AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಾಯತಿ ಸ್ತರದಲ್ಲಿ ಪರಿವರ್ತನೆ ತರುತ್ತಿರುವ ಕೃತಕ ಬುದ್ಧಿಮತ್ತೆಯ ಭಾಷಿಣಿ ಆ್ಯಪ್

Bhashini AI: ಕೇಂದ್ರ ಸರ್ಕಾರ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಆಡಳಿತ ನಿರ್ವಹಣೆಗೆ ಸಮರ್ಪಕವಾಗಿ ಬಳಸಿಕೊಳ್ಳುತ್ತಿದೆ. ಸರ್ಕಾರವೇ ರೂಪಿಸಿರುವ ಭಾಷಿಣಿ ಎನ್ನುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಪ್​ನ ಸಹಾಯದಿಂದ ಪಂಚಾಯತಿ ಸ್ತರದಲ್ಲಿ ಆಡಳಿತ ಕಾರ್ಯ ತುಸು ಸಲೀಸಾಗಿದೆ.

ಪಂಚಾಯತಿ ಸ್ತರದಲ್ಲಿ ಪರಿವರ್ತನೆ ತರುತ್ತಿರುವ ಕೃತಕ ಬುದ್ಧಿಮತ್ತೆಯ ಭಾಷಿಣಿ ಆ್ಯಪ್
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 03, 2024 | 11:51 AM

Share

ನವದೆಹಲಿ, ಡಿಸೆಂಬರ್ 3: ಕೇಂದ್ರ ಸರ್ಕಾರ ರೂಪಿಸಿರುವ ಭಾಷಿಣಿಯು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಆ್ಯಪ್ ಆಗಿದೆ. ಇದು ದೇಶದ 22 ಭಾಷೆಗಳಲ್ಲಿ ಲಭ್ಯ ಇದೆ. ಒಂದು ಭಾಷೆಯಿಂದ ಇನ್ನೊಂದು ಭಾಷೆಗೆ ಸಂವಹನ ನಡೆಸಲು ಇದು ಅನುಕೂಲವಾಗಿದೆ. ಗ್ರಾಮೀಣ ಭಾಗದಲ್ಲಿ ಆಡಳಿತಕ್ಕೆ ಇದು ಪರಿಣಾಮಕಾರಿ ಸಾಧನವಾಗಿ ಪರಿಣಮಿಸಿದೆ. ಕನ್ನಡ ಸೇರಿದಂತೆ ಭಾರತದ ಹೆಚ್ಚಿನ ಭಾಷೆಗಳಲ್ಲಿ ಈ ಎಐ ಟೂಲ್ ಲಭ್ಯ ಇದೆ.

ಪಂಚಾಯತ್ ರಾಜ್ ಸಚಿವಾಲಯದ ಅಡಿಗೆ ಬರುವ ಇ-ಗ್ರಾಮಸ್ವರಾಜ್ ಎನ್ನುವ ಪೋರ್ಟಲ್​ನಲ್ಲಿ ಎಐ ಟೂಲ್ ಅನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ. ಕನ್ನಡ, ಹಿಂದಿ, ತಮಿಳು ಇತ್ಯಾದಿ ಮುಖ್ಯಸ್ತರದ ಭಾಷೆಗಳ ಜೊತೆಗೆ ಬೋಡೋ, ಸಂತಾಲಿಯಂತಹ ಬುಡಕಟ್ಟು ಭಾಷೆಗಳೂ ಇದರಲ್ಲಿವೆ. ನೇಪಾಳಿ, ಮೈಥಿಲಿ, ಡೋಗ್ರಿ, ಸಂಸ್ಕೃತ ಮೊದಲಾದ ಭಾಷೆಗಳೂ ಇದರಲ್ಲಿವೆ.

ರಾಷ್ಟ್ರೀಯ ಮಟ್ಟದ ಮಾಹಿತಿಯೋ, ಕೇಂದ್ರ ಸರ್ಕಾರದ ಯೋಜನೆಯ ಮಾಹಿತಿಯೋ ದೇಶದ ಯಾವುದೋ ರಾಜ್ಯದ ಮೂಲೆಯಲ್ಲಿರುವ ಪಂಚಾಯಿತಿಗಳ ಮಟ್ಟವನ್ನು ತಲುಪಬೇಕಾದರೆ ಭಾಷಾ ತಡೆಗೋಡೆ ದಾಟಬೇಕಾಗುತ್ತದೆ. ಹಿಂದಿಯಲ್ಲಿರುವ ಮಾಹಿತಿಯು ತಮಿಳುನಾಡಿನ ಜನರಿಗೆ ಅರ್ಥವಾಗುವುದಿಲ್ಲ. ಇಂಗ್ಲೀಷ್​ನಲ್ಲಿರುವ ಮಾಹಿತಿ ಬಹಳ ಕಡೆ ತಿಳಿಯದೇ ಹೋಗಬಹುದು. ಭಾಷಿಣಿ ಎಐ ಮೂಲಕ ಈ ಕೊರತೆಯನ್ನು ನಿವಾರಿಸಲು ಸಾಧ್ಯವಾಗುತ್ತದೆ. ಸ್ಥಳೀಯ ಮಟ್ಟದಲ್ಲಿ ಸಮರ್ಪಕವಾಗಿ ಆಡಳಿತ ನಿರ್ವಹಣೆ ಸಾಧ್ಯವಾಗಬಲ್ಲುದು.

ಇದನ್ನೂ ಓದಿ: ಸಿಗರೇಟ್, ಪೆಪ್ಸಿ, ಕೋಕಾಕೋಲಾ ಬೆಲೆಗಳ ಏರಿಕೆ ಸಾಧ್ಯತೆ; ಪಾಪ ತೆರಿಗೆ ಶೇ. 35ಕ್ಕೆ ಏರಿಸಲು ನಿರ್ಧಾರ

ಭಾಷಿಣಿಯ ವಾಣಿ ಅನುವಾದ್ ಸೇವೆಯಲ್ಲಿ ಧ್ವನಿಯಿಂದ ಧ್ವನಿಗೆ ತರ್ಜುಮೆ ಆಗುತ್ತದೆ. ಸಮಾವೇಶ, ಉಪನ್ಯಾಸಗಳಲ್ಲಿ ಹಿಂದಿಯಲ್ಲೋ, ಇಂಗ್ಲೀಷ್​ನಲ್ಲೋ ಯಾರಾದರೂ ಭಾಷಣ ಮಾಡಿದರೆ, ಅದನ್ನು ಎಐ ಟೂಲ್ ಮೂಲಕ ಸ್ಥಳೀಯ ಭಾಷೆಗಳಿಗೆ ತರ್ಜುಮೆಗೊಳಿಸಿ ಪ್ರಸ್ತುತಪಡಿಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ