AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಾಯತಿ ಸ್ತರದಲ್ಲಿ ಪರಿವರ್ತನೆ ತರುತ್ತಿರುವ ಕೃತಕ ಬುದ್ಧಿಮತ್ತೆಯ ಭಾಷಿಣಿ ಆ್ಯಪ್

Bhashini AI: ಕೇಂದ್ರ ಸರ್ಕಾರ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಆಡಳಿತ ನಿರ್ವಹಣೆಗೆ ಸಮರ್ಪಕವಾಗಿ ಬಳಸಿಕೊಳ್ಳುತ್ತಿದೆ. ಸರ್ಕಾರವೇ ರೂಪಿಸಿರುವ ಭಾಷಿಣಿ ಎನ್ನುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಪ್​ನ ಸಹಾಯದಿಂದ ಪಂಚಾಯತಿ ಸ್ತರದಲ್ಲಿ ಆಡಳಿತ ಕಾರ್ಯ ತುಸು ಸಲೀಸಾಗಿದೆ.

ಪಂಚಾಯತಿ ಸ್ತರದಲ್ಲಿ ಪರಿವರ್ತನೆ ತರುತ್ತಿರುವ ಕೃತಕ ಬುದ್ಧಿಮತ್ತೆಯ ಭಾಷಿಣಿ ಆ್ಯಪ್
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 03, 2024 | 11:51 AM

Share

ನವದೆಹಲಿ, ಡಿಸೆಂಬರ್ 3: ಕೇಂದ್ರ ಸರ್ಕಾರ ರೂಪಿಸಿರುವ ಭಾಷಿಣಿಯು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಆ್ಯಪ್ ಆಗಿದೆ. ಇದು ದೇಶದ 22 ಭಾಷೆಗಳಲ್ಲಿ ಲಭ್ಯ ಇದೆ. ಒಂದು ಭಾಷೆಯಿಂದ ಇನ್ನೊಂದು ಭಾಷೆಗೆ ಸಂವಹನ ನಡೆಸಲು ಇದು ಅನುಕೂಲವಾಗಿದೆ. ಗ್ರಾಮೀಣ ಭಾಗದಲ್ಲಿ ಆಡಳಿತಕ್ಕೆ ಇದು ಪರಿಣಾಮಕಾರಿ ಸಾಧನವಾಗಿ ಪರಿಣಮಿಸಿದೆ. ಕನ್ನಡ ಸೇರಿದಂತೆ ಭಾರತದ ಹೆಚ್ಚಿನ ಭಾಷೆಗಳಲ್ಲಿ ಈ ಎಐ ಟೂಲ್ ಲಭ್ಯ ಇದೆ.

ಪಂಚಾಯತ್ ರಾಜ್ ಸಚಿವಾಲಯದ ಅಡಿಗೆ ಬರುವ ಇ-ಗ್ರಾಮಸ್ವರಾಜ್ ಎನ್ನುವ ಪೋರ್ಟಲ್​ನಲ್ಲಿ ಎಐ ಟೂಲ್ ಅನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ. ಕನ್ನಡ, ಹಿಂದಿ, ತಮಿಳು ಇತ್ಯಾದಿ ಮುಖ್ಯಸ್ತರದ ಭಾಷೆಗಳ ಜೊತೆಗೆ ಬೋಡೋ, ಸಂತಾಲಿಯಂತಹ ಬುಡಕಟ್ಟು ಭಾಷೆಗಳೂ ಇದರಲ್ಲಿವೆ. ನೇಪಾಳಿ, ಮೈಥಿಲಿ, ಡೋಗ್ರಿ, ಸಂಸ್ಕೃತ ಮೊದಲಾದ ಭಾಷೆಗಳೂ ಇದರಲ್ಲಿವೆ.

ರಾಷ್ಟ್ರೀಯ ಮಟ್ಟದ ಮಾಹಿತಿಯೋ, ಕೇಂದ್ರ ಸರ್ಕಾರದ ಯೋಜನೆಯ ಮಾಹಿತಿಯೋ ದೇಶದ ಯಾವುದೋ ರಾಜ್ಯದ ಮೂಲೆಯಲ್ಲಿರುವ ಪಂಚಾಯಿತಿಗಳ ಮಟ್ಟವನ್ನು ತಲುಪಬೇಕಾದರೆ ಭಾಷಾ ತಡೆಗೋಡೆ ದಾಟಬೇಕಾಗುತ್ತದೆ. ಹಿಂದಿಯಲ್ಲಿರುವ ಮಾಹಿತಿಯು ತಮಿಳುನಾಡಿನ ಜನರಿಗೆ ಅರ್ಥವಾಗುವುದಿಲ್ಲ. ಇಂಗ್ಲೀಷ್​ನಲ್ಲಿರುವ ಮಾಹಿತಿ ಬಹಳ ಕಡೆ ತಿಳಿಯದೇ ಹೋಗಬಹುದು. ಭಾಷಿಣಿ ಎಐ ಮೂಲಕ ಈ ಕೊರತೆಯನ್ನು ನಿವಾರಿಸಲು ಸಾಧ್ಯವಾಗುತ್ತದೆ. ಸ್ಥಳೀಯ ಮಟ್ಟದಲ್ಲಿ ಸಮರ್ಪಕವಾಗಿ ಆಡಳಿತ ನಿರ್ವಹಣೆ ಸಾಧ್ಯವಾಗಬಲ್ಲುದು.

ಇದನ್ನೂ ಓದಿ: ಸಿಗರೇಟ್, ಪೆಪ್ಸಿ, ಕೋಕಾಕೋಲಾ ಬೆಲೆಗಳ ಏರಿಕೆ ಸಾಧ್ಯತೆ; ಪಾಪ ತೆರಿಗೆ ಶೇ. 35ಕ್ಕೆ ಏರಿಸಲು ನಿರ್ಧಾರ

ಭಾಷಿಣಿಯ ವಾಣಿ ಅನುವಾದ್ ಸೇವೆಯಲ್ಲಿ ಧ್ವನಿಯಿಂದ ಧ್ವನಿಗೆ ತರ್ಜುಮೆ ಆಗುತ್ತದೆ. ಸಮಾವೇಶ, ಉಪನ್ಯಾಸಗಳಲ್ಲಿ ಹಿಂದಿಯಲ್ಲೋ, ಇಂಗ್ಲೀಷ್​ನಲ್ಲೋ ಯಾರಾದರೂ ಭಾಷಣ ಮಾಡಿದರೆ, ಅದನ್ನು ಎಐ ಟೂಲ್ ಮೂಲಕ ಸ್ಥಳೀಯ ಭಾಷೆಗಳಿಗೆ ತರ್ಜುಮೆಗೊಳಿಸಿ ಪ್ರಸ್ತುತಪಡಿಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು