AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು; ನಿಮ್ಮ ಫ್ಲೈಟ್ ರದ್ದಾಗಿದ್ದರೆ ಸಿಗುತ್ತೆ ರೀಫಂಡ್

85 flights of Air India Express canceled: ಉದ್ಯೋಗಿಗಳ ಮುಷ್ಕರದ ಪರಿಣಾಮ ಸತತ ಎರಡನೇ ದಿನ ಏರ್ ಇಂಡಿಯಾ ಎಕ್ಸ್​ಪ್ರೆಸ್​ನ ವಿಮಾನ ಸೇವೆಯಲ್ಲಿ ವ್ಯತ್ಯಯವಾಗಿದೆ. ನಿನ್ನೆ ಮೇ 8ರಂದು ನೂರು ಫ್ಲೈಟ್​ಗಳು ರದ್ದಾಗಿದ್ದವು. ಇಂದು ಮೇ 9ರಂದು 85 ಫ್ಲೈಟ್​​ಗಳನ್ನು ನಿಲ್ಲಿಸಲಾಗಿದೆ. ಈ ಪರಿಸ್ಥಿತಿ ಇನ್ನಷ್ಟು ದಿನ ಮುಂದುವರಿಯುವ ನಿರೀಕ್ಷೆ ಇದೆ. 20 ಮಾರ್ಗಗಳಲ್ಲಿ ಏರ್ ಇಂಡಿಯಾದ ನೆರವು ಪಡೆಯಲಾಗುತ್ತಿದೆ ಎಂದು ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆ ತಿಳಿಸಿದೆ. ಪ್ರಯಾಣಿಕರು ಬುಕ್ ಮಾಡಿದ ಫ್ಲೈಟ್ ರದ್ದಾಗಿದ್ದರೆ ಟಿಕೆಟ್ ಹಣವನ್ನು ಯಾವುದೇ ಶುಲ್ಕವಿಲ್ಲದೇ ಪೂರ್ಣವಾಗಿ ರೀಫಂಡ್ ಮಾಡಲಾಗುತ್ತದೆ.

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು; ನಿಮ್ಮ ಫ್ಲೈಟ್ ರದ್ದಾಗಿದ್ದರೆ ಸಿಗುತ್ತೆ ರೀಫಂಡ್
ಏರ್ ಇಂಡಿಯಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 09, 2024 | 2:47 PM

Share

ನವದೆಹಲಿ, ಮೇ 9: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ (Air India Express) ಮ್ಯಾನೇಜ್ಮೆಂಟ್ ವರ್ಸಸ್ ಸಿಬ್ಬಂದಿ ಸಂಘರ್ಷದಲ್ಲಿ ಎರಡನೇ ದಿನವೂ ಹಲವು ಫ್ಲೈಟ್​ಗಳು ರದ್ದಾಗಿವೆ. ಏರ್ಲೈನ್ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ ಮೇ 9, ಇಂದು 85 ಫ್ಲೈಟ್​ಗಳು ರದ್ದಾಗಿವೆ. ನಿನ್ನೆ ಬುಧವಾರದಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 300 ಮಂದಿ ಉದ್ಯೋಗಿಗಳು ಹೇಳದೇ ಕೇಳದೇ ರಜೆ ಹಾಕಿ ಫೋನ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಅದರ ಪರಿಣಾಮವಾಗಿ ನಿನ್ನೆ ನೂರು ಫ್ಲೈಟ್ ರದ್ದಾಗಿದ್ದವು. ಇಂದೂ ಕೂಡ ಪರಿಸ್ಥಿತಿ ಮುಂದುವರಿದಿದೆ.

ರೀಫಂಡ್ ಸಿಗುತ್ತೆ ಭಯ ಪಡದಿರಿ ಎಂದ ಏರ್ಲೈನ್

ಒಂದು ವೇಳೆ ಫ್ಲೈಟ್ ರದ್ದಾಗಿದ್ದರೆ, ಅಥವಾ ಮೂರು ಗಂಟೆ ವಿಳಂಬವಾದರೆ ನಿಮ್ಮ ಟಿಕೆಟ್ ಹಣವನ್ನು ಸಂಪೂರ್ಣವಾಗಿ ರೀಫಂಡ್ ಮಾಡಬಹುದು. ಅಥವಾ ಬೇರೆ ದಿನಾಂಕಕ್ಕೆ ರೀಸ್ಕೆಡ್ಯೂಲ್ ಮಾಡಬಹುದು. ಇದಕ್ಕೆ ಯಾವ ಶುಲ್ಕ ಪಡೆಯಲಾಗುವುದಿಲ್ಲ. ಈ ಸೇವೆಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ವಾಟ್ಸಾಪ್ ಸಂಖ್ಯೆ (+91 6360012345) ನೀಡಿದೆ.

ವಿಮಾನ ನಿಲ್ದಾಣಕ್ಕೆ ಹೋಗುವ ಮುನ್ನ ಫ್ಲೈಟ್ ರದ್ದಾಗಿದೆಯಾ ಇಲ್ಲವಾ ಎಂಬುದನ್ನು ಪರಿಶೀಲಿಸಿ. ಅಲ್ಲಿಗೆ ಹೋಗಿ ಫ್ಲೈಟ್ ರದ್ದಾಗಿದ್ದರೆ ಸುಮ್ಮನೆ ಸಮಯ ವ್ಯಯವಾದಂತಾಗುತ್ತದೆ. ಫ್ಲೈಟ್ ರದ್ದಾಗಿದ್ದರೆ ಮೆಸೇಜ್ ಬರಬಹುದು. ಮೂರು ಗಂಟೆಗೂ ಹೆಚ್ಚು ಕಾಲ ಫ್ಲೈಟ್ ವಿಳಂಬವಾಗಿದ್ದಲ್ಲಿ ನಿಮಗೆ ಬೇಕೆಂದರೆ ಫ್ಲೈಟ್ ರದ್ದು ಮಾಡಿ ಪೂರ್ಣ ಹಣವನ್ನು ರೀಫಂಡ್ ಪಡೆಯಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಹುಷಾರಿಲ್ಲವೆಂದು ಏರ್ ಇಂಡಿಯಾದ 300 ಉದ್ಯೋಗಿಗಳ ಮೊಬೈಲ್ ಸ್ವಿಚ್ ಆಫ್; ಗಗನಸಖಿಯರು ಸೇರಿ 30 ಮಂದಿ ಲೇ ಆಫ್

ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆ ಸದ್ಯ 292 ಫ್ಲೈಟ್​ಗಳನ್ನು ಆಪರೇಟ್ ಮಾಡುತ್ತಿದೆ. ಅದರ ಮಾಲಕ ಸಂಸ್ಥೆಯಾದ ಏರ್ ಇಂಡಿಯಾ 20 ಮಾರ್ಗಗಳಲ್ಲಿ ಫ್ಲೈಟ್ ಸರ್ವಿಸ್ ಕೊಡಲಿದೆ.

ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್​ಪ್ರೆಸ್ ಎರಡೂ ಕೂಡ ಟಾಟಾ ಗ್ರೂಪ್ ಒಡೆತನದಲ್ಲಿವೆ. ಏರ್ ಇಂಡಿಯಾದ ಉಪಸಂಸ್ಥೆಯಾಗಿರುವ ಏರ್ ಇಂಡಿಯಾ ಎಕ್ಸ್​ಪ್ರೆಸ್ ಅಗ್ಗದ ದರದಲ್ಲಿ ವಿಮಾನ ಪ್ರಯಾಣ ಸೇವೆ ನೀಡುತ್ತದೆ. ಕೇರಳದಿಂದ ಇದರ ಸೇವೆ ಹೆಚ್ಚಿದೆ. ತಮಿಳುನಾಡು ಮತ್ತು ಕರ್ನಾಟಕದಿಂದಲೂ ಇದು ಫ್ಲೈಟ್ ಆಪರೇಟ್ ಮಾಡುತ್ತದೆ.

ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಅನ್ಯಾಯ ಆಗುತ್ತಿದೆ. ಸಿಬ್ಬಂದಿ ಮಧ್ಯೆ ತಾರತಮ್ಯತೆ ನಡೆಯುತ್ತಿದೆ. ಇವೇ ಮುಂತಾದ ಆರೋಪಗಳನ್ನು ಉದ್ಯೋಗಿಗಳು ಮಾಡುತ್ತಿದ್ದಾರೆ. ಈ ಕಾರಣಕ್ಕೆ ಪ್ರತಿಭಟನೆಯ ಕುರುಹಾಗಿ ಸುಮಾರು 300 ಮಂದಿ ಉದ್ಯೋಗಿಗಳು ಸಾಮೂಹಿಕವಾಗಿ ಸಿಕ್ ಲೀವ್ ಹಾಕಿದ್ದರು. ದಿಢೀರನೇ ಆದ ಈ ಬೆಳವಣಿಗೆ ಬಳಿಕ ಹಲವಾರು ಫ್ಲೈಟ್​ಗಳನ್ನು ರದ್ದುಗೊಳಿಸಬೇಕಾಯಿತು.

ಇದನ್ನೂ ಓದಿ: ಬಿಜೆಪಿಗೆ ಹೆಚ್ಚು ಸ್ಥಾನ ಬರೊಲ್ಲವೆಂದು ನಲುಗುತ್ತಿದೆಯಾ ಷೇರುಪೇಟೆ? ಸತತ ಕುಸಿತಕ್ಕೆ ಇಲ್ಲಿವೆ ಐದು ಕಾರಣಗಳು

ರಜೆ ಹಾಕಿದ ಉದ್ಯೋಗಿಗಳ ವಿರುದ್ದ ಮ್ಯಾನೇಜ್ಮೆಂಟ್ ಕ್ರಮ ತೆಗೆದುಕೊಳ್ಳುತ್ತಿದೆ. ಮೊದಲ ಹಂತವಾಗಿ 30 ಮಂದಿ ವಿಮಾನ ಕ್ಯಾಬಿನ್ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ