ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

IOCL increases the price of industrial diesel by 25pc: ಇಂಡಿಯನ್ ಆಯಿಲ್ ಕಾರ್ಪೊರೇಶನ್ ತನ್ನ ಇಂಡಸ್ಟ್ರಿಯಲ್ ಡೀಸಲ್ ಬೆಲೆಯನ್ನು 87.57 ರೂನಿಂದ 109.59 ರೂಗೆ ಏರಿಸಿದೆ. ಪ್ರತೀ ಲೀಟರ್ ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ ಆಗಿದೆ. ಐಒಸಿಎಲ್, ಬಿಪಿಸಿಎಲ್, ಹೆಚ್​ಪಿಸಿಎಲ್ ಸಂಸ್ಥೆಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು 2.30 ರೂನಷ್ಟು ಏರಿಕೆ ಮಾಡಿವೆ.

ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?
ಪೆಟ್ರೋಲ್ ಪಂಪ್

Updated on: Mar 21, 2026 | 11:41 PM

ನವದೆಹಲಿ, ಮಾರ್ಚ್ 20: ಸರ್ಕಾರಿ ಸ್ವಾಮ್ಯದ ಮೂರು ತೈಲ ಮಾರುಕಟ್ಟೆ ಕಂಪನಿಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಿರುವ ಬೆನ್ನಲ್ಲೇ ಇಂಡಿಯನ್ ಆಯಿಲ್ ಸಂಸ್ಥೆಯು ಕೈಗಾರಿಕಾ ಡೀಸಲ್ ಬೆಲೆಯನ್ನು (Industrial Diesel prices) ಹೆಚ್ಚಿಸಿದೆ. ಒಂದು ಲೀಟರ್​ಗೆ 87.57 ರೂ ಇದ್ದ ಡೀಸಲ್ ಬೆಲೆ 109.59 ರೂಗೆ ಏರಿಸಲಾಗಿದೆ. ಬೆಲೆಯಲ್ಲಿ ಬರೋಬ್ಬರಿ ಶೇ. 25ರಷ್ಟು ಹೆಚ್ಚಳ ಆಗಿದೆ.

ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಮತ್ತು ಅನಿಲಗಳ ಹಡಗುಗಳ ಸಾಗಣೆಗೆ ನಿರ್ಬಂಧ ಇರುವುದರಿಂದ ಜಾಗತಿಕವಾಗಿ ಇವುಗಳ ಸರಬರಾಜು ಕುಂಠಿತಗೊಂಡಿದೆ. ಭಾರತಕ್ಕೂ ಇವುಗಳ ಕೊರತೆ ಕಾಡುತ್ತಿದೆ. ಜನಸಾಮಾನ್ಯರಿಗೆ ಬಾಧೆಯಾಗುವುದನ್ನು ತಪ್ಪಿಸಲು ಸರ್ಕಾರ ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡದಂತೆ ಎಚ್ಚರ ವಹಿಸುತ್ತಿದೆ.

ಇದನ್ನೂ ಓದಿ: ಜೊಮಾಟೊದಲ್ಲಿ ಫುಡ್ ಆರ್ಡರ್ ಮತ್ತಷ್ಟು ದುಬಾರಿ; ಪ್ಲಾಟ್​ಫಾರ್ಮ್ ಶುಲ್ಕ ಶೇ 19ರಷ್ಟು ಏರಿಕೆ

ಈಗ ಇರಾನ್ ಯುದ್ಧದ ಅವಧಿ ನಿರೀಕ್ಷೆಮೀರಿ ಹಿಗ್ಗುತ್ತಿರುವುದರಿಂದ ತೈಲ ಪೂರೈಕೆ ಮತ್ತಷ್ಟು ಕಠಿಣಗೊಂಡಿದೆ. ಈ ಕಾರಣಕ್ಕೆ ಸರ್ಕಾರಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಬಹುದು. ಹೀಗಾಗಿ, ಪ್ರೀಮಿಯಮ್ ಪೆಟ್ರೋಲ್, ಔದ್ಯಮಿಕ ಡೀಸಲ್ ಬೆಲೆಗಳನ್ನು ಸದ್ಯಕ್ಕೆ ಹೆಚ್ಚಿಸಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಮಾಮೂಲಿಯ ಪೆಟ್ರೋಲ್, ಡೀಸಲ್ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇದ್ದೇ ಇದೆ.

ಈಗ ಕೈಗಾರಿಕಾ ಡೀಸಲ್ ಅನ್ನು ವಿವಿಧ ಕೈಗಾರಿಕೆಗಳು ಬಳಸುತ್ತವೆ. ವಿದ್ಯುತ್ ಉತ್ಪಾದನೆ, ಮ್ಯಾನುಫ್ಯಾಕ್ಚರಿಂಗ್ ಇತ್ಯಾದಿ ಕ್ಷೇತ್ರದ ಕಂಪನಿಗಳು ಈ ಡೀಸಲ್ ಅನ್ನು ಬಳಸುತ್ತವೆ. ಈಗ ಭಾರೀ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿರುವುದರಿಂದ ಕೈಗಾರಿಕಾ ಉತ್ಪಾದನಾ ವೆಚ್ಚ ಮತ್ತು ಸಾರಿಗೆ ವೆಚ್ಚ ಹೆಚ್ಚಲಿದೆ.

ಇದನ್ನೂ ಓದಿ: ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ಪ್ರೀಮಿಯಮ್ ಪೆಟ್ರೋಲ್ ಬೆಲೆ ಏರಿಕೆ

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳ ಪ್ರೀಮಿಯಮ್ ಪೆಟ್ರೋಲ್ ಬೆಲೆ ಲೀಟರ್​ಗೆ 2.05 ರೂನಿಂದ 2.30 ರೂವರೆಗೆ ಏರಿಕೆ ಮಾಡಲಾಗಿದೆ. ಆದರೆ, ಮಾಮೂಲಿಯ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:07 pm, Fri, 20 March 26

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us