Air India: ಹೊಸ ಬ್ರ್ಯಾಂಡ್ ಗುರುತಿನೊಂದಿಗೆ ಕಾರ್ಯಾಚರಿಸಲಿದೆ ಏರ್ ಇಂಡಿಯಾ

ಏರ್​ ಇಂಡಿಯಾವು ನವೀಕೃತ ವೆಬ್​​ಸೈಟ್ ಮತ್ತು ಮೊಬೈಲ್ ಆ್ಯಪ್​​ನೊಂದಿಗೆ ಹೊಸ ಬ್ರ್ಯಾಂಡ್​ ಗುರುತಿನಲ್ಲಿ ಕಾರ್ಯಾಚರಿಸಲಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಯಾಂಪ್​​ಬೆಲ್ ವಿಲ್ಸನ್ ತಿಳಿಸಿದ್ದಾರೆ.

Air India: ಹೊಸ ಬ್ರ್ಯಾಂಡ್ ಗುರುತಿನೊಂದಿಗೆ ಕಾರ್ಯಾಚರಿಸಲಿದೆ ಏರ್ ಇಂಡಿಯಾ
ಏರ್ ಇಂಡಿಯಾ
Follow us
| Updated By: ಗಣಪತಿ ಶರ್ಮ

Updated on:Dec 30, 2022 | 3:13 PM

ನವದೆಹಲಿ: ಏರ್​ ಇಂಡಿಯಾವು (Air India) ನವೀಕೃತ ವೆಬ್​​ಸೈಟ್ ಮತ್ತು ಮೊಬೈಲ್ ಆ್ಯಪ್​​ನೊಂದಿಗೆ ಹೊಸ ಬ್ರ್ಯಾಂಡ್​ ಗುರುತಿನಲ್ಲಿ ಕಾರ್ಯಾಚರಿಸಲಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಯಾಂಪ್​​ಬೆಲ್ ವಿಲ್ಸನ್ (Campbell Wilson) ತಿಳಿಸಿದ್ದಾರೆ. ವರ್ಷಾಂತ್ಯದ ಸಂದರ್ಭದಲ್ಲಿ ಕಂಪನಿಯ ಸಿಬ್ಬಂದಿಯನ್ನು ಉದ್ದೇಶಿಸಿ ಪ್ರಕಟಿಸಿದ ಟಿಪ್ಪಣಿಯಲ್ಲಿ ಅವರು ಈ ವಿಚಾರವನ್ನು ಉಲ್ಲೇಖಿಸಿದ್ದಾರೆ. ನಾವೀಗ ನಾಲ್ಕನೇ ತ್ರೈಮಾಸಿಕದ ಅಂತಿಮ ಹಂತದಲ್ಲಿದ್ದೇವೆ. ಸುಮಾರು ಒಂದು ವರ್ಷವೂ ಆಗಿದೆ. ನಮ್ಮ ರೂಪಾಂತರ ಯೋಜನೆಯ ಭಾಗವಾಗಿ ಸೆಪ್ಟೆಂಬರ್​ನಲ್ಲಿ ವಿಹಾನ್ ಎಐ (Vihaan.AI) ಉದ್ಘಾಟಿಸಿದ್ದೆವು. ನಮ್ಮ ಕಾರ್ಯಸೂಚಿಯ ಸುಮಾರು 22 ಅಂಶಗಳು ಪ್ರಗತಿಯ ವಿವಿಧ ಹಂತಗಳಲ್ಲಿವೆ. ಸಾಮೂಹಿಕ ಪ್ರಯತ್ನಗಳಿಗೆ ಧನ್ಯವಾದಗಳು. ನಾವು ಅಂದುಕೊಂಡಂತೆಯೇ ಮುನ್ನಡೆಯುತ್ತಿದ್ದೇವೆ ಎಂದು ಅವರು ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

‘ವಿಶ್ವದರ್ಜೆಯ ವಿಮಾನಯಾನ ಸಂಸ್ಥೆಯಾಗಿ ಬಹಳ ಎತ್ತರಕ್ಕೇರಲು ನಮಗೆ ಬಹಳ ಸಮಯ ಬೇಕಾಗಬಹುದು. ಆದರೆ, ನಾವು ಆ ನಿಟ್ಟಿನಲ್ಲಿ ಅತ್ಯದ್ಭುತವಾಗಿ ಕಾರ್ಯಾರಂಭ ಮಾಡಿದ್ದೇವೆ. ಈವರೆಗೆ ಏನು ಸಾಧಿಸಿದ್ದೇವೆಯೋ ಆ ಬಗ್ಗೆ ನೀವೆಲ್ಲ ಹೆಮ್ಮೆಪಡಬಹುದು’ ಎಂದು ಕ್ಯಾಂಪ್​​ಬೆಲ್ ವಿಲ್ಸನ್ ಹೇಳಿದ್ದಾರೆ.

ಇದನ್ನೂ ಓದಿ: Vihaan.AI: ಮುಂದಿನ ಐದು ವರ್ಷಗಳ ಯೋಜನೆಗಳನ್ನು ಅನಾವರಣಗೊಳಿಸಿದ ಏರ್​ಇಂಡಿಯಾ 

ಟಾಟಾ ಸಮೂಹದ ಒಡೆತನದಲ್ಲಿರುವ ಏರ್​ ಇಂಡಿಯಾದ ಸಿಇಒ ಆಗಿ ವಿಲ್ಸನ್ ಅವರು ಜುಲೈನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಐದು ವರ್ಷಗಳ ರೂಪಾಂತರ ಯೋಜನೆ ‘ವಿಹಾನ್’ ನೇತೃತ್ವ ವಹಿಸಿಕೊಂಡಿದ್ದಾರೆ. ಯೋಜನೆಯು ವಿಮಾನಯಾನ ಜಾಲ ವಿಸ್ತರಣೆ, ಗ್ರಾಹಕ ಸೇವೆಯಲ್ಲಿ ಸುಧಾರಣೆ, ಮಾರುಕಟ್ಟೆ ಪಾಲು ಹೆಚ್ಚಿಸುವುದು, ವಿಮಾನಯಾನ ಸಂಸ್ಥೆಯನ್ನು ಬೆಳವಣಿಗೆ, ಲಾಭದಾಯಕತೆ ಮತ್ತು ಮುಂಚೂಣಿಯಲ್ಲಿರುವಂತೆ ನೋಡಿಕೊಳ್ಳುವ ಉದ್ದೇಶವನ್ನು ಹೊಂದಿದೆ.

ಇತ್ತೀಚೆಗಷ್ಟೇ ಮೂರು ಹೊಸ ಮಾರ್ಗಗಳಲ್ಲಿ ಸಂಚರಿಸುವುದಾಗಿ ಘೋಷಿಸಿದ್ದ ವಿಮಾನಯಾನ ಸಂಸ್ಥೆಯು 36 ವಿಮಾನಗಳನ್ನು ಲೀಸ್​ಗೆ ನೀಡುವುದಾಗಿ ಹೇಳಿತ್ತು. ವಿಸ್ತರಣೆ ಕಾರ್ಯಾಚರಣೆಯ ಭಾಗವಾಗಿ 1,200 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿತ್ತು. ಹೊಸ ವಿಮಾನಗಳ ಖರೀದಿಗಾಗಿ ಏರ್​ಬಸ್ ಮತ್ತು ಬೋಯಿಂಗ್ ಜತೆ ಮಾತುಕೆ ನಡೆಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Fri, 30 December 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ