AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Layoffs: ಟ್ವಿಟರ್ ಉದ್ಯೋಗಿಗಳ ವಜಾ ಮುಗಿದಿದೆ, ಮತ್ತೆ ನೇಮಕಾತಿ ಮಾಡುತ್ತೇವೆ ಎಂದ ಮಸ್ಕ್

ಟ್ವಟರ್ ಉದ್ಯೋಗಿಗಳ ಜತೆ ಮಸ್ಕ್ ಸಭೆ ನಡೆಸಿದ್ದಾರೆ. ಸಾಫ್ಟ್​ವೇರ್ ಕ್ಷೇತ್ರದಲ್ಲಿ ಉತ್ತಮ ಪರಿಣತಿ ಹೊಂದಿರುವವರನ್ನು ಆದ್ಯತೆ ಮೇಲೆ ಕಂಪನಿಗೆ ನೇಮಕಾತಿ ಮಾಡಿಕೊಳ್ಳಲು ಬಯಸುತ್ತಿರುವುದಾಗಿ ಮಸ್ಕ್ ಹೇಳಿದ್ದಾರೆ ಎಂದೂ ವರದಿಯಾಗಿದೆ.

Twitter Layoffs: ಟ್ವಿಟರ್ ಉದ್ಯೋಗಿಗಳ ವಜಾ ಮುಗಿದಿದೆ, ಮತ್ತೆ ನೇಮಕಾತಿ ಮಾಡುತ್ತೇವೆ ಎಂದ ಮಸ್ಕ್
ಎಲಾನ್ ಮಸ್ಕ್​
TV9 Web
| Edited By: |

Updated on:Nov 22, 2022 | 4:32 PM

Share

ನವದೆಹಲಿ: ಶೇಕಡಾ 75ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿರುವ (Layoffs) ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ (Twitter) ಇದೀಗ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದೆ. ಕಂಪನಿಯ ಉದ್ಯೋಗ ಕಡಿತ ಕೊನೆಯಾಗಿದೆ. ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದೇವೆ ಎಂಬುದಾಗಿ ಕಂಪನಿಯ ಹೊಸ ಮಾಲೀಕ ಎಲಾನ್ ಮಸ್ಕ್ (Elon Musk) ಹೇಳಿರುವುದಾಗಿ ವರದಿಯಾಗಿದೆ. ಟ್ವಿಟರ್​ ಅನ್ನು ಉದ್ಯಮಿ ಎಲಾನ್ ಮಸ್ಕ್ ಅಕ್ಟೋಬರ್​ನಲ್ಲಿ ಸಂಪೂರ್ಣವಾಗಿ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು. 44 ಶತಕೋಟಿ ಡಾಲರ್​ಗೆ ಟ್ವಿಟರ್ ಖರೀದಿಸಿದ್ದ ಅವರು, ಅದರ ಬೆನ್ನಲ್ಲೇ ಸಿಇಒ ಪರಾಗ್ ಅಗರ್​ವಾಲ್, ಸಿಎಫ್​ಒ ನೆಡ್ ಸೆಗಲ್ ಹಾಗೂ ನೀತಿ ನಿರೂಪಣೆ-ವಿಶ್ವಾಸಾರ್ಹತೆ ಮತ್ತು ಸುರಕ್ಷಾ ವಿಭಾಗದ ಮುಖ್ಯಸ್ಥರಾದ ವಿಜಯಾ ಗಡ್ಡೆ ಅವರನ್ನು ವಜಾಗೊಳಿಸಿದ್ದರು. ಬಳಿಕ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ್ದರು. ನಂತರ ಮಸ್ಕ್ ಅವರ ಕಠಿಣ ನಿಯಮಗಳನ್ನು ವಿರೋಧಿಸಿ ಅನೇಕ ಉದ್ಯೋಗಿಗಳು ರಾಜೀನಾಮೆ ನೀಡಿದ್ದರು. ಪರಿಣಾಮವಾಗಿ 2022ರ ಸೆಪ್ಟೆಂಬರ್​ನಲ್ಲಿ 7,500 ಇದ್ದ ಟ್ವಿಟರ್ ಉದ್ಯೋಗಿಗಳ ಸಂಖ್ಯೆ ಇದೀಗ 2,700ಕ್ಕೆ ಇಳಿಕೆಯಾಗಿದೆ. ಸೋಮವಾರ ಕೂಡ ಮಾರಾಟ ವಿಭಾಗದಿಂದ ಕೆಲವು ಉದ್ಯೋಗಿಗಳನ್ನು ಮಸ್ಕ್ ವಜಾಗೊಳಿಸಿದ್ದರು.

ಆದಾಗ್ಯೂ, ಎಂಜಿನಿಯರಿಂಗ್ ಮತ್ತು ಮಾರಾಟ ವಿಭಾಗಕ್ಕೆ ನೇಮಕಾತಿಗೆ ಶಿಫಾರಸು ಮಾಡುವಂತೆ ಉದ್ಯೋಗಿಗಳಿಗೆ ತಿಳಿಸಲಾಗಿತ್ತು. ಆದರೆ, ಎಂಜಿನಿಯರಿಂಗ್ ಮತ್ತು ಮಾರಾಟ ವಿಭಾಗಕ್ಕೆ ಯಾವ ರೀತಿಯ ಉದ್ಯೋಗಿಗಳು ಬೇಕು ಎಂಬುದರ ಬಗ್ಗೆ ಕಂಪನಿಯಲ್ಲಿ ಸ್ಪಷ್ಟತೆ ಇರಲಿಲ್ಲ. ಯಾಕೆಂದರೆ ಕಂಪನಿಯ ವೆಬ್​ಸೈಟ್​ನಲ್ಲಿ ಈ ಹುದ್ದೆಗಳು ಖಾಲಿ ಇಲ್ಲ ಎಂದು ನಮೂದಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಈ ಮಧ್ಯೆ, ಸೋಮವಾರ ಟ್ವಟರ್ ಉದ್ಯೋಗಿಗಳ ಜತೆ ಮಸ್ಕ್ ಸಭೆ ನಡೆಸಿದ್ದಾರೆ. ಸಾಫ್ಟ್​ವೇರ್ ಕ್ಷೇತ್ರದಲ್ಲಿ ಉತ್ತಮ ಪರಿಣತಿ ಹೊಂದಿರುವವರನ್ನು ಆದ್ಯತೆ ಮೇಲೆ ಕಂಪನಿಗೆ ನೇಮಕಾತಿ ಮಾಡಿಕೊಳ್ಳಲು ಬಯಸುತ್ತಿರುವುದಾಗಿ ಮಸ್ಕ್ ಹೇಳಿದ್ದಾರೆ ಎಂದೂ ವರದಿ ತಿಳಿಸಿದೆ.

ಇದನ್ನೂ ಓದಿ
Image
ಯುಪಿಐ ಮೂಲಕ ಎಟಿಎಂನಿಂದ ಹಣ ವಿತ್​ಡ್ರಾ ಮಾಡುವುದು ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ
Image
ಇ-ಕಾಮರ್ಸ್ ವೆಬ್​​ಸೈಟ್​ಗಳಲ್ಲಿ ನಕಲಿ ರಿವ್ಯೂಗೆ ಬೀಳಲಿದೆ ಕಡಿವಾಣ; ಶೀಘ್ರದಲ್ಲೇ ಬರಲಿದೆ ನಿಯಮ
Image
It Jobs; ಐಟಿ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಶೀಘ್ರದಲ್ಲೇ ನಿಮಗಿದೆ ಸಿಹಿ ಸುದ್ದಿ
Image
ಡಿಜಿಟಲ್ ಪಾವತಿಗೆ ಶುಲ್ಕ: ರಿಸರ್ವ್ ಬ್ಯಾಂಕ್ ಜೊತೆಗೆ ಮಾತುಕತೆ ಆರಂಭಿಸಿದ ಪೇಮೆಂಟ್ಸ್ ಕಾರ್ಪೊರೇಷನ್

ಪ್ರಧಾನ ಕಚೇರಿ ಸ್ಥಳಾಂತರ ಸದ್ಯಕ್ಕಿಲ್ಲ

ಟ್ವಿಟರ್​ನ ಪ್ರಧಾನ ಕಚೇರಿಯನ್ನು ತಕ್ಷಣವೇ ಟೆಕ್ಸಾಸ್​ಗೆ ಸ್ಥಳಾಂತರಿಸುವ ಯೋಜನೆ ಸದ್ಯಕ್ಕಿಲ್ಲ ಎಂದೂ ಮಸ್ಕ್ ತಿಳಿಸಿದ್ದಾರೆ. ಫೆಡೆರಲ್ ಟ್ಯಾಕ್ಸ್ ಕಡಿಮೆ ಇರುವುದರಿಂದ ಟೆಸ್ಲಾ ಕಂಪನಿಯ ಪ್ರಧಾನ ಕಚೇರಿಯನ್ನು ಮಸ್ಕ್ ಟೆಕ್ಸಾಸ್​ಗೆ ಸ್ಥಳಾಂತರಿಸಿದ್ದರು. ಕ್ಯಾಲಿಫೋರ್ನಿಯಾ ಮತ್ತು ಟೆಕ್ಸಾಸ್‌ನಲ್ಲಿ ಎರಡು ಪ್ರಧಾನ ಕಚೇರಿಗಳನ್ನು ಹೊಂದಿರುವುದು ಅರ್ಥಪೂರ್ಣವಾಗಿದೆ ಎಂದು ಅವರು ಹೇಳಿದ್ದರು. ಇದೇ ರೀತಿ ಟ್ವಿಟರ್​ ಪ್ರಧಾನ ಕಚೇರಿಯೂ ಸ್ಥಳಾಂತರಗೊಳ್ಳಬಹುದು ಎಂದು ಇತ್ತೀಚೆಗೆ ವರದಿಯಾಗಿತ್ತು. ಆದರೆ ಇದನ್ನು ಮಸ್ಕ್ ನಿರಾಕರಿಸಿದ್ದಾರೆ.

ವಜಾಗೊಂಡ ಕೆಲವರನ್ನು ಮತ್ತೆ ಬನ್ನಿ ಎಂದಿದ್ದ ಮಸ್ಕ್

ವಜಾಗೊಂಡ ಕೆಲವು ಸಿಬ್ಬಂದಿಯನ್ನು ಕಂಪನಿಗೆ ಮತ್ತೆ ಕೆಲಸಕ್ಕೆ ಬನ್ನಿ ಎಂದು ಮಸ್ಕ್ ಆಹ್ವಾನಿಸಿದ್ದಾರೆ. ಮರಳಿ ಕೆಲಸಕ್ಕೆ ಬರುವಂತೆ ಕೆಲವು ಉದ್ಯೋಗಿಗಳಿಗೆ ಕಂಪನಿಯಿಂದ ಸಂದೇಶ ಬಂದಿದೆ ಎಂದು ಎಂಬುದಾಗಿ ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ‘ಅಚಾತುರ್ಯದಿಂದಾಗಿ ವಜಾಗೊಳಿಸಲಾಗಿದೆ, ವಾಪಸ್ ಬನ್ನಿ’ ಎಂದು ಕೆಲವು ಮಂದಿ ಸಿಬ್ಬಂದಿಗೆ ಸಂದೇಶ ಕಳುಹಿಸಲಾಗಿದೆ. ಇನ್ನು ಕೆಲವು ಉದ್ಯೋಗಿಗಳ ಅನುಭವ ಮತ್ತು ಕೌಶಲ್ಯ ಮಸ್ಕ್ ಅವರ ಭವಿಷ್ಯದ ದೃಷ್ಟಿಕೋನ ಹಾಗೂ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯವಿದೆ ಎಂದು ಆಡಳಿತ ಭಾವಿಸಿದೆ. ಈ ಕಾರಣಕ್ಕೆ ವಾಪಸ್ ಕರೆಸಿಕೊಳ್ಳಲಾಗುತ್ತಿದೆ ಎಂದು ಸದ್ಯದ ಬೆಳವಣಿಗೆಗೆ ಸಂಬಂಧಿಸಿ ಮಾಹಿತಿಯುಳ್ಳ ಉನ್ನತ ಮೂಲಗಳು ತಿಳಿಸಿವೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿದ್ದವು.

Published On - 4:27 pm, Tue, 22 November 22

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್