AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Discount Offers: ಕೇವಲ 1,705 ರೂ.ಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಕೇ? ಇಂದೇ ಟಿಕೆಟ್ ಕಾಯ್ದಿರಿಸಿ

ಏರ್ ಇಂಡಿಯಾ ಪತ್ರಿಕಾ ಪ್ರಕಟಣೆ ಪ್ರಕಾರ, ಕಂಪನಿಯ ಎಲ್ಲ ಬುಕಿಂಗ್​ ಪ್ಲಾಟ್​ಫಾರ್ಮ್​ಗಳಲ್ಲಿ ರಿಯಾಯಿತಿ ದರದ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿಮಾನಯಾನ ಕಂಪನಿಯ ಅಧಿಕೃತ ಏಜೆಂಟ್​ಗಳು, ಆನ್​​ಲೈನ್ ತಾಣಗಳ ಮೂಲಕವೂ ಕಾಯ್ದಿರಿಸಬಹುದಾಗಿದೆ.

Air India Discount Offers: ಕೇವಲ 1,705 ರೂ.ಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಕೇ? ಇಂದೇ ಟಿಕೆಟ್ ಕಾಯ್ದಿರಿಸಿ
ಏರ್ ಇಂಡಿಯಾ ವಿಮಾನ (ಸಂಗ್ರಹ ಚಿತ್ರ)
Ganapathi Sharma
|

Updated on:Jan 23, 2023 | 11:29 AM

Share

ಮುಂಬೈ: ಕಡಿಮೆ ದುಡ್ಡಿಗೆ ವಿಮಾನ ಪ್ರಯಾಣ ನಿಮ್ಮದಾಗಬೇಕೇ? ಹಾಗಿದ್ದರೆ ಇಂದೇ ಏರ್ ಇಂಡಿಯಾ (Air India) ವಿಮಾನ ಪ್ರಯಾಣದ ಟಿಕೆಟ್ ಖರೀದಿಸಿ. ದೇಶೀಯ ವಿಮಾನಯಾನ ಕಂಪನಿಯು ‘ಫ್ಲೈ ಏರ್ ಇಂಡಿಯಾ ಸೇಲ್ (FLYAI SALE)’ ಅಂಗವಾಗಿ ರಿಯಾಯಿತಿ ದರದಲ್ಲಿ (Discount Offer) ಟಿಕೆಟ್ ಸೌಲಭ್ಯವನ್ನು ಘೋಷಿಸಿದ್ದು, ಫೆಬ್ರವರಿ 1ರಿಂದ ಸೆಪ್ಟೆಂಬರ್ 30ರ ವರೆಗೆ ಪ್ರಯಾಣಿಸಲು ಅವಕಾಶವಿದೆ. ಆದರೆ, ಇಂದೇ (ಜನವರಿ 23) ಟಿಕೆಟ್ ಕಾಯ್ದಿರಿಸಬೇಕು. ಸೀಮಿತ ಆಸನಗಳಿಗೆ ಮಾತ್ರ ರಿಯಾಯಿತಿ ದರದ ಕೊಡುಗೆ ಲಭ್ಯವಿರಲಿದೆ. ಈ ವಿಚಾರವಾಗಿ ಏರ್ ಇಂಡಿಯಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಜನವರಿ 23ರ ಬೆಳಗ್ಗೆಯಿಂದ ರಾತ್ರಿವರೆಗೆ ಬುಕಿಂಗ್ ಮಾಡಬಹುದು ಎಂದು ಮಾಹಿತಿ ನೀಡಿದೆ. ಯಾವ ನಗರಗಳಿಗೆಲ್ಲ ರಿಯಾಯಿತಿ ದರದ ಸೌಲಭ್ಯವಿದೆ ಎಂಬುದನ್ನೂ ಪ್ರಕಟಣೆಯಲ್ಲಿ ವಿವರಿಸಲಾಗಿದೆ. ಒಂದು ಬಾರಿಯ ಪ್ರಯಾಣಕ್ಕೆ ಮಾತ್ರ ಈ ಕೊಡುಗೆ ಅನ್ವಯವಾಗಲಿದೆ.

ಬುಕಿಂಗ್ ಮಾಡುವುದು ಹೇಗೆ?

ಏರ್ ಇಂಡಿಯಾ ಪತ್ರಿಕಾ ಪ್ರಕಟಣೆ ಪ್ರಕಾರ, ಕಂಪನಿಯ ಎಲ್ಲ ಬುಕಿಂಗ್​ ಪ್ಲಾಟ್​ಫಾರ್ಮ್​ಗಳಲ್ಲಿ ರಿಯಾಯಿತಿ ದರದ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿಮಾನಯಾನ ಕಂಪನಿಯ ಅಧಿಕೃತ ಏಜೆಂಟ್​ಗಳು, ಆನ್​​ಲೈನ್ ತಾಣಗಳ ಮೂಲಕವೂ ಕಾಯ್ದಿರಿಸಬಹುದಾಗಿದೆ. ಈ ರಿಯಾಯಿತಿ ದರದ ಕೊಡುಗೆಯು ದೇಶೀಯ ಎಕಾನಮಿ ದರ್ಜೆಯ ಪ್ರಯಾಣಕ್ಕೆ ಮಾತ್ರ ಅನ್ವಯವಾಗಲಿದೆ. 1,705 ರೂ.ನಿಂದ ರಿಯಾಯಿತಿ ದರದ ಟಿಕೆಟ್ ಲಭ್ಯವಾಗಿದೆ. ದೇಶೀಯ 49 ನಿಲ್ದಾಣಗಳಿಗೆ ರಿಯಾಯಿತಿ ದರದಲ್ಲಿ ಟಿಕೆಟ್ ದೊರೆಯಲಿದೆ.

ಯಾವ ನಗರಗಳಿಗೆಲ್ಲ ರಿಯಾಯಿತಿ ದರದ ಟಿಕೆಟ್ ಲಭ್ಯ?

ದಿಮಾಪುರದಿಂದ ಗುವಾಹಟಿಗೆ 1,783 ರೂ, ದೆಹಲಿಯಿಂದ ಮುಂಬೈಗೆ 5,075 ರೂ, ಚೆನ್ನೈಯಿಂದ ದೆಹಲಿಗೆ 5,895 ರೂ, ಬೆಂಗಳೂರಿನಿಂದ ಮುಂಬೈಗೆ 2,319 ರೂ, ದೆಹಲಿಯಿಂದ ಉದಯಪುರಕ್ಕೆ 3,680 ರೂ, ದೆಹಲಿಯಿಂದ ಗೋವಾಕ್ಕೆ 5,656 ರೂ, ದೆಹಲಿಯಿಂದ ಪೋರ್ಟ್ ಬಿಹಾರಕ್ಕೆ 8,690 ರೂ, ದೆಹಲಿಯಿಂದ ಶ್ರೀನಗರಕ್ಕೆ 3,730 ರೂ, ಅಹಮದಾಬಾದ್​ನಿಂದ ಮುಂಬೈಗೆ 1,806 ರೂ, ಗೋವಾದಿಂದ ಮುಂಬೈಗೆ 2,830 ರೂ.ನಲ್ಲಿ ಪ್ರಯಾಣಿಸಬಹುದು ಎಂದು ಏರ್ ಇಂಡಿಯಾ ಪ್ರಕಟಣೆ ತಿಳಿಸಿದೆ.

ವಿಮಾನಯಾನ ಕ್ಷೇತ್ರವು ಕೋವಿಡ್ ಸಂಕಷ್ಟದಿಂದ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲೇ ಏರ್ ಇಂಡಿಯಾ ವಿಶೇಷ ರಿಯಾಯಿತಿ ದರದ ಕೊಡುಗೆ ಘೋಷಿಸಿದೆ. ಇತ್ತೀಚೆಗಷ್ಟೇ ಟಾಟಾ ಸಮೂಹವು ಏರ್​ ಇಂಡಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Mon, 23 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ