AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karur Vysya Bank: ಕನಿಷ್ಠ ಬಡ್ಡಿ ದರ ಹೆಚ್ಚಿಸಿದ ಕರೂರ್ ವೈಶ್ಯ ಬ್ಯಾಂಕ್; ಇಎಂಐ ಇನ್ನು ದುಬಾರಿ

ಒಂದು ವರ್ಷ ಅವಧಿಯ ಎಂಸಿಎಲ್​ಆರ್ ಶೇಕಡಾ 8.80ರಿಂದ ಶೇಕಡಾ 9.05ಕ್ಕೆ ಹೆಚ್ಚಳಗೊಂಡಿದೆ. ಆರು ತಿಂಗಳ ಎಂಸಿಎಲ್​ಆರ್ ಶೇಕಡಾ 8.70 ರಿಂದ ಶೇಕಡಾ 8.95ಕ್ಕೆ ಏರಿಕೆಯಾಗಿದೆ.

Karur Vysya Bank: ಕನಿಷ್ಠ ಬಡ್ಡಿ ದರ ಹೆಚ್ಚಿಸಿದ ಕರೂರ್ ವೈಶ್ಯ ಬ್ಯಾಂಕ್; ಇಎಂಐ ಇನ್ನು ದುಬಾರಿ
ಕರೂರ್ ವೈಶ್ಯ ಬ್ಯಾಂಕ್ Image Credit source: PTI
TV9 Web
| Edited By: |

Updated on: Dec 07, 2022 | 12:27 PM

Share

ಬೆಂಗಳೂರು: ಕರೂರ್ ವೈಶ್ಯ ಬ್ಯಾಂಕ್ (Karur Vysya Bank) ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು (MCLR) 25 ಮೂಲಾಂಶದಷ್ಟು ಹೆಚ್ಚಳ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ (ಡಿಸೆಂಬರ್ 7) ಜಾರಿಗೆ ಬರಲಿದೆ. ಎಂಸಿಎಲ್​ಆರ್ ಹೆಚ್ಚಳದೊಂದಿಗೆ ಸಾಲ ಪಡೆದವರ ಇಎಂಐ ಮೊತ್ತ ಹೆಚ್ಚಳವಾಗಲಿದೆ. ಆರ್​ಬಿಐ ರೆಪೊ ದರ ಹೆಚ್ಚಳ (Repo Rate Hike) ಮಾಡಿದ ಬೆನ್ನಲ್ಲೇ ಕರೂರ್ ವೈಶ್ಯ ಬ್ಯಾಂಕ್ ಸಾಲದ ಮೇಲಿನ ಕನಿಷ್ಠ ಬಡ್ಡಿ ದರ ಹೆಚ್ಚಿಸಿದೆ.

ಒಂದು ವರ್ಷ ಅವಧಿಯ ಎಂಸಿಎಲ್​ಆರ್ ಶೇಕಡಾ 8.80ರಿಂದ ಶೇಕಡಾ 9.05ಕ್ಕೆ ಹೆಚ್ಚಳಗೊಂಡಿದೆ. ಆರು ತಿಂಗಳ ಎಂಸಿಎಲ್​ಆರ್ ಶೇಕಡಾ 8.70 ರಿಂದ ಶೇಕಡಾ 8.95ಕ್ಕೆ ಏರಿಕೆಯಾಗಿದೆ. ಮೂರು ತಿಂಗಳ ಎಂಸಿಎಲ್​ಆರ್ ಶೇಕಡಾ 8.35ರಿಂದ ಶೇಕಡಾ 8.60ಕ್ಕೆ ಹೆಚ್ಚಳವಾಗಿದೆ. ಒಂದು ತಿಂಗಳ ಎಂಸಿಎಲ್​ಆರ್ ಶೇಕಡಾ 8.20ರಿಂದ 8.45ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: RBI Repo Rate Hike: ಆರ್​ಬಿಐ ರೆಪೊ ದರ 35 ಮೂಲಾಂಶ ಹೆಚ್ಚಳ; ದುಬಾರಿಯಾಗಲಿದೆ ವಾಹನ, ಗೃಹ ಸಾಲದ ಇಎಂಐ

ಎಂಸಿಎಲ್​ಆರ್ ಎಂದರೆ ಸಾಲದ ಮೇಲೆ ಬ್ಯಾಂಕ್ ವಿಧಿಸುವ ಕನಿಷ್ಠ ಬಡ್ಡಿ ದರವಾಗಿದೆ. ಇದಕ್ಕಿಂತ ಕಡಿಮೆ ಬಡ್ಡಿಗೆ ಬ್ಯಾಂಕ್ ಸಾಲ ನೀಡುವುದಿಲ್ಲ.

ಸಾಲ ನೀಡಿಕೆ ಹೆಚ್ಚಳ

23ನೇ ಹಣಕಾಸು ವರ್ಷದಲ್ಲಿ ಕರೂರ್ ವೈಶ್ಯ ಬ್ಯಾಂಕ್​ನ ಸಾಲ ನೀಡಿಕೆ ಪ್ರಮಾಣದಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 15ರಷ್ಟು ಹೆಚ್ಚಳವಾಗಿದೆ. ಈ ವರ್ಷ ಬ್ಯಾಂಕ್ 7,996 ಕೋಟಿ ರೂ. ಸಾಲ ನೀಡಿದೆ.

ಸೋಮವಾರವಷ್ಟೇ ಮುಂಬೈ ಷೇರುಪೇಟೆಯಲ್ಲಿ ಕರೂರ್ ವೈಶ್ಯ ಬ್ಯಾಂಕ್ ಷೇರುಗಳು ಶೇಕಡಾ 0.40 ವೃದ್ಧಿ ದಾಖಲಿಸಿದ್ದವು. ಬ್ಯಾಂಕ್ ಷೇರಿನ ಬೆಲೆ 99.50 ರೂ. ಆಗಿತ್ತು. ಒಂದು ಹಂತದಲ್ಲಿ ಕರೂರ್ ವೈಶ್ಯ ಬ್ಯಾಂಕ್ ಷೇರು 100 ರೂ. ಗಡಿ ದಾಟಿತ್ತು.

ರೆಪೊ ದರ ಹೆಚ್ಚಳದ ಬೆನ್ನಲ್ಲೇ ಕ್ರಮ

ರೆಪೊ ದರವನ್ನು 35 ಮೂಲಾಂಶ ಹೆಚ್ಚಿಸಲಾಗಿದ್ದು, ಪರಿಷ್ಕೃತ ರೆಪೊ ದರ ಶೇಕಡಾ 6.25 ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆರ್​ಬಿಐ ಬುಧವಾರ ಬೆಳಿಗ್ಗೆ ತಿಳಿಸಿದೆ. ಆರ್​ಬಿಐ ಸತತ ಐದನೇ ಬಾರಿ ರೆಪೊ ದರ ಹೆಚ್ಚಳ ಮಾಡಿದೆ. ಇದರ ಬೆನ್ನಲ್ಲೇ ಕರೂರ್ ವೈಶ್ಯ ಬ್ಯಾಂಕ್ ಎಂಸಿಎಲ್​ಆರ್ ಹೆಚ್ಚಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು