AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karur Vysya Bank: ಕನಿಷ್ಠ ಬಡ್ಡಿ ದರ ಹೆಚ್ಚಿಸಿದ ಕರೂರ್ ವೈಶ್ಯ ಬ್ಯಾಂಕ್; ಇಎಂಐ ಇನ್ನು ದುಬಾರಿ

ಒಂದು ವರ್ಷ ಅವಧಿಯ ಎಂಸಿಎಲ್​ಆರ್ ಶೇಕಡಾ 8.80ರಿಂದ ಶೇಕಡಾ 9.05ಕ್ಕೆ ಹೆಚ್ಚಳಗೊಂಡಿದೆ. ಆರು ತಿಂಗಳ ಎಂಸಿಎಲ್​ಆರ್ ಶೇಕಡಾ 8.70 ರಿಂದ ಶೇಕಡಾ 8.95ಕ್ಕೆ ಏರಿಕೆಯಾಗಿದೆ.

Karur Vysya Bank: ಕನಿಷ್ಠ ಬಡ್ಡಿ ದರ ಹೆಚ್ಚಿಸಿದ ಕರೂರ್ ವೈಶ್ಯ ಬ್ಯಾಂಕ್; ಇಎಂಐ ಇನ್ನು ದುಬಾರಿ
ಕರೂರ್ ವೈಶ್ಯ ಬ್ಯಾಂಕ್ Image Credit source: PTI
TV9 Web
| Edited By: |

Updated on: Dec 07, 2022 | 12:27 PM

Share

ಬೆಂಗಳೂರು: ಕರೂರ್ ವೈಶ್ಯ ಬ್ಯಾಂಕ್ (Karur Vysya Bank) ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು (MCLR) 25 ಮೂಲಾಂಶದಷ್ಟು ಹೆಚ್ಚಳ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ (ಡಿಸೆಂಬರ್ 7) ಜಾರಿಗೆ ಬರಲಿದೆ. ಎಂಸಿಎಲ್​ಆರ್ ಹೆಚ್ಚಳದೊಂದಿಗೆ ಸಾಲ ಪಡೆದವರ ಇಎಂಐ ಮೊತ್ತ ಹೆಚ್ಚಳವಾಗಲಿದೆ. ಆರ್​ಬಿಐ ರೆಪೊ ದರ ಹೆಚ್ಚಳ (Repo Rate Hike) ಮಾಡಿದ ಬೆನ್ನಲ್ಲೇ ಕರೂರ್ ವೈಶ್ಯ ಬ್ಯಾಂಕ್ ಸಾಲದ ಮೇಲಿನ ಕನಿಷ್ಠ ಬಡ್ಡಿ ದರ ಹೆಚ್ಚಿಸಿದೆ.

ಒಂದು ವರ್ಷ ಅವಧಿಯ ಎಂಸಿಎಲ್​ಆರ್ ಶೇಕಡಾ 8.80ರಿಂದ ಶೇಕಡಾ 9.05ಕ್ಕೆ ಹೆಚ್ಚಳಗೊಂಡಿದೆ. ಆರು ತಿಂಗಳ ಎಂಸಿಎಲ್​ಆರ್ ಶೇಕಡಾ 8.70 ರಿಂದ ಶೇಕಡಾ 8.95ಕ್ಕೆ ಏರಿಕೆಯಾಗಿದೆ. ಮೂರು ತಿಂಗಳ ಎಂಸಿಎಲ್​ಆರ್ ಶೇಕಡಾ 8.35ರಿಂದ ಶೇಕಡಾ 8.60ಕ್ಕೆ ಹೆಚ್ಚಳವಾಗಿದೆ. ಒಂದು ತಿಂಗಳ ಎಂಸಿಎಲ್​ಆರ್ ಶೇಕಡಾ 8.20ರಿಂದ 8.45ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: RBI Repo Rate Hike: ಆರ್​ಬಿಐ ರೆಪೊ ದರ 35 ಮೂಲಾಂಶ ಹೆಚ್ಚಳ; ದುಬಾರಿಯಾಗಲಿದೆ ವಾಹನ, ಗೃಹ ಸಾಲದ ಇಎಂಐ

ಎಂಸಿಎಲ್​ಆರ್ ಎಂದರೆ ಸಾಲದ ಮೇಲೆ ಬ್ಯಾಂಕ್ ವಿಧಿಸುವ ಕನಿಷ್ಠ ಬಡ್ಡಿ ದರವಾಗಿದೆ. ಇದಕ್ಕಿಂತ ಕಡಿಮೆ ಬಡ್ಡಿಗೆ ಬ್ಯಾಂಕ್ ಸಾಲ ನೀಡುವುದಿಲ್ಲ.

ಸಾಲ ನೀಡಿಕೆ ಹೆಚ್ಚಳ

23ನೇ ಹಣಕಾಸು ವರ್ಷದಲ್ಲಿ ಕರೂರ್ ವೈಶ್ಯ ಬ್ಯಾಂಕ್​ನ ಸಾಲ ನೀಡಿಕೆ ಪ್ರಮಾಣದಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 15ರಷ್ಟು ಹೆಚ್ಚಳವಾಗಿದೆ. ಈ ವರ್ಷ ಬ್ಯಾಂಕ್ 7,996 ಕೋಟಿ ರೂ. ಸಾಲ ನೀಡಿದೆ.

ಸೋಮವಾರವಷ್ಟೇ ಮುಂಬೈ ಷೇರುಪೇಟೆಯಲ್ಲಿ ಕರೂರ್ ವೈಶ್ಯ ಬ್ಯಾಂಕ್ ಷೇರುಗಳು ಶೇಕಡಾ 0.40 ವೃದ್ಧಿ ದಾಖಲಿಸಿದ್ದವು. ಬ್ಯಾಂಕ್ ಷೇರಿನ ಬೆಲೆ 99.50 ರೂ. ಆಗಿತ್ತು. ಒಂದು ಹಂತದಲ್ಲಿ ಕರೂರ್ ವೈಶ್ಯ ಬ್ಯಾಂಕ್ ಷೇರು 100 ರೂ. ಗಡಿ ದಾಟಿತ್ತು.

ರೆಪೊ ದರ ಹೆಚ್ಚಳದ ಬೆನ್ನಲ್ಲೇ ಕ್ರಮ

ರೆಪೊ ದರವನ್ನು 35 ಮೂಲಾಂಶ ಹೆಚ್ಚಿಸಲಾಗಿದ್ದು, ಪರಿಷ್ಕೃತ ರೆಪೊ ದರ ಶೇಕಡಾ 6.25 ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆರ್​ಬಿಐ ಬುಧವಾರ ಬೆಳಿಗ್ಗೆ ತಿಳಿಸಿದೆ. ಆರ್​ಬಿಐ ಸತತ ಐದನೇ ಬಾರಿ ರೆಪೊ ದರ ಹೆಚ್ಚಳ ಮಾಡಿದೆ. ಇದರ ಬೆನ್ನಲ್ಲೇ ಕರೂರ್ ವೈಶ್ಯ ಬ್ಯಾಂಕ್ ಎಂಸಿಎಲ್​ಆರ್ ಹೆಚ್ಚಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ