AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPI Inflation: ಸಗಟು ಹಣದುಬ್ಬರ 22 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ

2022ರ ಡಿಸೆಂಬರ್​ನಲ್ಲಿ ಸಗಟು ಹಣದುಬ್ಬರ ಪ್ರಮಾಣ ಶೇ 4.95ಕ್ಕೆ ಇಳಿಕೆಯಾಗಿದೆ. ಆಹಾರ ವಸ್ತುಗಳು, ತರಕಾರಿ, ತೈಲಬೀಜಗಳ ಬೆಲೆ ಇಳಿಕೆ ಸಗಟು ಹಣದುಬ್ಬರ ಇಳಿಕೆಗೆ ನೆರವಾಗಿದೆ.

WPI Inflation: ಸಗಟು ಹಣದುಬ್ಬರ 22 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ
ಹಣದುಬ್ಬರ (ಸಾಂದರ್ಭಿಕ ಚಿತ್ರ)Image Credit source: PTI
TV9 Web
| Updated By: Ganapathi Sharma|

Updated on: Jan 16, 2023 | 4:35 PM

Share

ನವದೆಹಲಿ: ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಬೆನ್ನಲ್ಲೇ ಸಗಟು ದರ ಆಧಾರಿತ ಹಣದುಬ್ಬರವೂ (WPI Inflation) 22 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿರುವುದು ತಿಳಿದುಬಂದಿದೆ. 2022ರ ಡಿಸೆಂಬರ್​ನಲ್ಲಿ ಸಗಟು ಹಣದುಬ್ಬರ ಪ್ರಮಾಣ ಶೇ 4.95ಕ್ಕೆ ಇಳಿಕೆಯಾಗಿದೆ. ಆಹಾರ ವಸ್ತುಗಳು, ತರಕಾರಿ, ತೈಲಬೀಜಗಳ ಬೆಲೆ ಇಳಿಕೆ ಸಗಟು ಹಣದುಬ್ಬರ ಇಳಿಕೆಗೆ ನೆರವಾಗಿದೆ. ನವೆಂಬರ್​​ನಲ್ಲಿ ಸಗಟು ಹಣದುಬ್ಬರ ಪ್ರಮಾಣ ಶೇ 5.85 ಇತ್ತು. 2021ರ ಡಿಸೆಂಬರ್​​ನಲ್ಲಿ ಶೇ 14.27ರಷ್ಟಿತ್ತು.

ತರಕಾರಿ ಮತ್ತು ಈರುಳ್ಳಿ ಬೆಲೆ ಕುಸಿತದಿಂದ ಕಳೆದ ತಿಂಗಳು ಆಹಾರ ಹಣದುಬ್ಬರ ಶೇ 1.25ಕ್ಕೆ ಇಳಿಕೆಯಾಗಿತ್ತು. ಆದಾಗ್ಯೂ ಗೋಧಿ, ಬೇಳೆಕಾಳುಗಳು, ಆಲೂಗಡ್ಡೆ ಮತ್ತು ಹಾಲು, ಮೊಟ್ಟೆ, ಮೀನು ದುಬಾರಿಯಾಗಿವೆ. ತರಕಾರಿ ಮತ್ತು ಈರುಳ್ಳಿಯ ಸಗಟು ಹಣದುಬ್ಬರ ಕ್ರಮವಾಗಿ ಶೇ 35 ಮತ್ತು 25.97ಕ್ಕೆ ಇಳಿಕೆಯಾಗಿವೆ. ಸಗಟು ಹಣದುಬ್ಬರದ ಅತಿ ಕಡಿಮೆ ಪ್ರಮಾಣ 2021ರ ಫೆಬ್ರವರಿಯಲ್ಲಿ ವರದಿಯಾಗಿತ್ತು. ಆಗ ಸಗಟು ಹಣದುಬ್ಬರ ಪ್ರಮಾಣ ಶೇ 4.83 ರಷ್ಟಿತ್ತು.

ಇದನ್ನೂ ಓದಿ: Retail Inflation: ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ

ಗ್ರಾಹಕ ದರ ಸೂಚ್ಯಂಕ ಆಧಾರಿತ ಚಿಲ್ಲರೆ ಹಣದುಬ್ಬರ ಪ್ರಮಾಣ ಡಿಸೆಂಬರ್​​ನಲ್ಲಿ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ, ಅಂದರೆ ಶೇಕಡಾ 5.72ಕ್ಕೆ ಇಳಿಕೆಯಾಗಿರುವ ಬಗ್ಗೆ ಕಳೆದ ಗುರುವಾರ ಕೇಂದ್ರ ಸಾಂಖ್ಯಿಕ, ಯೋಜನಾನುಷ್ಠಾನ ಸಚಿವಾಲಯ ಮಾಹಿತಿ ನೀಡಿತ್ತು. ಸತತ 11 ತಿಂಗಳ ಬಳಿಕ ಚಿಲ್ಲರೆ ಹಣದುಬ್ಬರ ನವೆಂಬರ್​​ನಲ್ಲಿ ಶೇಕಡಾ 6ಕ್ಕಿಂತ ಕೆಳಗಿದು, ಆರ್​​ಬಿಐ ಸಹನೆಯ ಮಟ್ಟಕ್ಕೆ ಇಳಿಕೆಯಾಗಿತ್ತು. ಹಣದುಬ್ಬರ ತಡೆಯುವ ಸಲುವಾಗಿ ಆರ್​ಬಿಐ ಹಣಕಾಸು ನೀತಿ ಸಮಿತಿಯು ಡಿಸೆಂಬರ್ 7ರಂದು ರೆಪೊ ದರವನ್ನು 35 ಮೂಲಾಂಶದಷ್ಟು ಹೆಚ್ಚಿಸಿ ಶೇಕಡಾ 6.25ಕ್ಕೆ ನಿಗದಿ ಮಾಡಿತ್ತು.

2023ರ ಜನವರಿ – ಮಾರ್ಚ್ ಅವಧಿಯಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣ ಸರಾಸರಿ ಶೇ 4.7 ಇರಲಿದೆ ಎಂದು ಎಸ್​ಬಿಐ ಸಂಶೋಧನಾ ವರದಿ ಇತ್ತೀಚೆಗೆ ಅಂದಾಜಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?