜಾನ್​ ಅಕಾಡೆಮಿಯನ್ನು (Amazon Academy) ಹಂತ ಹಂತವಾಗಿ ಮುಚ್ಚುವುದಾಗಿ ತಿಳಿಸಿದ ಮರುದಿನವೇ,ಆಹಾರ ವಿತರಣೆ (Food Delivery) ಉದ್ಯಮವನ್ನೂ ಸ್ಥಗಿತಗೊಳಿಸುವುದಾಗಿ ಅಮೆಜಾನ್ ಇಂಡಿಯಾ (Amazon India) ತಿಳಿಸಿದೆ ಎಂದು ವರದಿಯಾಗಿದೆ. ಆಹಾರ ವಿತರಣೆ ಸೇವೆಯನ್ನು ಡಿಸೆಂಬರ್ 29ರಿಂದ ನಿಲ್ಲಿಸುವುದಾಗಿ ಪಾಲುದಾರರಿಗೆ ಅಮೆಜಾನ್ ತಿಳಿಸಿದೆ ಎಂದು ‘ಮನಿ ಕಂಟ್ರೋಲ್’ ವರದಿ ಮಾಡಿದೆ. 2020ರ ಮೇ ತಿಂಗಳಲ್ಲಿ, ಕೋವಿಡ್ ಲಾಕ್​​ಡೌನ್ ಸಂದರ್ಭದಲ್ಲಿ ಅಮೆಜಾನ್ ಇಂಡಿಯಾ ಆಹಾರ ವಿತರಣೆ ಉದ್ಯಮವನ್ನು ಆರಂಭಿಸಿತ್ತು.

ಹೀಗಾಗಿ ಡಿಸೆಂಬರ್ 29ರ ನಂತರ ‘ಅಮೆಜಾನ್ ಫುಡ್​’ ಮೂಲಕ ಗ್ರಾಹಕರು ಆಹಾರವನ್ನು ತರಿಸಿಕೊಳ್ಳಲು ಸಾಧ್ಯವಾಗದು. ಅಲ್ಲಿಯವರೆಗೂ ನೀವು ಆರ್ಡರ್​ಗಳನ್ನು ಸ್ವೀಕರಿಸಬಹುದು. ಕೊನೆಯ ದಿನಾಂಕದ ವರೆಗೂ ಗ್ರಾಹಕರಿಗೆ ಸೇವೆ ನೀಡುತ್ತೇವೆ ಎಂದು ರೆಸ್ಟೋರೆಂಟ್ ಮಾಲೀಕರಿಗೆ ಅಮೆಜಾನ್ ಫುಡ್ ಕಳುಹಿಸಿದ ಇ-ಮೇಲ್ ಸಂದೇಶದಿಂದ ತಿಳಿದುಬಂದಿದೆ ಎಂದು ವರದಿ ಉಲ್ಲೇಖಿಸಿದೆ.

ಬಾಕಿ ಇರುವ ಎಲ್ಲಾ ಪಾವತಿಗಳು ಮತ್ತು ಇತರ ಒಪ್ಪಂದದ ಬಾಧ್ಯತೆಗಳನ್ನು ಪೂರೈಸುವುದಾಗಿ ರೆಸ್ಟೋರೆಂಟ್ ಪಾಲುದಾರರಿಗೆ ಅಮೆಜಾನ್ ಭರವಸೆ ನೀಡಿದೆ ಎಂದೂ ವರದಿ ತಿಳಿಸಿದೆ.

ಆರ್ಥಿಕ ಸಂಕಷ್ಟದ ಕಾರಣ ಎಜುಟೆಕ್ ತಾಣ ಅಮೆಜಾನ್​ ಅಕಾಡೆಮಿಯನ್ನು ಹಂತ ಹಂತವಾಗಿ ಮುಚ್ಚಲಾಗುವುದು ಎಂದು ಅಮೆಜಾನ್ ಹೇಳಿರುವುದಾಗಿ ಶುಕ್ರವಾರ ವರದಿಯಾಗಿತ್ತು. ಇದರೊಂದಿಗೆ ಭಾರತದಲ್ಲಿ ಕಾರ್ಯಾರಂಭ ಮಾಡಿದ ಎರಡು ವರ್ಷಗಳ ಒಳಗಾಗಿ ತಾಣ ಸ್ಥಗಿತಗೊಂಡಂತಾಗಲಿದೆ. ಅಮೆಜಾನ್ ಅಕಾಡೆಮಿಯನ್ನು ಕೂಡ ಕೋವಿಡ್ ಎರಡನೇ ಲಾಕ್​ಡೌನ್ ಸಂದರ್ಭದಲ್ಲಿ ಆರಂಭಿಸಲಾಗಿತ್ತು. ಜಾಗತಿಕ ಮಟ್ಟದಲ್ಲಿ ಸುಮಾರು 10 ಸಾವಿರ ನೌಕರರನ್ನು ಕೆಲಸದಿಂದ ವಜಾಗೊಳಿಸಲು ಚಿಂತನೆ ನಡೆಸಿರುವುದಾಗಿ ಅಮೆಜಾನ್ ಕಂಪನಿ ಇತ್ತೀಚೆಗೆ ಹೇಳಿತ್ತು. ಇದರ ಬೆನ್ನಲ್ಲೇ ಭಾರತದಲ್ಲಿ ಹಲವು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ಬೇರ್ಪಡಿಕೆ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ವರದಿಯಾಗಿತ್ತು. ಕಾರ್ಮಿಕ ಕಾನೂನನ್ನು ಕಂಪನಿ ಉಲ್ಲಂಘಿಸುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ಇದಕ್ಕಾಗಿ ಕಾರ್ಮಿಕ ಸಚಿವಾಲಯದಿಂದ ಕಂಪನಿಗೆ ಸಮನ್ಸ್ ನೀಡಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sat, 26 November 22

ತಾಜಾ ಸುದ್ದಿ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು