AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPI Inflation: ಸಗಟು ಹಣದುಬ್ಬರ 22 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ

2022ರ ಡಿಸೆಂಬರ್​ನಲ್ಲಿ ಸಗಟು ಹಣದುಬ್ಬರ ಪ್ರಮಾಣ ಶೇ 4.95ಕ್ಕೆ ಇಳಿಕೆಯಾಗಿದೆ. ಆಹಾರ ವಸ್ತುಗಳು, ತರಕಾರಿ, ತೈಲಬೀಜಗಳ ಬೆಲೆ ಇಳಿಕೆ ಸಗಟು ಹಣದುಬ್ಬರ ಇಳಿಕೆಗೆ ನೆರವಾಗಿದೆ.

WPI Inflation: ಸಗಟು ಹಣದುಬ್ಬರ 22 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ
ಹಣದುಬ್ಬರ (ಸಾಂದರ್ಭಿಕ ಚಿತ್ರ)Image Credit source: PTI
Follow us
TV9 Web
| Updated By: Ganapathi Sharma

Updated on: Jan 16, 2023 | 4:35 PM

ನವದೆಹಲಿ: ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಬೆನ್ನಲ್ಲೇ ಸಗಟು ದರ ಆಧಾರಿತ ಹಣದುಬ್ಬರವೂ (WPI Inflation) 22 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿರುವುದು ತಿಳಿದುಬಂದಿದೆ. 2022ರ ಡಿಸೆಂಬರ್​ನಲ್ಲಿ ಸಗಟು ಹಣದುಬ್ಬರ ಪ್ರಮಾಣ ಶೇ 4.95ಕ್ಕೆ ಇಳಿಕೆಯಾಗಿದೆ. ಆಹಾರ ವಸ್ತುಗಳು, ತರಕಾರಿ, ತೈಲಬೀಜಗಳ ಬೆಲೆ ಇಳಿಕೆ ಸಗಟು ಹಣದುಬ್ಬರ ಇಳಿಕೆಗೆ ನೆರವಾಗಿದೆ. ನವೆಂಬರ್​​ನಲ್ಲಿ ಸಗಟು ಹಣದುಬ್ಬರ ಪ್ರಮಾಣ ಶೇ 5.85 ಇತ್ತು. 2021ರ ಡಿಸೆಂಬರ್​​ನಲ್ಲಿ ಶೇ 14.27ರಷ್ಟಿತ್ತು.

ತರಕಾರಿ ಮತ್ತು ಈರುಳ್ಳಿ ಬೆಲೆ ಕುಸಿತದಿಂದ ಕಳೆದ ತಿಂಗಳು ಆಹಾರ ಹಣದುಬ್ಬರ ಶೇ 1.25ಕ್ಕೆ ಇಳಿಕೆಯಾಗಿತ್ತು. ಆದಾಗ್ಯೂ ಗೋಧಿ, ಬೇಳೆಕಾಳುಗಳು, ಆಲೂಗಡ್ಡೆ ಮತ್ತು ಹಾಲು, ಮೊಟ್ಟೆ, ಮೀನು ದುಬಾರಿಯಾಗಿವೆ. ತರಕಾರಿ ಮತ್ತು ಈರುಳ್ಳಿಯ ಸಗಟು ಹಣದುಬ್ಬರ ಕ್ರಮವಾಗಿ ಶೇ 35 ಮತ್ತು 25.97ಕ್ಕೆ ಇಳಿಕೆಯಾಗಿವೆ. ಸಗಟು ಹಣದುಬ್ಬರದ ಅತಿ ಕಡಿಮೆ ಪ್ರಮಾಣ 2021ರ ಫೆಬ್ರವರಿಯಲ್ಲಿ ವರದಿಯಾಗಿತ್ತು. ಆಗ ಸಗಟು ಹಣದುಬ್ಬರ ಪ್ರಮಾಣ ಶೇ 4.83 ರಷ್ಟಿತ್ತು.

ಇದನ್ನೂ ಓದಿ: Retail Inflation: ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ

ಗ್ರಾಹಕ ದರ ಸೂಚ್ಯಂಕ ಆಧಾರಿತ ಚಿಲ್ಲರೆ ಹಣದುಬ್ಬರ ಪ್ರಮಾಣ ಡಿಸೆಂಬರ್​​ನಲ್ಲಿ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ, ಅಂದರೆ ಶೇಕಡಾ 5.72ಕ್ಕೆ ಇಳಿಕೆಯಾಗಿರುವ ಬಗ್ಗೆ ಕಳೆದ ಗುರುವಾರ ಕೇಂದ್ರ ಸಾಂಖ್ಯಿಕ, ಯೋಜನಾನುಷ್ಠಾನ ಸಚಿವಾಲಯ ಮಾಹಿತಿ ನೀಡಿತ್ತು. ಸತತ 11 ತಿಂಗಳ ಬಳಿಕ ಚಿಲ್ಲರೆ ಹಣದುಬ್ಬರ ನವೆಂಬರ್​​ನಲ್ಲಿ ಶೇಕಡಾ 6ಕ್ಕಿಂತ ಕೆಳಗಿದು, ಆರ್​​ಬಿಐ ಸಹನೆಯ ಮಟ್ಟಕ್ಕೆ ಇಳಿಕೆಯಾಗಿತ್ತು. ಹಣದುಬ್ಬರ ತಡೆಯುವ ಸಲುವಾಗಿ ಆರ್​ಬಿಐ ಹಣಕಾಸು ನೀತಿ ಸಮಿತಿಯು ಡಿಸೆಂಬರ್ 7ರಂದು ರೆಪೊ ದರವನ್ನು 35 ಮೂಲಾಂಶದಷ್ಟು ಹೆಚ್ಚಿಸಿ ಶೇಕಡಾ 6.25ಕ್ಕೆ ನಿಗದಿ ಮಾಡಿತ್ತು.

2023ರ ಜನವರಿ – ಮಾರ್ಚ್ ಅವಧಿಯಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣ ಸರಾಸರಿ ಶೇ 4.7 ಇರಲಿದೆ ಎಂದು ಎಸ್​ಬಿಐ ಸಂಶೋಧನಾ ವರದಿ ಇತ್ತೀಚೆಗೆ ಅಂದಾಜಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು