EPFO Guidelines for Higher Pension: ಹೆಚ್ಚು ಪಿಂಚಣಿಗೆ ಇಪಿಎಫ್​ಒ ಮಾರ್ಗಸೂಚಿ ಬಿಡುಗಡೆ

ಪಿಂಚಣಿದಾರರು ಹೆಚ್ಚು ಪಿಂಚಣಿ ಪಡೆಯುವುದಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ನಿಬಂಧನೆಗಳನ್ನು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ಬಿಡುಗಡೆ ಮಾಡಿದೆ.

EPFO Guidelines for Higher Pension: ಹೆಚ್ಚು ಪಿಂಚಣಿಗೆ ಇಪಿಎಫ್​ಒ ಮಾರ್ಗಸೂಚಿ ಬಿಡುಗಡೆ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Dec 30, 2022 | 4:50 PM

ನವದೆಹಲಿ: ಪಿಂಚಣಿದಾರರು ಹೆಚ್ಚು ಪಿಂಚಣಿ ಪಡೆಯುವುದಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ನಿಬಂಧನೆಗಳನ್ನು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (EPFO) ಬಿಡುಗಡೆ ಮಾಡಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶಾನುಸಾರ ಇಪಿಎಫ್​ಒ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೆಚ್ಚು ಪಿಂಚಣಿ ಪಡೆಯಲು ಅರ್ಹರಾಗಿರುವವರು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಎಂಟು ವಾರಗಳ ಒಳಗಾಗಿ ಅನುಷ್ಠಾನಗೊಳಿಸಬೇಕು ಎಂದೂ ನಿಧಿ ಪ್ರಾಧಿಕಾರಗಳಿಗೆ ಇಪಿಎಫ್​ಒ ಸೂಚಿಸಿದೆ. 2014ರ ಸೆಪ್ಟೆಂಬರ್​​​ 1ರ ಮೊದಲು ನಿವೃತ್ತರಾದವರು, 1995ರ ನಿಯಮ 11(3)ರ ಅಡಿಯಲ್ಲಿ ಹೆಚ್ಚು ಪಿಂಚಣಿ ಪಡೆಯಲು ಅರ್ಹರು ಎಂದು ಇಪಿಎಫ್​ಒ ತಿಳಿಸಿದೆ. ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಯಾರೆಲ್ಲ ಹೆಚ್ಚು ಪಿಂಚಣಿ ಪಡೆಯಲು ಅರ್ಹರು ಎಂಬುದನ್ನು ಇಪಿಎಫ್​ಒ ವಿವರಿಸಿದೆ. ವಿವರಗಳು ಇಲ್ಲಿವೆ.

ಪಿಎಫ್​​ಗೆ ಆಗಿನ ವೇತನ ಮಿತಿಯಾದ 5,000 ರೂ. ಅಥವಾ 6,500 ರೂ.ಗಿಂತ ಹೆಚ್ಚಿನ ಕೊಡುಗೆ ನೀಡಿದ್ದ ಇಪಿಎಸ್​​ ಸದಸ್ಯರು ಹೆಚ್ಚು ಪಿಂಚಣಿ ಪಡೆಯಲು ಅರ್ಹರಾಗಿದ್ದಾರೆ.

ಇಪಿಎಸ್​​-95 ತಿದ್ದುಪಡಿಗೂ ಮುನ್ನ ಸದಸ್ಯರಾಗಿದ್ದವರು ಮತ್ತು ಉದ್ಯೋಗಿಗಳ ಭವಿಷ್ಯನಿಧಿ ಯೋಜನೆ (ಇಪಿಎಸ್​) ಜಂಟಿ ಆಯ್ಕೆ ಹೊಂದಿದ್ದ ಇಪಿಎಫ್​​ಒ ಚಂದಾದಾರು ಅರ್ಹರಾಗಿದ್ದಾರೆ. ಇಪಿಎಫ್​ಒ ಇಂಥ ಆಯ್ಕೆಯನ್ನು ನಿರಾಕರಿಸಿದ್ದಲ್ಲಿ ಅಂಥವರು ಅರ್ಹರಾಗಿದ್ದಾರೆ ಎಂದು ಸುತ್ತೋಲೆ ತಿಳಿಸಿದೆ.

ಹೆಚ್ಚು ಪಿಂಚಣಿಗೆ ಅರ್ಹರು ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಸದಸ್ಯರು ಸಂಬಂಧಪಟ್ಟ ಪ್ರಾದೇಶಿಕ ಇಪಿಎಫ್​ಒ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳನ್ನು ಒದಗಿಸಬೇಕು. ಆಯುಕ್ತರು ಸೂಚಿಸಿದ ವಿಧಾನದಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: EPFO Clarification: ವೇತನ ರಹಿತ ರಜೆಯಲ್ಲಿದ್ದಾಗ ಮೃತಪಟ್ಟರೂ ಡೆತ್ ಬೆನಿಫಿಟ್​ ಪಡೆಯಬಹುದು; ಇಪಿಎಫ್​ಒ

ತಿಂಗಳಿಗೆ ಗರಿಷ್ಠ 15,000 ರೂ. ವೇತನಕ್ಕೆ ಪಿಂಚಣಿ ನೀಡುವ ಬಗ್ಗೆ ಉಲ್ಲೇಖಿಸಲಾಗಿತ್ತು 2014ರಲ್ಲಿ ಇಪಿಎಫ್​ಒಗೆ ಮಾಡಲಾಗಿದ್ದ ತಿದ್ದುಪಡಿಯಲ್ಲಿ ಉಲ್ಲೇಖಿಸಲಾಗಿತ್ತು. ಅದನ್ನು ತಳ್ಳಿಹಾಕಿದ್ದ ಕೇರಳ ಹೈಕೋರ್ಟ್, ಗರಿಷ್ಠ ಮಿತಿಗಿಂತಲೂ ಹೆಚ್ಚಿನ, ಅಂದರೆ ಉದ್ಯೋಗಿಗಳು ಹೊಂದಿರುವ ವಾಸ್ತವ ವೇತನಕ್ಕನುಗುಣವಾಗಿ ಪಿಂಚಣಿ ಲೆಕ್ಕಾಚಾರ ಹಾಕುವ ಬಗ್ಗೆ ನಿರ್ದೇಶನ ನೀಡಿತ್ತು. ಈ ಕುರಿತು ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆಯಾಗಿತ್ತು. ಈ ವಿಚಾರವಾಗಿ ಇತ್ತೀಚೆಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ‘2014ರ ಉದ್ಯೋಗಿಗಳ ಭವಿಷ್ಯನಿಧಿ ತಿದ್ದುಪಡಿ ಯೋಜನೆ’ಯನ್ನು ಎತ್ತಿಹಿಡಿದಿತ್ತು. ಆದರೆ, ಅದಕ್ಕಿಂತ ಮೊದಲಿನ ಇಪಿಎಫ್​​ಒ ಸದಸ್ಯರಿಗೆ ಹೆಚ್ಚಿನ ಪಿಂಚಣಿ ನೀಡುವಂತೆ ನಿರ್ದೇಶಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ