AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karur Vysya Bank: ಕನಿಷ್ಠ ಬಡ್ಡಿ ದರ ಹೆಚ್ಚಿಸಿದ ಕರೂರ್ ವೈಶ್ಯ ಬ್ಯಾಂಕ್; ಇಎಂಐ ಇನ್ನು ದುಬಾರಿ

ಒಂದು ವರ್ಷ ಅವಧಿಯ ಎಂಸಿಎಲ್​ಆರ್ ಶೇಕಡಾ 8.80ರಿಂದ ಶೇಕಡಾ 9.05ಕ್ಕೆ ಹೆಚ್ಚಳಗೊಂಡಿದೆ. ಆರು ತಿಂಗಳ ಎಂಸಿಎಲ್​ಆರ್ ಶೇಕಡಾ 8.70 ರಿಂದ ಶೇಕಡಾ 8.95ಕ್ಕೆ ಏರಿಕೆಯಾಗಿದೆ.

Karur Vysya Bank: ಕನಿಷ್ಠ ಬಡ್ಡಿ ದರ ಹೆಚ್ಚಿಸಿದ ಕರೂರ್ ವೈಶ್ಯ ಬ್ಯಾಂಕ್; ಇಎಂಐ ಇನ್ನು ದುಬಾರಿ
ಕರೂರ್ ವೈಶ್ಯ ಬ್ಯಾಂಕ್ Image Credit source: PTI
Follow us
TV9 Web
| Updated By: Ganapathi Sharma

Updated on: Dec 07, 2022 | 12:27 PM

ಬೆಂಗಳೂರು: ಕರೂರ್ ವೈಶ್ಯ ಬ್ಯಾಂಕ್ (Karur Vysya Bank) ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು (MCLR) 25 ಮೂಲಾಂಶದಷ್ಟು ಹೆಚ್ಚಳ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ (ಡಿಸೆಂಬರ್ 7) ಜಾರಿಗೆ ಬರಲಿದೆ. ಎಂಸಿಎಲ್​ಆರ್ ಹೆಚ್ಚಳದೊಂದಿಗೆ ಸಾಲ ಪಡೆದವರ ಇಎಂಐ ಮೊತ್ತ ಹೆಚ್ಚಳವಾಗಲಿದೆ. ಆರ್​ಬಿಐ ರೆಪೊ ದರ ಹೆಚ್ಚಳ (Repo Rate Hike) ಮಾಡಿದ ಬೆನ್ನಲ್ಲೇ ಕರೂರ್ ವೈಶ್ಯ ಬ್ಯಾಂಕ್ ಸಾಲದ ಮೇಲಿನ ಕನಿಷ್ಠ ಬಡ್ಡಿ ದರ ಹೆಚ್ಚಿಸಿದೆ.

ಒಂದು ವರ್ಷ ಅವಧಿಯ ಎಂಸಿಎಲ್​ಆರ್ ಶೇಕಡಾ 8.80ರಿಂದ ಶೇಕಡಾ 9.05ಕ್ಕೆ ಹೆಚ್ಚಳಗೊಂಡಿದೆ. ಆರು ತಿಂಗಳ ಎಂಸಿಎಲ್​ಆರ್ ಶೇಕಡಾ 8.70 ರಿಂದ ಶೇಕಡಾ 8.95ಕ್ಕೆ ಏರಿಕೆಯಾಗಿದೆ. ಮೂರು ತಿಂಗಳ ಎಂಸಿಎಲ್​ಆರ್ ಶೇಕಡಾ 8.35ರಿಂದ ಶೇಕಡಾ 8.60ಕ್ಕೆ ಹೆಚ್ಚಳವಾಗಿದೆ. ಒಂದು ತಿಂಗಳ ಎಂಸಿಎಲ್​ಆರ್ ಶೇಕಡಾ 8.20ರಿಂದ 8.45ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: RBI Repo Rate Hike: ಆರ್​ಬಿಐ ರೆಪೊ ದರ 35 ಮೂಲಾಂಶ ಹೆಚ್ಚಳ; ದುಬಾರಿಯಾಗಲಿದೆ ವಾಹನ, ಗೃಹ ಸಾಲದ ಇಎಂಐ

ಎಂಸಿಎಲ್​ಆರ್ ಎಂದರೆ ಸಾಲದ ಮೇಲೆ ಬ್ಯಾಂಕ್ ವಿಧಿಸುವ ಕನಿಷ್ಠ ಬಡ್ಡಿ ದರವಾಗಿದೆ. ಇದಕ್ಕಿಂತ ಕಡಿಮೆ ಬಡ್ಡಿಗೆ ಬ್ಯಾಂಕ್ ಸಾಲ ನೀಡುವುದಿಲ್ಲ.

ಸಾಲ ನೀಡಿಕೆ ಹೆಚ್ಚಳ

23ನೇ ಹಣಕಾಸು ವರ್ಷದಲ್ಲಿ ಕರೂರ್ ವೈಶ್ಯ ಬ್ಯಾಂಕ್​ನ ಸಾಲ ನೀಡಿಕೆ ಪ್ರಮಾಣದಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 15ರಷ್ಟು ಹೆಚ್ಚಳವಾಗಿದೆ. ಈ ವರ್ಷ ಬ್ಯಾಂಕ್ 7,996 ಕೋಟಿ ರೂ. ಸಾಲ ನೀಡಿದೆ.

ಸೋಮವಾರವಷ್ಟೇ ಮುಂಬೈ ಷೇರುಪೇಟೆಯಲ್ಲಿ ಕರೂರ್ ವೈಶ್ಯ ಬ್ಯಾಂಕ್ ಷೇರುಗಳು ಶೇಕಡಾ 0.40 ವೃದ್ಧಿ ದಾಖಲಿಸಿದ್ದವು. ಬ್ಯಾಂಕ್ ಷೇರಿನ ಬೆಲೆ 99.50 ರೂ. ಆಗಿತ್ತು. ಒಂದು ಹಂತದಲ್ಲಿ ಕರೂರ್ ವೈಶ್ಯ ಬ್ಯಾಂಕ್ ಷೇರು 100 ರೂ. ಗಡಿ ದಾಟಿತ್ತು.

ರೆಪೊ ದರ ಹೆಚ್ಚಳದ ಬೆನ್ನಲ್ಲೇ ಕ್ರಮ

ರೆಪೊ ದರವನ್ನು 35 ಮೂಲಾಂಶ ಹೆಚ್ಚಿಸಲಾಗಿದ್ದು, ಪರಿಷ್ಕೃತ ರೆಪೊ ದರ ಶೇಕಡಾ 6.25 ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆರ್​ಬಿಐ ಬುಧವಾರ ಬೆಳಿಗ್ಗೆ ತಿಳಿಸಿದೆ. ಆರ್​ಬಿಐ ಸತತ ಐದನೇ ಬಾರಿ ರೆಪೊ ದರ ಹೆಚ್ಚಳ ಮಾಡಿದೆ. ಇದರ ಬೆನ್ನಲ್ಲೇ ಕರೂರ್ ವೈಶ್ಯ ಬ್ಯಾಂಕ್ ಎಂಸಿಎಲ್​ಆರ್ ಹೆಚ್ಚಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ