Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ಬಜೆಟ್ ಅಧಿವೇಶನ ಹಿನ್ನೆಲೆ, ಸೋಮವಾರ ಸರ್ವಪಕ್ಷ ಸಭೆ

All Party Meeting at Center: ಬಜೆಟ್ ಅಧಿವೇಶನ ಸರಾಗವಾಗಿ ನಡೆಯುವಂತಾಗಲು ವಿಪಕ್ಷಗಳ ಸಹಕಾರ ಕೋರಿ ಇಂದು (ಜ. 30) ಸಂಸದೀಯ ಸಚಿವ ಪ್ರಲ್ಹಾದ್ ಜೋಷಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಂಸದೀಯ ಭವನದಲ್ಲಿ ಮಧ್ಯಾಹ್ನ ಈ ಸಭೆ ನಡೆಯಲಿದೆ.

Budget 2023: ಬಜೆಟ್ ಅಧಿವೇಶನ ಹಿನ್ನೆಲೆ, ಸೋಮವಾರ ಸರ್ವಪಕ್ಷ ಸಭೆ
ಹೊಸ ಸಂಸದೀಯ ಭವನImage Credit source: PTI
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Jan 30, 2023 | 7:48 AM

ನವದೆಹಲಿ: ಫೆಬ್ರುವರಿ 1, ಬುಧವಾರದಂದು ಬಜೆಟ್ (Union Budget 2023) ಮಂಡನೆ ಇರುವ ಹಿನ್ನೆಲೆಯಲ್ಲಿ ಇಂದು ಸೋಮವಾರ ಕೇಂದ್ರ ಸರ್ಕಾರ ಸರ್ವಪಕ್ಷ (All Party Meeting) ಸಭೆ ಕರೆದಿದೆ. ಮಧ್ಯಾಹ್ನ ಈ ಸಭೆ ನಡೆಯಲಿದ್ದು ಬಜೆಟ್ ಅಧಿವೇಶನ (Budget Session) ಸರಾಗವಾಗಿ ಸಾಗಲು ಎಲ್ಲಾ ಪಕ್ಷಗಳೂ ಸಹಕಾರ ಕೊಡಬೇಕೆಂದು ಸರ್ಕಾರ ಈ ಸಂದರ್ಭದಲ್ಲಿ ಮನವಿ ಮಾಡಿಕೊಳ್ಳುವ ಸಾಧ್ಯತೆ ಇದೆ.

ಈ ಸಭೆಯಲ್ಲಿ ವಿಪಕ್ಷಗಳು ತಮ್ಮ ಅನಿಸಿಕೆ ತೋರ್ಪಡಿಸಲಿದ್ದ ಬಜೆಟ್ ಅಧಿವೇಶನದಲ್ಲಿ ತಾವು ಪ್ರಸ್ತಾಪಿಸುವ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುವ ನಿರೀಕ್ಷೆ ಇದೆ. ಸರ್ವಪಕ್ಷ ಸಭೆಯ ಬಳಿಕ ಆಡಳಿತಾರೂಢ ಎನ್​ಡಿಎ ಮೈತ್ರಿಕೂಟದ ನಾಯಕರು ಕೂಡ ಸಭೆ ಸೇರಿ ಬಜೆಟ್ ಅಧಿವೇಶನದ ಕುರಿತು ಚರ್ಚಿಸಲಿದ್ದಾರೆ.

ಫೆಬ್ರುವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ. ಇದು ಈ ಸರ್ಕಾರದ ಕೊನೆಯ ಪೂರ್ಣಪ್ರಮಾಣದ ಬಜೆಟ್ ಆಗಿರುವುದು ಬಹಳಷ್ಟು ನಿರೀಕ್ಷೆಗಳಿವೆ. ಜಾಗತಿಕ ಆರ್ಥಿಕ ಹಿಂಜರಿತ ಎದುರಾಗುತ್ತಿರುವುದರಿಂದ ಆ ನಿಟ್ಟಿನಲ್ಲಿ ಸರ್ಕಾರ ಸುಧಾರಣಾ ಕ್ರಮಗಳತ್ತ ಗಮನ ಕೊಡುತ್ತದಾ ಅಥವಾ ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಬಜೆಟ್ ಕೊಡಲು ಮುಂದಾಗುತ್ತಾ ಎಂಬುದು ಸದ್ಯದ ಪ್ರಶ್ನೆ.

ಬಜೆಟ್ ಅಧಿವೇಶನ ಎರಡು ಹಂತದಲ್ಲಿ ನಡೆಯುತ್ತದೆ. ಮೊದಲ ಭಾಗವು ಜನವರಿ 31ರಂದು, ಅಂದರೆ ಮಂಗಳವಾರದಿಂದ ನಡೆಯುತ್ತದೆ. ಮೊದಲಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್​ನ ಜಂಟಿ ಸದನ (ಲೋಕಸಭೆ ಮತ್ತು ರಾಜ್ಯಸಭೆ) ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅದಾದ ಬಳಿಕ ಆರ್ಥಿಕ ಸಮೀಕ್ಷೆಯನ್ನು ಸಂಸತ್​ನಲ್ಲಿ ಮಂಡನೆ ಮಾಡಲಾಗುತ್ತದೆ. ಬಜೆಟ್ ಮಂಡನೆಯಾದ ಬಳಿಕವೂ ಅಧಿವೇಶ ಮುಂದುವರಿದು ಉಭಯ ಸದನಗಳಲ್ಲಿ ಚರ್ಚೆಗಳು ನಡೆಯುತ್ತವೆ. ಈ ಅಧಿವೇಶನ ಫೆಬ್ರುವರಿ 13ರವರೆಗೂ ಇರುತ್ತದೆ.

ವಿಶೇಷ ಎಂದರೆ ಹೊಸದಾಗಿ ನಿರ್ಮಿಸಿರುವ ಸಂಸದೀಯ ಭವನದಲ್ಲಿ ಈ ಬಾರಿಯ ಬಜೆಟ್ ಅಧಿವೇಶನ ನಡೆಯಲಿದೆ.

Published On - 7:48 am, Mon, 30 January 23

ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ