Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಾಯತಿ ಸ್ತರದಲ್ಲಿ ಪರಿವರ್ತನೆ ತರುತ್ತಿರುವ ಕೃತಕ ಬುದ್ಧಿಮತ್ತೆಯ ಭಾಷಿಣಿ ಆ್ಯಪ್

Bhashini AI: ಕೇಂದ್ರ ಸರ್ಕಾರ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಆಡಳಿತ ನಿರ್ವಹಣೆಗೆ ಸಮರ್ಪಕವಾಗಿ ಬಳಸಿಕೊಳ್ಳುತ್ತಿದೆ. ಸರ್ಕಾರವೇ ರೂಪಿಸಿರುವ ಭಾಷಿಣಿ ಎನ್ನುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಪ್​ನ ಸಹಾಯದಿಂದ ಪಂಚಾಯತಿ ಸ್ತರದಲ್ಲಿ ಆಡಳಿತ ಕಾರ್ಯ ತುಸು ಸಲೀಸಾಗಿದೆ.

ಪಂಚಾಯತಿ ಸ್ತರದಲ್ಲಿ ಪರಿವರ್ತನೆ ತರುತ್ತಿರುವ ಕೃತಕ ಬುದ್ಧಿಮತ್ತೆಯ ಭಾಷಿಣಿ ಆ್ಯಪ್
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 03, 2024 | 11:51 AM

ನವದೆಹಲಿ, ಡಿಸೆಂಬರ್ 3: ಕೇಂದ್ರ ಸರ್ಕಾರ ರೂಪಿಸಿರುವ ಭಾಷಿಣಿಯು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಆ್ಯಪ್ ಆಗಿದೆ. ಇದು ದೇಶದ 22 ಭಾಷೆಗಳಲ್ಲಿ ಲಭ್ಯ ಇದೆ. ಒಂದು ಭಾಷೆಯಿಂದ ಇನ್ನೊಂದು ಭಾಷೆಗೆ ಸಂವಹನ ನಡೆಸಲು ಇದು ಅನುಕೂಲವಾಗಿದೆ. ಗ್ರಾಮೀಣ ಭಾಗದಲ್ಲಿ ಆಡಳಿತಕ್ಕೆ ಇದು ಪರಿಣಾಮಕಾರಿ ಸಾಧನವಾಗಿ ಪರಿಣಮಿಸಿದೆ. ಕನ್ನಡ ಸೇರಿದಂತೆ ಭಾರತದ ಹೆಚ್ಚಿನ ಭಾಷೆಗಳಲ್ಲಿ ಈ ಎಐ ಟೂಲ್ ಲಭ್ಯ ಇದೆ.

ಪಂಚಾಯತ್ ರಾಜ್ ಸಚಿವಾಲಯದ ಅಡಿಗೆ ಬರುವ ಇ-ಗ್ರಾಮಸ್ವರಾಜ್ ಎನ್ನುವ ಪೋರ್ಟಲ್​ನಲ್ಲಿ ಎಐ ಟೂಲ್ ಅನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ. ಕನ್ನಡ, ಹಿಂದಿ, ತಮಿಳು ಇತ್ಯಾದಿ ಮುಖ್ಯಸ್ತರದ ಭಾಷೆಗಳ ಜೊತೆಗೆ ಬೋಡೋ, ಸಂತಾಲಿಯಂತಹ ಬುಡಕಟ್ಟು ಭಾಷೆಗಳೂ ಇದರಲ್ಲಿವೆ. ನೇಪಾಳಿ, ಮೈಥಿಲಿ, ಡೋಗ್ರಿ, ಸಂಸ್ಕೃತ ಮೊದಲಾದ ಭಾಷೆಗಳೂ ಇದರಲ್ಲಿವೆ.

ರಾಷ್ಟ್ರೀಯ ಮಟ್ಟದ ಮಾಹಿತಿಯೋ, ಕೇಂದ್ರ ಸರ್ಕಾರದ ಯೋಜನೆಯ ಮಾಹಿತಿಯೋ ದೇಶದ ಯಾವುದೋ ರಾಜ್ಯದ ಮೂಲೆಯಲ್ಲಿರುವ ಪಂಚಾಯಿತಿಗಳ ಮಟ್ಟವನ್ನು ತಲುಪಬೇಕಾದರೆ ಭಾಷಾ ತಡೆಗೋಡೆ ದಾಟಬೇಕಾಗುತ್ತದೆ. ಹಿಂದಿಯಲ್ಲಿರುವ ಮಾಹಿತಿಯು ತಮಿಳುನಾಡಿನ ಜನರಿಗೆ ಅರ್ಥವಾಗುವುದಿಲ್ಲ. ಇಂಗ್ಲೀಷ್​ನಲ್ಲಿರುವ ಮಾಹಿತಿ ಬಹಳ ಕಡೆ ತಿಳಿಯದೇ ಹೋಗಬಹುದು. ಭಾಷಿಣಿ ಎಐ ಮೂಲಕ ಈ ಕೊರತೆಯನ್ನು ನಿವಾರಿಸಲು ಸಾಧ್ಯವಾಗುತ್ತದೆ. ಸ್ಥಳೀಯ ಮಟ್ಟದಲ್ಲಿ ಸಮರ್ಪಕವಾಗಿ ಆಡಳಿತ ನಿರ್ವಹಣೆ ಸಾಧ್ಯವಾಗಬಲ್ಲುದು.

ಇದನ್ನೂ ಓದಿ: ಸಿಗರೇಟ್, ಪೆಪ್ಸಿ, ಕೋಕಾಕೋಲಾ ಬೆಲೆಗಳ ಏರಿಕೆ ಸಾಧ್ಯತೆ; ಪಾಪ ತೆರಿಗೆ ಶೇ. 35ಕ್ಕೆ ಏರಿಸಲು ನಿರ್ಧಾರ

ಭಾಷಿಣಿಯ ವಾಣಿ ಅನುವಾದ್ ಸೇವೆಯಲ್ಲಿ ಧ್ವನಿಯಿಂದ ಧ್ವನಿಗೆ ತರ್ಜುಮೆ ಆಗುತ್ತದೆ. ಸಮಾವೇಶ, ಉಪನ್ಯಾಸಗಳಲ್ಲಿ ಹಿಂದಿಯಲ್ಲೋ, ಇಂಗ್ಲೀಷ್​ನಲ್ಲೋ ಯಾರಾದರೂ ಭಾಷಣ ಮಾಡಿದರೆ, ಅದನ್ನು ಎಐ ಟೂಲ್ ಮೂಲಕ ಸ್ಥಳೀಯ ಭಾಷೆಗಳಿಗೆ ತರ್ಜುಮೆಗೊಳಿಸಿ ಪ್ರಸ್ತುತಪಡಿಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ